ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು ಸಿಗುವಂತೆ ಜಲಧಾರೆಯನ್ನ ಸೃಷ್ಟಿ ಮಾಡಿದ್ದಾನೆ. ಇನ್ನು ಈ ರೈತ ಮಾಡಿದ ಪ್ರಯೋಗವನ್ನ ನೋಡಲು ದೇಶ ವಿದೇಶಗಳಿಂದ ಜನರು ಹರಿದು ಬರುತ್ತಿದ್ದಾರೆ,

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕುಳ್ಳೂರು ಗ್ರಾಮದ ಶಂಕರ್ ಅನುವ ರೈತ ತನಗಿದ್ದ ಸ್ವಲ್ಪ ಮಟ್ಟದ ಜಮೀನಿನಲ್ಲಿ ವ್ಯವಸಾಯ ಮಾಡುವ ಅನ್ನುವ ಸಲುವಾಗಿ ತನ್ನ ಜಮೀನಿನಲ್ಲಿ ಒಂದು ಬೋರ್ ವೆಲ್ ತೊಡಿಸಿದನು. ಆರಂಭದಲ್ಲಿ ಆತ ತೊಡಿಸಿದ ಬೋರ್ ವೆಲ್ ನಲ್ಲಿ ಸುಮಾರು ಎರಡು ಇಂಚು ನೀರು ಬರುತ್ತಿತ್ತು, ಆದರೆ ದಿನಗಳು ಉರುಳಿದ ನಂತರ ನೀರಿನ ಮಟ್ಟ ಕಡಿಮೆ ಆಗಿ ಇರುವ ಸ್ವಲ್ಪ ಜಮೀನಿಗೂ ಜೀರು ಸಾಕಾಗುತ್ತಿರಲಿಲ್ಲ. ಮುಂದೆ ಹೀಗೆ ಆದರೆ ವ್ಯವಸಾಯಕ್ಕೆ ಕಷ್ಟ ಆಗುತ್ತದೆ ಎಂದು ಅರಿತ ಶಂಕರ್ ಕೃಷಿ ಅಧಿಕಾರಿಗಳ ಬಳಿ ಮಾತನಾಡಿ ಒಂದು ಮಾಹಿತಿ ತಿಳಿದುಕೊಂಡು ಪ್ರಯೋಗಕ್ಕೆ ಮುಂದಾದರು.

ಇನ್ನು ಆ ಪ್ರಯೋಗದ ಪ್ರಕಾರ ತಾನು ತೊಡಿಸಿದ ಬೋರ್ ವೆಲ್ ಪಕ್ಕದಲ್ಲಿ ಎರಡು ಮೀಟರ್ ಅಗಲ ಮತ್ತು ಎರಡು ಮೀಟರ್ ಉದ್ದ ಮತ್ತು ಎರಡು ಮೀಟರ್ ಆಳವಾದ ಎರಡು ಇಂಗು ಗುಂಡಿಗಳನ್ನ ನಿರ್ಮಾಣ ಮಾಡಿದ ರೈತ ಶಂಕರ್ ಮೂರೂ ಫೀಟ್ ತನಕ ಮರಳು, ಇದ್ದಿಲು ಹಾಗು ದಪ್ಪದಾದ ಜಲ್ಲಿ ಕಲ್ಲುಗಳನ್ನ ತುಂಬಿಸಿದರು. ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗುವ ನೀರನ್ನ ಮತ್ತು ಹೊಲದ ಸುತ್ತಮುತ್ತ ಶೇಖರಣೆ ಆಗುವ ನೀರನ್ನ ಈ ಇಂಗು ಗುಡಿಗೆ ಜೋಡಿಸಿ ನೀರನ್ನ ಇಂಗಿಸುತ್ತಿದ್ದಾರೆ ಶಂಕರ್. ಇನ್ನು ಇದರ ಪ್ರತಿಫಲವಾಗಿ ಬೇಸಿಗೆಯಲ್ಲಿ ಸರಿಯಾಗಿ ಎರಡು ಇಂಚು ನೀರು ಬಾರದ ಬೋರ್ ವೆಲ್ ನಲ್ಲಿ ಸುಮಾರು ನಾಲ್ಕು ಇಂಚು ನೀರು ಬರುತ್ತಿದೆ ಮತ್ತು ಅಷ್ಟೇ ಅಲ್ಲದೆ ವರ್ಷದ ಪೂರ್ತಿ ಬೋರ್ ವೆಲ್ ನಿಂದ ಬರುತ್ತಿದೆ.

ಇನ್ನು ಅವರು ನಿರ್ಮಾಣ ಮಾಡಿದ ಇಂಗು ಗುಂಡಿಯಲ್ಲಿ ವರ್ಷಕ್ಕೆ ಸುಮಾರು 90 ಲೀಟರ್ ಗಿಂತ ಹೆಚ್ಚಿನ ನೀರನ್ನ ಇಂಗಿಸಲಾಗುತ್ತಿದ್ದು ನೀರಿನ ಅಭಾವ ಇಲ್ಲದೆ ವರ್ಷಕ್ಕೆ ಮೂರೂ ಬೆಲೆ ತೆಗೆಯುತ್ತಿದ್ದಾರೆ ಶಂಕರ್. ಎಲ್ಲರೂ ಹೊಸ ಹೊಸ ತಂತ್ರಜ್ಞಾನದ ಹಿಂದೆ ಬಿದ್ದಿರುವ ಈ ಸಮಯದಲ್ಲಿ ಶಂಕರ್ ಅವರ ಈ ಹೊಸ ಪ್ರಯೋಗದ ಬಗ್ಗೆ ತಿಳಿದುಕೊಳ್ಳಲು ಆಸ್ಟ್ರೇಲಿಯಾ, ಕೆನಡಾ, ಇಸ್ರೇಲ್ ಸೇರಿದಂತೆ ಏಳು ದೇಶದ ರೈತ ಪ್ರತಿನಿಧಿಗಳು ಶಂಕರ್ ಅವರ ತೋಟಕ್ಕೆ ಭೇಟಿನೀಡಿ ಮಾಹಿತಿಯನ್ನ ಪಡೆದುಕೊಳ್ಳುತ್ತಿದ್ದಾರೆ. ಶಂಕರ್ ಮಾಡಿದ ಈ ಒಂದು ಪ್ರಯೋಗ ಶಂಕರ್ ಅವರ ಜೀವನವನ್ನೇ ಬದಲಾಯಿಸಿತು ಎಂದು ಹೇಳಿದರೆ ತಪ್ಪಾಗಲ್ಲ, ತನಗಿರುವ ಅಲ್ಪ ಜಮೀನಿನಲ್ಲಿ ನಾನಾರೀತಿಯ ಬೇಳೆಯನ್ನ ಬೆಳೆಯುತ್ತ ವಿಶ್ವ ಮಟ್ಟದಲ್ಲಿ ಜನರನ್ನ ತನ್ನತ್ತ ಆಕರ್ಷಣೆ ಮಾಡುತ್ತಿದ್ದಾರೆ ಶಂಕರ್.
ಇನ್ನು ಉತ್ತರ ಕರ್ನಾಟಕದಲ್ಲಿ ಹಲವಾರು NGO ಗಳು ಈ ವಿಷಯದಲ್ಲಿ ರೈತನಿಗೆ ಸಹಾಯ ಮಾಡುತ್ತಿದೆ, ನೀರಿಲ್ಲ ಎಂದು ವ್ಯವಸಾಹಯವನ್ನ ತೊರೆಯುದಕ್ಕಿಂತ ಇರುವ ಸಂಪನ್ಮೂಲಗಳನ್ನ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭೂತಾಯಿ ಯಾವತ್ತೂ ನಮ್ಮ ಕೈಬಿಡಲ್ಲ ಅನ್ನುವುದಕ್ಕೆ ಉತ್ತಮ ಉದಾಹರಣೆ ಇದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ಐತಿಹಾಸಿಕ ಬೆಂಗಳೂರು ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿ ಉಳಿಸಿಕೊಳ್ಳುವ ಪ್ರಯತ್ನಗಳು ಇತ್ತೀಚಿಗೆ ಹೆಚ್ಚುತ್ತಿದ್ದು ಇಂತಹುದೇ ಅಭಿಯಾನವೊಂದರ ಭಾಗವಾಗಿ ಯುವಬ್ರಿಗೇಡ್ ಕೆಂಪೇಗೌಡ ನಗರಿಯ ಐತಿಹಾಸಿಕ ವೃಷಭಾವತಿ ನದಿ ಉಳಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. ಯುವಬ್ರಿಗೇಡ್ ನ ಈ ಪ್ರಯತ್ನ ಕ್ಕೆ ಗೋಲ್ಡನ್ ಸ್ಟಾರ್ ಗಣೇಶ ಕೈಜೋಡಿಸಿದ್ದು, ಇದೇ ಸಪ್ಟೆಂಬರ್ ೨೨ ರಂದು ಭಾನುವಾರ ನಡೆಯುವ ಮ್ಯಾರಥಾನ್ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಪ್ಟೆಂಬರ್ ೨೨ ರಂದು ಭಾನುವಾರ, ವೃಷಭಾವತಿ ಸ್ವಚ್ಛತೆ ಗಾಗಿ ಕೆಂಗೇರಿ ಗಣಪತಿ ದೇವಾಲಯದಿಂದ ಬೆಂಗಳೂರು ವಿವಿವರೆಗೆ ಮ್ಯಾರಥಾನ್ ನಡೆಯಲಿದೆ….
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..