ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735 ರ ಸಮಯದಲ್ಲಿ ಈ ರಚನೆಗಳು ನಿರ್ಮಾಣಗೊಂಡಿವೆ. ಪ್ರಸ್ತುತ, ಲೇಖನವು ಜೈಪುರದಲ್ಲಿರುವ ಜಂತ ಮಂತರ್ ರಚನೆಗಳ ಕುರಿತು ತಿಳಿಸುತ್ತದೆ.
ಜಂತರ್ ಮಂತರ್: ಜೈಸಿಂಗನು ಖಗೋಳ ಶಾಸ್ತ್ರದಲ್ಲಿ ಅತೀವ ಆಸಕ್ತಿವುಳ್ಳವನಾಗಿದ್ದನು ಹಾಗೂ ಈ ರಚನೆಗಳ ಹಿಂದಿರುವ ಮುಖ್ಯ ಉದ್ದೇಶವೆಂದರೆ ಖಗೋಳಕ್ಕೆ ಸಂಬಂಧಿಸಿದ ವಿಷಯಗಳನ್ನು ಅವಲೋಕಿಸುವುದು ಹಾಗೂ ತಾರಾ ಮಂಡಲದಲ್ಲುಂಟಾಗುವ ಹಲವು ಬದಲಾವಣೆಗಳು, ಗ್ರಹಣಗಳ ಕುರಿತು ತಿಳಿಯುವುದು.
ಈ ಒಂದು ಸಂಗ್ರಹಾಲಯದ ಗುಚ್ಛಕ್ಕೆ ಹಿಂದಿನ ಕಾಲದ ತಾರಾಲಯ ಎಂದೂ ಸಹ ಕರೆಯಭುದು. ಒಟ್ಟು 14 ಬಗೆಯ ಪ್ರಮುಖ ಜಾಮಿತಿಯ (ರೇಖಾಗಣಿತ) ರಚನೆಗಳನ್ನು ಈ ವೀಕ್ಷಣಾಲಯದಲ್ಲಿ ಕಾಣಬಹುದಾಗಿದೆ.
ವಿವಿಧ ಭಂಗಿ ಹಾಗೂ ಕೋನಗಳಲ್ಲಿ ರಚಿಸಲಾದ ಈ ರಚನೆಗಳನ್ನು ವಿಶ್ಲೇಷಿಸುವ ಮೂಲಕ ಅಂದಿನ ಕಾಲದಲ್ಲಿ ತಾರೆಗಳ ಭ್ರಮಣೆ, ಗ್ರಹಣ, ಭೂಮಿಯ ಪ್ರದಕ್ಷಿಣೆಗಳ ಕುರಿತು ತಿಳಿಯಲಾಗುತ್ತಿತ್ತು.
ಇಲ್ಲಿನ ಪ್ರತಿಯೊಂದು ರಚನೆಗಳು ತಮ್ಮದೆ ಆದ ವಿಶೇಷತೆಗಳನ್ನು ಹೊಂದಿದ್ದು, ಯಾವುದೇ ರೀತಿಯ ಚಲನ ವಲನ ಸ್ಥಿತಿಯಲ್ಲಿರದೆ ಸ್ಥಿರವಾಗಿ ಭೂಮಿಯ ಮೇಲೆ ಸ್ಥಾಪಿಸಲ್ಪಟ್ಟಿವೆ.
ಇವುಗಳಲ್ಲಿ ಸಾಮ್ರಾಟ್ ಯಂತ್ರ ಎಂಬ ರಚನೆಯು ಎಲ್ಲಕ್ಕಿಂತ ದೊಡ್ಡದಾಗಿದ್ದು, 90 ಅಡಿಗಳಷ್ಟು ಎತ್ತರವಿದೆ. ಇದರ ಮುಖವು ಜೈಪುರ ನಗರದ ಅಕ್ಷಾಂಶಕ್ಕೆ 27 ಡಿಗ್ರಿಯಷ್ಟು ಕೋನದಲ್ಲಿ ನಿರ್ಮಿಸಲ್ಪಟ್ಟಿದೆ.
ಈ ರಚನೆಯು ದಿನದ ಸಮಯವನ್ನು ತನ್ನ ನೆರಳಿನ ಮೂಲಕ ಕರಾರುವಕ್ಕಾಗಿ ತಿಳಿಸುತ್ತದೆ. ಇದರ ಮೇಲಿರುವ ಚಿಕ್ಕದಾದ ಒಂದು ನಿಲ್ಲುವ ಜಾಗವು ಅಂದಿನ ಸಮಯದಲ್ಲಿ ಗ್ರಹಣ ಹಾಗೂ ಮಳೆಯ ಸೂಚನೆಯನ್ನು ಘೋಷಿಸಲು ಬಳಸಲಾಗುತ್ತಿತ್ತು
ಇಲ್ಲಿನ ಪ್ರತಿಯೊಂದು ರಚನೆಗಳು ಅಳತೆ ಮಾಪಕವನ್ನು ಒಳಗೊಂಡಿವೆ. ಸ್ಥಳೀಯವಾಗಿ ದೊರೆತ ಕಲ್ಲಿನಿಂದಲೆ ನಿರ್ಮಿಸಲಾದ ಈ ರಚನೆಗಳಲ್ಲಿ ಅಳತೆಗಳನ್ನು ಕರಾರುವಕ್ಕಾಗಿ ಮುದ್ರಿಸಲಾಗಿದೆ. 1948 ರಲ್ಲಿ ಇದನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲಾಯಿತು.
ಸಾಮ್ರಾಟ್ ಯಂತ್ರವು (ರಚನೆ) ಸನ್ ಡಯಲ್ (ಸೂರ್ಯನ ಬೆಳಕಿನಿಂದ ಸಮಯ ಹೇಳುವ ಗಡಿಯಾರ) ಜೈಪುರದ ಸಮಯಕ್ಕೆ ಎರಡು ಕ್ಷಣಗಳ ವ್ಯತ್ಯಾಸ ಹೊಂದಿದ್ದು, ಇದರ ನೆರಳು ಪ್ರತಿ ಸೆಕೇಂಡಿಗೆ ಒಂದು ಮಿ.ಮೀ ಗಳಷ್ಟು ದೂರ ಚಲಿಸುತ್ತದೆ.
ಅಲ್ಲದೆ ಜ್ಯೋತಿಷ್ಯ ಹಾಗೂ ವೇದ ಜ್ಯೋತಿಷ್ಯ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಇದು ಭೇಟಿ ನೀಡಲೇಬೇಕಾದ ತಾಣವಾಗಿದೆ. ವೇದಗಳಲ್ಲಿ ನಮಗಿರುವ ನಂಬಿಕೆಯನ್ನು ಪ್ರಚುರಪಡಿಸುವಂತಹ ರಚನೆ ಇದಾಗಿದ್ದು ಭವ್ಯ ಭಾರತದ ಪುರಾತನ ಜ್ಞಾನದ ಪರಿಚಯ ಇಲ್ಲಿ ಭೇಟಿ ನೀಡಿದಾಗ ನಮಗುಂಟಾಗುತ್ತದೆ.
ಹೀಗೆ ಉತ್ತರ ಭಾರತದಲ್ಲಿ ಐದು ಜಂತರ್ ಮಂತರ್ ಗಳನ್ನು ನೋಡಬಹುದಾಗಿದ್ದು ಅವುಗಳಲ್ಲಿ ಜೈಪುರ ಹಾಗೂ ದೆಹಲಿಯ ಜಂತರ್ ಮಂತರ್ ಗಳು ಪ್ರಮುಖವಾಗಿವೆ ಮತ್ತು ಪ್ರಸಿದ್ಧಿ ಪಡೆದ ಪ್ರವಾಸಿ ಆಕರ್ಷಣೆಗಳಾಗಿವೆ.
ಜೈಪುರವು ರಾಜಸ್ಥಾನದ ರಾಜಧಾನಿ ಪಟ್ಟಣವಾಗಿದ್ದು, ಭಾರತದ ಬಹುತೇಕ ಎಲ್ಲ ಮಹಾನಗರಗಳಿಂದ ಇಲ್ಲಿಗೆ ಸುಲಭವಾಗಿ ತೆರಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…