ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು.

ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ ನಿಂಬೆ ಸಿಪ್ಪೆಯನ್ನು ಬಿಸಾಡಬೇಡಿ ಇದನ್ನು ಬಳಸಿಕೊಳ್ಳಿ ಇದರಿಂದ ಹಲವು ಪ್ರಯೋಜನಗಳಿವೆ ಅವುಗಳನ್ನು ತಿಳಿಯೋಣ ಬನ್ನಿ.
ಕ್ಯಾನ್ಸರ್ ನಿಂದ ತಡೆಗಟ್ಟುತ್ತದೆ: ಕ್ಯಾನ್ಸರ್ ನಿಂದ ತಡೆಗಟ್ಟಲು ಹಾಗೂ ಕ್ಯಾನ್ಸರ್ ಗೆ ಚಿಕಿತ್ಸೆಯಾಗಿ ಲಿಂಬೆಸಿಪ್ಪೆಯನ್ನು ಬಳಸಲಾಗುತ್ತಿದೆ. ಲಿಂಬೆಸಿಪ್ಪೆ ಕ್ಯಾನ್ಸರ್ ಪೀಡಿತ ಜೀವಕೋಶಗಳ ವಿರುದ್ದ ಹೋರಾಡುವ ಶಕ್ತಿಯಿದೆ. ಒಂದು ಅಧ್ಯಯನ ಪ್ರಕಾರ ಕ್ಯಾನ್ಸರ್ ಪೀಡಿತ ಜೀವಕೋಶಗಳಿರುವ ವ್ಯಕ್ತಿಗಳು ಲಿಂಬೆಸಿಪ್ಪೆಯನ್ನು ಸೇವಿಸುವ ಮೂಲಕ ಇವುಗಳು ಅಭಿವೃದ್ದಿಯಾಗುವುದನ್ನು ತಡೆಗಟ್ಟಿವೆ. ಕ್ಯಾನ್ಸರ್ ಪೀಡಿತ ಜೀವಕೋಶಗಳು ಆಮ್ಲೀಯ ವಾತಾವರಣದಲ್ಲಿ ಶೀಘ್ರವಾಗಿ ಅಭಿವೃದ್ದಿ ಹೊಂದುತ್ತವೆ.

ಮೂಳೆಗಳ ಆರೋಗ್ಯ : ಲಿಂಬೆ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಕ್ಯಾಲ್ಸಿಯಂ ಉತ್ತಮ ಪ್ರಮಾಣದಲ್ಲಿವೆ. ಇವು ಮೂಳೆಗಳ ಆರೋಗ್ಯ ಉತ್ತಮಗೊಳಿಸುತ್ತವೆ ಹಾಗೂ ಮೂಳೆಗಳಿಗೆ ಸಂಬಂಧಿಸಿದ ಕಾಯಿಲೆಗಳ ಚಿಕಿತ್ಸೆಗೂ ನೆರವಾಗುತ್ತವೆ. ವಿಶೇಷವಾಗಿ ಉರಿಯೂತದ ಸಂಧಿವಾತ (inflammatory polyarthritis) ಮೂಳೆಗಳಲ್ಲಿ ಗಾಳಿಗುಳ್ಳೆಗಳು ತುಂಬಿಕೊಳ್ಳುವ ಓಸ್ಟಿಯೋಪೋರೋಸಿಸ್, ಮತ್ತು ರ್ಹೂಮಟಾಯ್ಡ್ ಸಂಧಿವಾತ ಮೊದಲಾದ ತೊಂದರೆಗಳ ಚಿಕಿತ್ಸೆಗೆ ನೆರವಾಗುತ್ತವೆ.
ತೂಕ ಇಳಿಕೆ : ಲಿಂಬೆ ಸಿಪ್ಪೆಯ ಸೇವನೆಯಿಂದ ತೂಕ ಇಳಿಕೆಯ ಪ್ರಯತ್ನಗಳಿಗೆ ಹೆಚ್ಚಿನ ಬೆಂಬಲ ನೀಡುತ್ತದೆ. ಇದರಲ್ಲಿರುವ ಪೆಕ್ಟಿನ್ ಎಂಬ ಪೋಷಕಾಂಶ ಜೀರ್ಣಗೊಳ್ಳಲು ಹೆಚ್ಚಿನ ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ಕೊಬ್ಬನ್ನು ಕರಗಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಲಿಂಬೆಸಿಪ್ಪೆಯನ್ನು ಸೇವಿಸುವ ವಿಧಾನ
ಲಿಂಬೆರಸವನ್ನು ಹಿಂಡುವ ಮುನ್ನ ಸಿಪ್ಪೆಯನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಬಳಿಕ ಕತ್ತರಿಸಿ ಹಿಂಡಿ ಸಿಪ್ಪೆಯನ್ನು ಪ್ರತ್ಯೇಕಿಸಿಟ್ಟುಕೊಳ್ಳಿ. ಬಳಿಕ ಇವನ್ನು ಅತಿ ಚಿಕ್ಕದಾದ ಚೂರುಗಳನ್ನಾಗಿಸಿ ಎಲ್ಲೆಲ್ಲಿ ಹುಳಿ ಅಗತ್ಯವಿದೆಯೋ ಅಲ್ಲಿ ಈ ತುಂಡುಗಳನ್ನು ಬಳಸಬಹುದು. ಇನ್ನೊಂದು ವಿಧಾನದಲ್ಲಿ ಕೊಂಚ ನೀರಿನಲ್ಲಿ ಲಿಂಬೆಯ ಸಿಪ್ಪೆಗಳನ್ನು ಬೇಯಿಸಿ ಕೊಂಚವೇ ಸಕ್ಕರೆ ಬೆರೆಸಿ ಪಾಕವನ್ನಾಗಿಸಿ. ಇದು ತಣಿದ ಬಳಿಕ ಇದನ್ನು ನೇರವಾಗಿ ಸೇವಿಸಬಹುದು. ಇನ್ನೊಂದು ವಿಧಾನದಲ್ಲಿ, ಟೀ ಕುದಿಸುವಾಗ ಲಿಂಬೆಯ ಸಿಪ್ಪೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಕುದಿಸಿ ಈ ಟೀಯನ್ನು ಸೇವಿಸಬಹುದು. ಮಸಾಲೆ ಅರೆಯುವಾಗ ಹುಳಿಯ ಬದಲು ಲಿಂಬೆ ಸಿಪ್ಪೆಯನ್ನು ಸೇರಿಸಿ ಅರೆಯಬಹುದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವ ಜೊತೆಗೇ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು,…
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…