Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

ಪಾರಿಜಾತದ ಆರೋಗ್ಯಕರ ಗುಣಗಳು !!!

422

ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.

ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.

ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.

ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು

ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು

ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.

ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ

– ಜ್ವರ ಚಿಕಿತ್ಸಕ

ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.

– ನೋವು ನಿವಾರಕ

ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.

– ಕ್ಯಾನ್ಸರ್ ತಡೆ

ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.

– ಕೆಮ್ಮಿಗೆ ಮುಕ್ತಿ

ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.

 ಮಲಬದ್ಧತೆ ನಿವಾರಣೆ

ಪಾರಿಜಾತದ ಎಲೆಗಳಲ್ಲಿರುವ ಮಿನರಲ್‌ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.

 ಮೂಳೆ ಸವೆತ ತಪ್ಪಿಸುತ್ತದೆ

ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಯುರ್ವೇದ, ಆರೋಗ್ಯ

    ಜೇನುತುಪ್ಪದ ಆರೋಗ್ಯಕರ ಗುಣಗಳು

    ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…

  • Health

    ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

    ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • inspirational

    ಅಯ್ಯೋ ಇಷ್ಟು ದುಬಾರಿನ ನುಗ್ಗೆಕಾಯಿ; ಕೇಳಿ ನಂಗೆ ಶಾಕ್ ಆಯ್ತು,.!

    ಆಗಿರುವ  ಪ್ರವಾಹ, ಅತಿವೃಷ್ಟಿ ಅನಾವೃಷಿಯ ಪರಿಣಾಮವೀಗ  ನುಗ್ಗೆಕಾಯಿ ದರದಲ್ಲಿ ಭಾರೀ ಏರಿಕೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ನುಗ್ಗೆಕಾಯಿ ಬೆಲೆ 300 ರೂ. ಗಡಿದಾಟಿದೆ. ನುಗ್ಗೆಕಾಯಿಯಲ್ಲಿ ಹೆಚ್ಚಿನ ಪ್ರೋಟೀನ್ ಇರುತ್ತದೆ. ಹೀಗಾಗಿ ಹೆಚ್ಚಿನ ಗ್ರಾಹಕರು ನುಗ್ಗೆಕಾಯಿ ಖರೀದಿಸುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನುಗ್ಗೆಕಾಯಿ ಸೇರಿದಂತೆ ಸೊಪ್ಪು, ತರಕಾರಿ ಬೆಲೆ ನಾಶವಾಗಿವೆ. ಪರಿಣಾಮ ಬೇಡಿಕೆಗೆ ತಕ್ಕಂತೆ ಮಾರುಕಟ್ಟೆಗೆ ತರಕಾರಿ ಪೂರೈಕೆ ಆಗುತ್ತಿಲ್ಲ. ಇದರಿಂದಾಗಿ ನುಗ್ಗೆಕಾಯಿ, ತರಕಾರಿ ಹಾಗೂ ಸೊಪ್ಪಿನ ಬೆಲೆ ಏರಿಕೆಯಾಗುತ್ತಿದೆ. ಕಳೆದ…