ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:
ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.
ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.
ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…