ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ.

ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಲಾವಿದ ಮಲ್ಲಪ್ಪ ಅವರು ಲೋಕಾಪುರದ ಮೊರಾರ್ಜಿ ಶಾಲೆಯಲ್ಲಿ ಪತ್ನಿ ಲಕ್ಷ್ಮಿ ಮತ್ತು ಮಕ್ಕಳೊಂದಿಗೆ ಕ್ವಾರಂಟೈನ್ ಆಗಿದ್ದರು. ಪತ್ನಿಯನ್ನು ಕರೆದುಕೊಂಡು ಬರಲು ಮಹಾರಾಷ್ಟ್ರದ ರತ್ನಗಿರಿಗೆ ತೆರಳಿ ಮರಳಿ ಬರುವಾಗ ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದರು. ಆಗ ಮಲ್ಲಪ್ಪ ಅವರ ಕೋರಿಕೆಯಂತೆ ಶಿಲ್ಪಕಲೆಯ ಕೇಂದ್ರದಲ್ಲಿ ಕಲ್ಲು ಹಾಗೂ ಉಳಿಯನ್ನು ತಂದುಕೊಟ್ಟಿದ್ದರು.
ಆಗ ಎರಡೆನೆಯ ದಿನದಂದು ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಕ್ವಾರಂಟೈನ್ ಜೂ. 1 ರಂದು ಪೂರ್ಣವಾಗುತ್ತಿದ್ದಂತೆ ಗಣೇಶನ ವಿಗ್ರಹ ರೆಡಿಯಾಗಿತ್ತು. ಅಧಿಕಾರಿಗಳು ಭರವಸೆ ನೀಡಿದಂತೆ ಈ ವಿಗ್ರಹವನ್ನು 10 ಸಾವಿರಕ್ಕೆ ಖರೀದಿಸಿದ್ದಾರೆ. ಈ ವಿಗ್ರಹವನ್ನು ನೋಡಿದ ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ, ಗೌತಮ ಬುದ್ಧನ ಮೂರ್ತಿಗೆ ಆರ್ಡರ್ ನೀಡಿದ್ದಾರೆ.

ಮಲ್ಲಪ್ಪನವರು ಉತ್ತಮ ಕಲಾವಿದ ಎಂದು ನಮಗೆ ಗೊತ್ತಿತ್ತು ಆದ್ದರಿಂದ ಅವರ ಬೇಡಿಕೆಯಂತೆ ಕಲ್ಲು ಮತ್ತು ಉಳಿಯನ್ನು ತಂದುಕೊಟ್ಟಿದ್ದವು ಎಂದಿದ್ದಾರೆ. ಮಲ್ಲಪ್ಪನವರು 14 ದಿನಗಳಲ್ಲಿ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು ಪಂಚಾಯಿತಿಯವರು ಖರೀದಿ ಮಾಡಿದ್ದಾರೆ. ನನ್ನ ಕಲೆಗೆ ಅವಕಾಶ ಹಾಗೂ ಬೆಲೆ ದೊರೆತಿದ್ದಕ್ಕೆ ಖುಷಿಯಾಗಿದೆ. ನನಗೆ ಈಗ ಮತ್ತಷ್ಟು ಬೇಡಿಕೆ ಬಂದಿದೆ ಎನ್ನುತ್ತಾರೆ ಮಲ್ಲಪ್ಪ ಬಡಿಗೇರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…