ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.