News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

ಪಾರಿಜಾತದ ಆರೋಗ್ಯಕರ ಗುಣಗಳು !!!

440

ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ ಸಸ್ಯಕ್ಕೆ ಪ್ರೇಮಿಗಳ ಮರ, ದುಃಖದ ಮರ, ಸಂಜೆಮಲ್ಲಿಗೆ, ರಾತ್ರಿರಾಣಿ ಮುಂತಾದ ಹೆಸರುಗಳಿವೆ.

ಮಲ್ಲಿಗೆಯಂಥ ದಳಗಳು, ಕೇಸರಿ ಬಣ್ಣದ ತೊಟ್ಟುಗಳನ್ನು ಹೊಂದಿ ಮರದ ತುಂಬಾ ನಕ್ಷತ್ರಗಳಂತೆ ಹೊಳೆಯುವ ಪಾರಿಜಾತದ ಚೆಲುವು ಬಹಳ ಆಕರ್ಷಕ.

ಭಾರತ, ಪಾಕಿಸ್ತಾನ, ಥೈಲ್ಯಾಂಡ್, ನೇಪಾಳ, ಇಂಡೋನೇಶ್ಯಾಗಳಲ್ಲಿ ಕಂಡುಬರುವ ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಸ್ವರ್ಗದ ಐದು ವೃಕ್ಷಗಳಲ್ಲಿ ಪಾರಿಜಾತವೂ ಇದೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಪಾವಿತ್ರತೆಯ ಕಾರಣದಿಂದಲೇ ಮೊನ್ನೆ ರಾಮಜನ್ಮಭೂಮಿಯಲ್ಲಿ ಭೂಮಿಪೂಜೆ ನೆರವೇರಿಸುವಾಗ ಪ್ರಧಾನಿ ನರೇಂದ್ರ ಮೋದಿ ಕೂಡಾ ಪಾರಿಜಾತದ ಸಸ್ಯ ನೆಟ್ಟು ಪೂಜೆ ನೆರವೇರಿಸಿದರು.

ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಪತ್ನಿ ಸತ್ಯಭಾಮೆಗೆ ಪಾರಿಜಾತವನ್ನು ತಂದು ಕೊಡುವ ಸಲುವಾಗಿ ಕೃಷ್ಣನು ಇಂದ್ರನೊಡನೆ ಯುದ್ಧ ಮಾಡಿದ ಕತೆಯೂ ಇದೆ. ಹರಿವಂಶ ಪುರಾಣದಲ್ಲಿ ಈ ವೃಕ್ಷವನ್ನು ಕೇಳಿದ್ದೆಲ್ಲ ಕೊಡುವ ಕಲ್ಪವೃಕ್ಷ ಎಂದು ಕರೆಯಲಾಗಿದೆ. ಸಾಮಾನ್ಯವಾಗಿ ಕೆಳಗೆ ಬಿದ್ದ ಹೂವುಗಳನ್ನು ದೇವರಿಗೇರಿಸುವುದಿಲ್ಲ. ಆದರೆ, ಸ್ವರ್ಗದ ವೃಕ್ಷಗಳಾದ ಕಾರಣ ಪಾರಿಜಾತ ಹಾಗೂ ಬಕುಳದ ಹೂವುಗಳು ನೆಲಕ್ಕೆ ಬಿದ್ದರೂ ದೇವರ ಮುಡಿಗೇರಲು ಅರ್ಹವಾಗಿವೆ ಎಂಬ ನಂಬಿಕೆ ಇದೆ.

ಶ್ವಾಸಕೋಶ ಸಮಸ್ಯೆಗೆ ರುದ್ರಾಕ್ಷಿ ಮದ್ದು

ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಏನೇನು ನೋಡೋಣ.

– ತಂಪು

ಪಾರಿಜಾತದ ಎಲೆಗಳು ತಂಪಾಗಿರುವ ಕಾರಣ ದೇಹದ ಎಲ್ಲೇ ಉರಿ, ಗಾಯ, ಊತಗಳಿದ್ದರೂ ಇದರಿಂದ ತಯಾರಿಸಿದ ಎಣ್ಣೆ ಬಳಸುವುದರಿಂದ ಉರಿ ತಗ್ಗುತ್ತದೆ. ಇದರಲ್ಲಿರುವ ಬೆಂಜೋಯಿಕ್ ಆಯಸಿಡ್ ಹಾಗೂ ಕೆರೋಟಿನ್ ಪಾರಿಜಾತದ ಎಲೆಗೆ ಈ ಗುಣ ನೀಡಿದೆ.

ಅಷ್ಟಕ್ಕೂ ರುದ್ರಾಕ್ಷಿಗೇಕೆ ಪೂಜೆಯಲ್ಲಿ ಇಷ್ಟು ಮಹತ್ವ

– ಜ್ವರ ಚಿಕಿತ್ಸಕ

ಆಯುರ್ವೇದ ಔಷಧಿಗಳಲ್ಲಿ ಪಾರಿಜಾತದ ಎಲೆಗಳನ್ನು ಮಲೇರಿಯಾ ಹಾಗೂ ಡೆಂಘೆ ಜ್ವರಗಳ ಚಿಕಿತ್ಸೆಗೆ ಔಷಧವಾಗಿ ಬಳಸಲಾಗುತ್ತದೆ. ಜ್ವರದ ಚಿಕಿತ್ಸೆಗೆ ಇದರ ತೊಗಟೆಯೂ ಉಪಯೋಗವಾಗುತ್ತದೆ. ಪಾರಿಜಾತದ ಎಣ್ಣೆಯನ್ನು ಆಲಿವ್ ಎಣ್ಣೆಯೊಂದಿಗೆ ಬೆರೆಸಿ ಅಂಗಾಲಿಗೆ ತಿಕ್ಕುವುದರಿಂದ ಜ್ವರ ಕಡಿಮೆಯಾಗುತ್ತದೆ.

– ನೋವು ನಿವಾರಕ

ಮಂಡಿನೋವಿದ್ದಾಗ ಪಾರಿಜಾತದ ಎಲೆಗಳನ್ನು ಪೇಸ್ಟ್ ಮಾಡಿ ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಹಚ್ಚಿಕೊಳ್ಳುವುದರಿಂದ ಉಪಶಮನ ದೊರೆಯುತ್ತದೆ.

– ಕ್ಯಾನ್ಸರ್ ತಡೆ

ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳವಣಿಗೆಯಾಗದಂತೆ ನೋಡಿಕೊಳ್ಳುವ ಗುಣ ಪಾರಿಜಾತದ ಎಲೆಗಳಿಗಿದೆ. ಇದರಲ್ಲಿರುವ ಅತ್ಯಧಿಕ ಆಯಂಟಿ ಆಕ್ಸಿಡೆಂಟ್ ಗುಣ ಇದಕ್ಕೆ ಕಾರಣವಾಗಿದೆ. 20-25 ಎಲೆಗಳನ್ನು ಗ್ರೈಂಡ್ ಮಾಡಿ ನೀರಿನಲ್ಲಿ ಅರ್ಧದಿಂದ 1 ಗಂಟೆಗಳ ಕಾಲ ಕುದಿಸಿ. ನಂತರ ಶೋಧಿಸಿ ಪ್ರತಿದಿನ ಕುಡಿಯುವ ಅಭ್ಯಾಸ ಉತ್ತಮ.

– ಕೆಮ್ಮಿಗೆ ಮುಕ್ತಿ

ಪಾರಿಜಾತ ಹೂವು ಹಾಗೂ ಎಲೆಗಳಲ್ಲಿರುವ ಎಥನಾಲ್ ಎಂಬ ಕಾಂಪೌಂಡ್ ಕೆಮ್ಮನ್ನು ಗುಣ ಮಾಡುತ್ತದೆ. ಈ ಗುಣವೇ ಅಸ್ತಮಾ ನಿವಾರಣೆಗೆ ಕೂಡಾ ಸಹಕಾರಿಯಾಗಿದೆ. ಪಾರಿಜಾತ ಎಲೆಗಳನ್ನು ಕುದಿಸಿದ ನೀರಿಗೆ ಸ್ವಲ್ಪ ಶುಂಠಿ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.

 ಮಲಬದ್ಧತೆ ನಿವಾರಣೆ

ಪಾರಿಜಾತದ ಎಲೆಗಳಲ್ಲಿರುವ ಮಿನರಲ್‌ಗಳು ಜೀರ್ಣಕ್ರಿಯೆಯನ್ನು ಸರಾಗಗೊಳಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಪಾರಿಜಾತದ ಟೀ(ಕಷಾಯ) ದಿನಕ್ಕೊಮ್ಮೆ ಸೇವಿಸಿದರೆ ಸಾಕು.

 ಮೂಳೆ ಸವೆತ ತಪ್ಪಿಸುತ್ತದೆ

ದೇಹದಲ್ಲಿ ಮೂಳೆ ಸವೆತ ಸಮಸ್ಯೆಯನ್ನು ನಿವಾರಣೆ ಮಾಡುವ ಶಕ್ತಿ ಪಾರಿಜಾತ ಕಷಾಯಕ್ಕಿದೆ. ಏಕೆಂದರೆ ಪಾರಿಜಾತ ಎಲೆಯ ಕಷಾಯದಲ್ಲಿ ಕಾರ್ಟಿಲೆಜ್ ಎಂಬ ಅಂಶವಿದ್ದು, ಮೂಳೆ ಸವೆದು ಹೋದಾಗ ಮತ್ತೆ ಮೂಳೆಗಳಿಗೆ ಕಾರ್ಟಿಲೆಜ್ ಅಂಶವನ್ನು ಪಾರಿಜಾತ ಕಷಾಯ ನೀಡುತ್ತದೆ

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಎಲಿಮಿನೇಟ್, ಬಿಗ್ ಟ್ವಿಸ್ಟ್ ನೀಡಿದ ಕಿಚ್ಚ ಸುದೀಪ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…