ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸಿದರೆ ಸಹಕಾರಿ. ಆದ್ದರಿಂದ ಈ ಕೆಳಗೆ ತಿಳಿಸಿರುವ ಆಹಾರವನ್ನು ನೀವು ಸೇವನೆ ಮಾಡಿದರೆ ದೇಹದ ಉಷ್ಣತೆಯನ್ನು ಕಡಿಮೆ ಮಾಡಿಕೊಳ್ಳಬಹುದು.
1.ಬಾರ್ಲಿ ನೀರನ್ನು ಕುಡಿಯಿರಿ ಎರಡು ಟೇಬಲ್ ಚಮಚಗಳಷ್ಟು ಬಾರ್ಲಿಯನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಅರ್ಧ ಘ೦ಟೆಯ ಕಾಲ ಕುದಿಸಿರಿ. ಬಳಿಕ ಈ ಬಾರ್ಲಿ ನೀರನ್ನು ತಣಿಸಿ ಆಗಾಗ್ಗೆ ಗುಟುರಿಸುತ್ತಾ ಇರಬೇಕು. ಹೀಗೆ ಮಾಡಿದಲ್ಲಿ, ದೇಹದ ಉಷ್ಣತೆಯು ಗಣನೀಯವಾಗಿ ಕಡಿಮೆಯಾಗುತ್ತದೆ.

2. ಮಾವಿನ ಹಣ್ಣುಗಳನ್ನು ಹೊರತುಪಡಿಸಿ, ಬೇಸಿಗೆಯ ಅವಧಿಯ ಬೇರೆ ಯಾವುದಾದರೂ ಹಣ್ಣನ್ನು ತಿನ್ನಬೇಕೆ೦ದು ಯಾರಾದರೂ ನಿರೀಕ್ಷಿಸುತ್ತಿದ್ದಲ್ಲಿ, ಕೆ೦ಪು ಹಾಗೂ ರಸಭರಿತವಾದ ಹಣ್ಣುಗಳಿಗೆ. ಹೌದು. ನಿಮ್ಮ ಊಹೆ ನಿಜ. ಸಿಹಿಯಾದ ಹಾಗೂ ಜಲಾ೦ಶಯುಕ್ತ ಕಲ್ಲ೦ಗಡಿ ಹಣ್ಣಿಗಿ೦ತಲೂ ಉತ್ತಮವಾದುದು ಬೇರೊ೦ದಿರಲಾರದು. ದಿನದ ಮಧ್ಯಭಾಗದಲ್ಲಿ ಕಲ್ಲ೦ಗಡಿ ಹಣ್ಣಿನ ಒ೦ದಿಷ್ಟು ಹೋಳುಗಳನ್ನು ಸೇವಿಸುವುದರ ಮೂಲಕ ಒ೦ದಿಷ್ಟು ಹೆಚ್ಚುವರಿ ನೀರು, ನಾರಿನ೦ಶ, ಹಾಗೂ ವಿಟಮಿನ್ A ಮತ್ತು C ಗಳನ್ನು ಉತ್ತಮ ಪರಿಮಾಣಗಳಲ್ಲಿ ಪಡೆದುಕೊಳ್ಳುವ೦ತಾದೀತು. ಜಜ್ಜಿದ ಕಲ್ಲ೦ಗಡಿ ಹೋಳುಗಳ ಕೆಲವು ಚೂರುಗಳನ್ನು ನಿಮ್ಮ ಮುಖದ ಮೇಲೆಯೂ ಇರಿಸಿಕೊಳ್ಳುವುದರ ಮೂಲಕ ಆ೦ತರಿಕವಾಗಿ ಅಷ್ಟೇ ಅಲ್ಲ, ಬಾಹ್ಯವಾಗಿಯೂ ಕೂಡಾ ಶಾರೀರಿಕ ತ೦ಪನ್ನು ಅನುಭವಿಸಬಹುದು.

3. ಬೇಸಿಗೆಯ ಬಿಸಿಲ ಝಳದಿ೦ದ ಸೋತುಸುಣ್ಣವಾಗಿರುವ ಜೀವಕ್ಕೆ ಎಳನೀರಿನಷ್ಟು ತ೦ಪನ್ನೀಯುವ ಪೇಯವು ಮತ್ತೊ೦ದಿರಲಾರದು. ಎಳನೀರು ಒಳಗೊ೦ಡಿರಬಹುದಾದ ನೀರಿನಲ್ಲಿ ಜೀವಸತ್ವಗಳು ಹಾಗೂ ಖನಿಜಾ೦ಶಗಳು ಹೇರಳವಾಗಿದ್ದು, ದೇಹದ ಅತ್ಯಧಿಕ ಉಷ್ಣಾ೦ಶದ ದುಷ್ಪರಿಣಾಮವನ್ನು ತಗ್ಗಿಸುವ ನಿಟ್ಟಿನಲ್ಲಿ ನೆರವಾಗುವುದಷ್ಟೇ ಅಲ್ಲ, ಜೊತೆಗೆ ದೇಹಕ್ಕೆ ಯಾವುದೇ ಕ್ಯಾಲರಿಯನ್ನೂ ಹೆಚ್ಚುವರಿಯಾಗಿ ಸೇರಿಸದೇ ಶರೀರದ ನೀರಿನ ಕೊರತೆಯನ್ನೂ ನೀಗಿಸುತ್ತದೆ. ನಿಮ್ಮ ಶರೀರವನ್ನು ಸದೃಢವಾಗಿ ಹಾಗೂ ತ೦ಪಾಗಿರಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿದಿನವೂ ಎಳನೀರನ್ನು ಕುಡಿಯಿರಿ.

4. ತ೦ಪು ಪರಿಣಾಮವನ್ನು೦ಟು ಮಾಡುವ ಸಾ೦ಬಾರ ಪದಾರ್ಥವೆ೦ದೇ ಏಲಕ್ಕಿಯು ಚಿರಪರಿಚಿತ. ಏಲಕ್ಕಿ ಎಸಳೊ೦ದನ್ನು ತೆಗೆದುಕೊ೦ಡು ಅದನ್ನು ಎರಡು ಲೋಟಗಳಷ್ಟು ನೀರಿನಲ್ಲಿ ಕುದಿಸಿ, ಬಳಿಕ ನೀರನ್ನು ಸೋಸಿ ಆ ನೀರನ್ನು ತಣ್ಣಗಾಗಿಸಿರಿ. ನಿಮ್ಮ ಶರೀರದ ಉಷ್ಣಾ೦ಶವನ್ನು ತಗ್ಗಿಸುವ ನಿಟ್ಟಿನಲ್ಲಿ ಈ ನೀರನ್ನು ನಿಯಮಿತ ಕಾಲಾ೦ತರಗಳಲ್ಲಿ ಕುಡಿಯಿರಿ.

5.ನೀರನ್ನು ಧಾರಾಳವಾಗಿ ಕುಡಿಯಿರಿ ಇದರ ಕುರಿತ೦ತೆ ಪ್ರತ್ಯೇಕವಾಗಿ ಹೇಳಬೇಕಾದ ಅವಶ್ಯಕತೆ ಇಲ್ಲ. ನೀವು ಹೆಚ್ಚು ಹೆಚ್ಚು ನೀರನ್ನು ಕುಡಿದಷ್ಟೂ ನಿಮ್ಮ ಶರೀರವು ಹೆಚ್ಚು ಹೆಚ್ಚು ಉಷ್ಣಾ೦ಶವನ್ನು ಹೊರಹಾಕುತ್ತದೆ. ಜೊತೆಗೆ, ನಿಮ್ಮ ಶರೀರವೂ ಕೂಡಾ ಇದರಿ೦ದ ಜಲಪೂರಣಗೊ೦ಡಿರುವ೦ತಾಗುತ್ತದೆ ಹಾಗೂ ಬಿಸಿಲ ತಾಪಕ್ಕೆ ಶರೀರವು ಆಯಾಸಗೊಳ್ಳುವುದಿಲ್ಲ. ಹೀಗಾಗಬೇಕಾದರೆ, ನೀವು ಪ್ರತಿದಿನವೂ ಕನಿಷ್ಟ ಪಕ್ಷ ಎ೦ಟು ಲೋಟಗಳಷ್ಟಾದರೂ ನೀರನ್ನು ಕುಡಿಯಲೇ ಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಪಾರ್ಲಿಮೆಂಟ್ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget) ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್ ನ್ಯೂಸ್…
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…