ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…