ಆರೋಗ್ಯ

ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

110

ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ.

ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ ಒಳ್ಳೆದು ಎನ್ನಲಾಗುತ್ತೆ. ಅಷ್ಟೇ ಅಲ್ಲದೇ ಬೇವಿನ ಎಲೆಗಳನ್ನು ಅರೆದು ಅದನ್ನು ಗಾಯಗಳಿಗೆ ಹಚ್ಚಿದರೆ ಗಾಯ ಬೇಗನೇ ಮಾಗುತ್ತವೆ.

ಬೇವಿನ ಆರೋಗ್ಯಕರ ಲಾಭವೇನು?

ಲಿವರ್ ಸಮಸ್ಯೆಗೆ ಮದ್ದು:
ಬೇವಿನ ಎಲೆಗಳನ್ನು ಸೇವಿಸುವುದರಿಂದ ಲೀವರ್ ಕ್ಷಮತೆ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚುತ್ತದೆ. ಅಲ್ಲದೇ ರಕ್ತದಿಂದ ವಿಷಕಾರಿ ಅಂಶವನ್ನು ಹೊರಹಾಕಲು ನೆರವಾಗುತ್ತದೆ. ಜೊತೆಗೆ ಜೀರ್ಣ ಮತ್ತು ಶ್ವಾಸಕೋಶದ ವ್ಯವಸ್ಥೆಯನ್ನು ಇದು ಉತ್ತಮಗೊಳಿಸುತ್ತದೆ. ಅಲ್ಲದೇ ಬೇವಿನ ಎಣ್ಣೆ ಮತ್ತು ಬೇವಿನ ರಸಗಳನ್ನು ಸೇವಿಸುವುದರಿಂದ ದೇಹದಲ್ಲಿದ್ದ ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶವಾಗುತ್ತದೆ.

ಚರ್ಮದ ಸಮಸ್ಯೆಗೆ:
ಬೇವಿನ ಎಣ್ಣೆಯನ್ನು ಬಿಸಿ ನೀರಿನಲ್ಲಿ ಸೇರಿಸಿ ಸ್ನಾನ ಮಾಡುವುದರಿಂದ ವಿವಿಧ ಚರ್ಮರೋಗಗಳು, ತುರಿಕೆ, ಹುಳಕಡ್ಡಿ ಮೊದಲಾದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಶೀತ ಮತ್ತು ಎಕ್ಸಿಮಾದಂತಹ ಚರ್ಮರೋಗವೂ ಕೂಡ ಇದರಿಂದ ವಾಸಿಯಾಗುತ್ತದೆ.

ತ್ವಚೆಯ ಕಲೆ ನಿವಾರಿಸುತ್ತದೆ:
ಗಾಯ ಮತ್ತು ಮೊಡವೆಗಳು ಮಾಗಿದ ಬಳಿಕ ಚರ್ಮದ ಮೇಲೆ ಕಲೆಗಳು ಉಳಿದು ಬಿಡುತ್ತದೆ. ಈ ಕಲೆಗಳನ್ನು ನಿವಾರಿಸಲು ಬೇವು ಸಹಕಾರಿಯಾಗಿದ್ದು, ಮುಖದಲ್ಲಿ ಮತ್ತೆ ಮೊಡವೆಗಳು ಆಗದಂತೆ ತಡೆಯುತ್ತದೆ.

ಚಿಕ್ಕಪುಟ್ಟ ಗಾಯಗಳಾದರೆ ಬೇವಿನ ಎಲೆಗಳ ರಸ ಅಥವಾ ಎಲೆಗಳನ್ನು ಅರೆದ ಹಚ್ಚಿದರೆ ಗಾಯಗಳು ಬೇಗ ಮಾಗುತ್ತದೆ. ಅಲ್ಲದೆ ಮೊಡವೆಗಳನ್ನು ನಿಯಂತ್ರಿಸಲು ನಿತ್ಯವೂ ಸ್ನಾನ ಮಾಡುವ ನೀರಿಗೆ ಬೇವಿನ ಎಣ್ಣೆಯ ಕೆಲವು ಹನಿಗಳನ್ನು ಸೇರಿಸಿದರೆ ತ್ವಚೆಯ ದುರ್ಗಂಧ, ಸೋಂಕುಗಳು ನಿವಾರಣೆಯಾಗುತ್ತದೆ ಹಾಗೂ ಚರ್ಮದಲ್ಲಿ ದದ್ದು, ಮೊಡವೆಗಳು ಆಗದಂತೆ ಇದು ನೋಡಿಕೊಳ್ಳುತ್ತದೆ.

ಮುಖದ ಕಾಂತಿ ಹೆಚ್ಚಿಸುತ್ತದೆ:
ಬೇವಿನ ಎಲೆಗಳನ್ನು ಹಾಕಿ ಕುದಿಸಿದ ನೀರಿನಲ್ಲಿ ಅದ್ದಿದ ಬಟ್ಟೆಯನ್ನು ಇಡೀ ರಾತ್ರಿ ಮುಖದ ಮೇಲೆ ಇಟ್ಟುಕೊಂಡು ಮಲಗಿದರೆ ಮುಖದ ಕಾಂತಿ ಹೆಚ್ಚಾಗುತ್ತೆ. ಹಾಗೆಯೇ ಈ ನೀರನ್ನು ತಲೆಗೆ ಹಚ್ಚಿ ಸ್ನಾನ ಮಾಡಿದರೆ ಕೂಡಲು ಉದುರುವಿಕೆ, ತಲೆಹೊಟ್ಟಿನ ಸಮಸ್ಯೆ ನಿವಾರಣೆ ಆಗುತ್ತದೆ.

ರಕ್ತ ಶುದ್ಧೀಕರಣಗೊಳಿಸುತ್ತೆ:
ಬೇವನ್ನು ತಿಂದರೆ ರಕ್ತ ಶುದ್ಧೀಕರಣಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರ ಹಾಕಿ, ರಕ್ತಸಂಚಾರ ಉತ್ತಮಗೊಳ್ಳುತ್ತದೆ. ವೃದ್ಧಾಪ್ಯ ಬೇಗನೇ ಆವರಿಸಲು ಕಾರಣವಾಗುವ free radical ಎಂಬ ಕಣಗಳನ್ನು ಬೇವು ಕೊಲ್ಲುವುದರಿಂದ ತಾರುಣ್ಯ ಬಹುಕಾಲ ಉಳಿಯುತ್ತದೆ. ಅಲ್ಲದೇ ಬೇವನ್ನು ಸೇರಿಸಿದರೆ ರಕ್ತನಾಳಗಳಲ್ಲಿ ಸಂಗ್ರಹವಾಗಿದ್ದ ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆಯಾಗಿ, ದೇಹದಲ್ಲಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಬೀಳುವ ಒತ್ತಡ ಕಡಿಮೆಯಾಗುತ್ತದೆ.

ಮಲೇರಿಯಾ ಜ್ವರಕ್ಕೆ:
ಬೇವಿನಲ್ಲಿರುವ ಜೆಡ್ಯುನಿನ್ (Gedunin) ಎಂಬ ರಾಸಾಯನಿಕ ಮಲೇರಿಯಾ ಜ್ವರವನ್ನು ಕಡಿಮೆಗೊಳಿಸಲು ನೆರವಾಗುತ್ತದೆ. ಬೇವಿನ ಎಲೆಗಳನ್ನು ಜಜ್ಜಿ ಮನೆಯ ಸುತ್ತ ಮುತ್ತ ಹರಡುವುದರಿಂದ ಆ ವಾಸನೆಗೆ ಸೊಳ್ಳೆಗಳು ಕಡಿಮೆ ಆಗುತ್ತದೆ. ಅಲ್ಲದೆ ಬೇವಿನ ಎಲೆಗಳನ್ನು ತಿಂದರೆ ಅಥವಾ ಅದರ ರಸವನ್ನು ಕುಡಿದರೆ ಮಲೇರಿಯಾ ಜ್ವರ ಕಡಿಮೆ ಆಗುತ್ತದೆ.

ಕ್ಯಾನ್ಸರ್ ನಿಯಂತ್ರಿಸಲು:
ನಿಯಮಿತವಾಗಿ ಬೇವಿನ ಎಲೆಗಳನ್ನು ಹಸಿಯಾಗಿ ಸೇವಿಸುವವರಲ್ಲಿ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಳ್ಳು ಸಾಧ್ಯತೆ ಕಡಿಮೆ. ಬೇವಿನ ಮರದ ತೊಗಟೆಯಲ್ಲಿ ಕಂಡುಬರುವ Limonoids ಮತ್ತು polysaccharides ಎಂಬ ರಾಸಾಯನಿಕಗಳು ದೇಹದಲ್ಲಿ ಕ್ಯಾನ್ಸರ್ ಮತ್ತು ಗಡ್ಡೆಯುಂಟಾಗುವುದನ್ನು ತಡೆಯುತ್ತದೆ.

ಬೇವಿನ ಎಣ್ಣೆಯ ಮಸಾಜ್:
ಬೇವಿನ ಎಣ್ಣೆ ಚರ್ಮಕ್ಕೆ ಒಳ್ಳೆದು. ಈ ಎಣ್ಣೆಯಲ್ಲಿ ಮೈಯನ್ನು ಮಸಾಜ್ ಮಾಡುವುದರಿಂದ ಕೆಳಬೆನ್ನಿನ ನೋವು, ಸಂಧಿವಾತ, ಸ್ನಾಯುಗಳಲ್ಲಿ ನೋವು ಹೀಗೆ ವಿವಿಧ ನೋವುಗಳು ಕಡಿಮೆಯಾಗುತ್ತವೆ.

ಸಂಧಿವಾತಕ್ಕೆ:
ಸಂಧಿವಾತ ಸಮಸ್ಯೆಗೆ ಬೇವಿನ ಎಲೆ ಮತ್ತು ಬೇವಿನ ತೊಗಟೆಯನ್ನು ಅರೆದು ತಯಾರಿಸಿದ ಲೇಪನ ಉತ್ತಮ ಪರಿಹಾರ ನೀಡುತ್ತದೆ. ಇದರಿಂದ ಸಂದುಗಳಲ್ಲಿ ಬಾವು, ನೋವು ಕೂಡ ಕಡಿಮೆಯಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಭವಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಮ್ಮನೆ ಯಾವುದೋ ಒಂದು ಕೆಲಸ ಮಾಡಿಕೊಂಡು ಹೋಗುವುದಕ್ಕಿಂತ ನಿರ್ದಿಷ್ಟ ಗುರಿ ಇಟ್ಟುಕೊಂಡು ಕೆಲಸ ಮಾಡಿದರೆ ಒಳ್ಳೆಯದು. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಾರ್ಯಗಳಲ್ಲೂ ಸೋಲು ಅನುಭವಿಸುತ್ತಿರುವ ನಿಮಗೆ ಜೀವನದಲ್ಲಿ ನಂಬಿಕೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ಇದ್ರಲ್ಲಿ ನಿಮ್ಮ ರಾಶಿಗಳು ಇವೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…