ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ ಕೇಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ವೃದ್ಧೆಯ ಮಗಳು ಗುಂಜ ದೇವಿ ಬೇರೆ ದಾರಿಯಿಲ್ಲದೆ ಈ ರೀತಿಯಾಗಿ ಬ್ಯಾಂಕಿಗೆ ಕರೆತಂದಿದ್ದಾರೆ.

27 ನಿಮಿಷದ ವಿಡಿಯೋದಲ್ಲಿ 60 ವರ್ಷದ ಮಹಿಳೆ ಬಾರ್ಗಾಂವ್ ಗ್ರಾಮದಲ್ಲಿ ತನ್ನ ವೃದ್ಧ ತಾಯಿಯನ್ನು ಮಂಚದ ಮೇಲೆ ಮಲಗಿಸಿಕೊಂಡು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದಾಗಿದೆ. ಹೀಗೆ ತನ್ನ ತಾಯಿಯನ್ನು ಮಗಳು ಕರೆದುಕೊಂಡು ಹೋಗುತ್ತಿರುವುದು ಉತ್ಕಲ್ನ ಗ್ರಾಮೀಣ ಬ್ಯಾಂಕಿಗೆ.
In Odisha, A woman dragged her 100-year-old mother to the Bank on a cot. She wanted to get pension money,but bank manager demanded physical verification.
— Sandeep Dhar (@sandeepdhar10) June 15, 2020
Dear @narendramodi can’t v perform verification at home for our aged citizens? pic.twitter.com/Bc14PK9Ojq
ಈ ವಿಡಿಯೋ ಸಾಮಾಜಿಕ ವೈರಲ್ ಆದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಗುಂಜ, ನನ್ನ ತಾಯಿಯ ಹಣವನ್ನು ಡ್ರಾ ಮಾಡಿಕೊಳ್ಳಲು ನನಗೆ ಅವಕಾಶ ನೀಡಿ ಎಂದು ಬ್ಯಾಂಕ್ ಮ್ಯಾನೇಜರ್ ಅವರನ್ನು ಪರಿಪರಿಯಾಗಿ ಬೇಡಿಕೊಂಡೆ. ಯಾಕೆಂದರೆ ಆಕೆಗೆ ಎದ್ದು ನಡೆಯಲು ಆಗುತ್ತಿಲ್ಲ. ನಮಗೆ ಹಣದ ಅವಶ್ಯಕತೆ ಇದೆ. ಹೀಗಾಗಿ ದಯಮಾಡಿ ಹಣ ಡ್ರಾ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿಕೊಂಡೆ. ಆದರೆ ಬ್ಯಾಂಕ್ ಮ್ಯಾನೇಜರ್ ಇದಕ್ಕೆ ಸುತರಾಂ ಒಪ್ಪಲಿಲ್ಲ. ಬದಲಾಗಿ ಭೌತಿಕ ಪರಿಶೀಲನೆ ನಡೆಸಬೇಕು. ಹೀಗಾಗಿ ಅಗತ್ಯವಾಗಿ ನೀವು ಅವರನ್ನು ಕರೆದುಕೊಂಡು ಬರಲೇಬೇಕು ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…