ಉದ್ಯೋಗ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

11

ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಹುದ್ದೆಗಳ ವಿವರ
ದಾಖಲಾತಿ ತಜ್ಞರು 01
ಹಿರಿಯ ಭೂ ವಿಜ್ಞಾನಿ o1
ಸಮಾಲೋಚಕರು 02
ಹಿರಿಯ ಸಮಾಲೋಚಕರು 02
ಕಿರಿಯ ಸಮಾಲೋಚಕರು 01
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05
ಸಪೋರ್ಟ್‌ ಇಂಜಿನಿಯರ್ 04
ಡೇಟಾ ಎಂಟ್ರಿ ಆಪರೇಟರ್ 02
ಜಿಲ್ಲಾ ಯೋಜನಾ ವ್ಯವಸ್ಥಾಪಕ 08
ಜಿಲ್ಲಾ ಸಮಾಲೋಚಕರು 16 .
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು 01 .
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು o7 .
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 02 .
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ ಸಮಾಲೋಚಕರು 02 .

ಈ ಹುದ್ದೆಗಳನ್ನು ಕೇಂದ್ರ ಕಛೇರಿ, ಜಿಲ್ಲಾ ಪಂಚಾಯಿತಿ ಕಛೇರಿ- ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಈ ಕಛೇರಿಗಳಲ್ಲಿ ನೇಮಕ ಮಾಡಲಾಗುತ್ತದೆ.

ವಯೋಮಾನ ಮತ್ತು ವಿದ್ಯಾರ್ಹತೆ
ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು. ಕೆಳಗೆ ನೀಡಲಾದ ಅಧಿಸೂಚನೆಯಲ್ಲಿ ಯಾವ್ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಅಗತ್ಯ ಎಂದು ತಿಳಿಸಲಾಗಿದ್ದು, ಓದಿ ತಿಳಿಯಿರಿ.

ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, ರೆಸ್ಯೂಮ್‌ ಹಾಗೂ ಅರ್ಜಿ ಜೊತೆಗೆ, ‘ನಾನೂ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ’ ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ನೈರ್ಮಲ್ಯ ಇಲಾಖೆ, 2ನೇ ಮಹಡಿ, ಕೆ.ಹೆಚ್‌.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ ರಸ್ತೆ, ಬೆಂಗಳೂರು-560009.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31-08-2020 (ಸಂಜೆ-05-30 ಗಂಟೆ) ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಅಥವಾ ಆಯಾ ಜಿಲ್ಲಾ ಪಂಚಾಯಿತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು. ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಕೆಲವು ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು, ನಿಗದಿತ ದಿನಾಂಕದಲ್ಲಿ ಪರೀಕ್ಷೆಗೆ ಹಾಜರಾಗುವುದು.
ಹುದ್ದೆಗಳಿಗೆ ನಿಗದಿಪಡಿಸಿದ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಫಿ ಡೇ ಮಾಲೀಕ,ಮಾಜಿ ಸಿ ಎಂ ಎಸ್‌.ಎಂ.ಕೃಷ್ಣ ಅಳಿಯ, ಸಿದ್ಧಾರ್ಥ ನೇತ್ರಾವತಿ ನದಿ ಬಳಿ ಕಾಣೆ……!

    ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್‌ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ವಿಚಿತ್ರ ಆದರೂ ಸತ್ಯ

    ಈ ಮಹಿಳೆಯ ಕಾಲಿನಿಂದ ಸೂಜಿ, ಸಿರಿಂಜಿನ ಮುಳ್ಳು, ಪಿನ್ನುಗಳು ಹೊರಬರುತ್ತಿವೆ..!ತಿಳಿಯಲು ಈ ಲೇಖನ ಓದಿ…

    ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.

  • ಪ್ರೇಮ, ಸ್ಪೂರ್ತಿ

    ಕೈ, ಕಾಲು ಇಲ್ಲದಿದ್ರೂ ಆಕೆಯನ್ನೇ ಮದುವೆಯಾಗ್ತೀನಿ ಎಂದ ಪ್ರೇಮಿ…ಆದರೆ ವಿಧಿಬರಹ..!

    ಗುಜರಾತ್‍ನ ಜಾಮ್‍ನಗರದಲ್ಲಿ ಇದೇ ರೀತಿಯ ಲವ್‍ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…