ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.
ಬೇವಿನ ಆರೋಗ್ಯಕರ ಲಾಭವೇನು?
ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.
ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.
ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.
ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.
ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….