ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.

ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.

ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.

ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.

ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.

ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…