ಹಣ ಕಾಸು

“ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

4233

ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ  ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-

ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.

ಯಾರೂ ಅರ್ಹರು?                                                                                                                                                                                  ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.

 ಮೂಲ

ಯೋಜನೆಯಿಂದ ಪಡೆಯುವ ಸಬ್ಸಿಡಿ:-                                                                                                                                                                    ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.

ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು?                                                                                                                                                ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.

 ಮೂಲ

ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.

ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ                                                                                                                                                            ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

    ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.  ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…

  • ಜ್ಯೋತಿಷ್ಯ

    ದೇವಿ ಕೃಪೆಯಿಂದ ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸುದ್ದಿ

    ಬಿಹಾರದ ರಣಬಿಸಿಲಿಗೆ 117 ಜನ ಬಲಿ- ಗಯಾದಲ್ಲಿ ಸೆಕ್ಷನ್ 144 ಜಾರಿ……!

    ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್‍ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…