ಸುದ್ದಿ

ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

61

ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ.

ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಮಹಿಳೆಯನ್ನು ಸಾರ್ವಜನಿಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಪ್ರತಿನಿತ್ಯ ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರು ಮಹಿಳೆಯೊಬ್ಬರ ಜೊತೆ ನೀರು ಕೇಳಿದ್ದಾರೆ. ಈ ವೇಳೆ ಮಹಿಳೆ, ಮೂಗು ಮುಚ್ಚಿಕೊಂಡು ಸ್ವಲ್ಪ ದೂ ಇರಿ ಎಂದು ಗೇಟ್ ಹತ್ತಿರಕ್ಕೂ ಬರದಂತೆ ಹೇಳಿ, ಆ ಕಡೆಯಿಂದಲೇ ನೀರು ಕೇಳಬೇಕು ಎಂದು ಅವಾಜ್ ಹಾಕಿದ್ದಾರೆ. ಅಲ್ಲದೆ ಮನೆಯ ಒಳಗಡೆ ಹೋಗಿ ಒಂದು ಬಾಟಲಿಯಲ್ಲಿ ತುಂಬಿಸಿಕೊಂಡು ಬಂದು ಸ್ವಲ್ ದೂರ ಹೋಗಿ ಎಂದು ಹೇಳಿ ರಸ್ತೆ ಮಧ್ಯದಲ್ಲಿ ನೀರಿನ ಬಾಟಲಿ ಇಟ್ಟು ಬಂದಿದ್ದಾರೆ. ಅಲ್ಲದೆ ಕೂಡಲೆ ಎತ್ಕೊಂಡು ಹೋಗಿ.. ಎತ್ತಕೊಂಡು ಹೋಗಿ ಎಂದು ಹೇಳಿದ್ದಾರೆ.

ಮಹಿಳೆಯ ವರ್ತನೆಯಿಂದ ಬೇಸರಗೊಂಡ ಪೌರಕಾರ್ಮಿಕರು ಅಕ್ಕ.. ನೀರನ್ನು ಕೈಗೆ ಕೊಡಬಹುದಲ್ವ ಅಂತ ಹೇಳಿದ್ದಾರೆ. ಈ ವೇಳೆ ಮಹಿಳೆ, ಅಯ್ಯೋ ಹೋಗಿ ಪರವಾಗಿಲ್ಲ. ನಿಮ್ಮ ಕೈಗೆ ಕೊಟ್ಟರೆ ನಮಗೆ ಕೊರೊನಾ ಬರಲ್ವಾ.. ಹೋಗಿ.. ಹೋಗಿ ಎಂದು ಹೇಳಿಕೊಂಡುಇ ಮಹಿಳೆ ಒಳನಡೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಜ್ಯೋತಿಷ್ಯ

    ನಿಮ್ಮ ದಿನ ಭವಿಷ್ಯ ಶುಭವೋ ಅಶುಭವೋ ಹೇಗಿದೆ..?ನೋಡಿ ತಿಳಿಯಿರಿ…

    ಶುಕ್ರವಾರ, 06/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…