News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Health

ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

192

ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.

ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.

ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್‍ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.

ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.

ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.

ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ವಿಶೇಷ ಲೇಖನ

    ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

    ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

  • ಕ್ರೀಡೆ

    ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

    ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್‌ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.  

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ಆಧ್ಯಾತ್ಮ

    ದೇವಸ್ಥಾನದಲ್ಲಿ ದೇವರಿಗೆ ಅರ್ಚನೆ ದೇವರ ಪೂಜೆ ಮಾಡುವ ಉದ್ದೇಶ ಏನು ತಿಳಿಯಬೇಕೆ ಇದನ್ನು ಪೂರ್ಣವಾಗಿ ನೋಡಿ…

    ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…