Health, karnataka, Lifestyle, ಆರೋಗ್ಯ

ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

85

ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.
ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು

ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆ
ಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾಗಿ ದೇಹದ ತುಂಬಾ ಹಬ್ಬಿರುವ ರಕ್ತ ನಾಳಗಳ ಮೇಲೆ ಒತ್ತಡ ಕಡಿಮೆಯಾಗಿ ರಕ್ತ ಸಂಚಾರ ಸುಗಮಗೊಳ್ಳುತ್ತದೆ. ಇದರಿಂದ ಹೃದಯದ ಮೇಲೆ ಒತ್ತಡ ಕಡಿಮೆಯಾಗಿ ರಕ್ತದ ಒತ್ತಡ ಸಮಸ್ಯೆ ಸಾಮಾನ್ಯ ಸ್ಥಿತಿಗೆ ಮರಳುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ – ವಿಟಮಿನ್ ಸಿ ಯನ್ನು ಒಳಗೊಂಡಿರುವ ಹಲಸಿನ ಹಣ್ಣು, ವೈರಲ್ ಮತ್ತು ಬ್ಯಾಕ್ಟೀರಿಯಾ ಸೋಂಕಿನಿಂದ ನಮ್ಮನ್ನು ಸಂರಕ್ಷಿಸುತ್ತದೆ. ಬಿಳಿ ರಕ್ತ ಕೋಶಗಳ ರಚನೆಯನ್ನು ಬೆಂಬಲಿಸುತ್ತಾ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ವಿಟಮಿನ್ ಸಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಕಪ್ ಹಲಸಿನಹಣ್ಣು ಈ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ದೇಹಕ್ಕೆ ಒದಗಿಸುತ್ತದೆ
​ಹಲಸಿನ ಹಣ್ಣಿನಲ್ಲಿವೆ ಊಹೆಗೂ ಮೀರಿದ ಪೌಷ್ಟಿಕ ಸತ್ವಗಳು

ಹಲಸಿನ ಹಣ್ಣಿನ ತೊಳೆಗಳಲ್ಲಿ ಕೇವಲ ಪ್ರೋಟಿನ್ ಅಂಶ ಮಾತ್ರವಲ್ಲದೆ ನಾರಿನ ಅಂಶ ವಿಟಮಿನ್ ‘ ಎ ‘, ವಿಟಮಿನ್ ‘ ಸಿ ‘, ರಿಬಾಫ್ಲವಿನ್, ಮೆಗ್ನೀಷಿಯಂ, ಪೊಟ್ಯಾಶಿಯಂ, ತಾಮ್ರ ಮತ್ತು ಮ್ಯಾಂಗನೀಸ್ ಅಂಶಗಳು ಇತರ ಹಣ್ಣುಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿವೆ. ನಮ್ಮ ದೇಹಕ್ಕೆ ಅಗತ್ಯವಿರುವ ಆರೋಗ್ಯಕರ ಮತ್ತು ಬಹಳ ಪ್ರಯೋಜನಕಾರಿಯಾದ ಆಂಟಿ – ಆಕ್ಸಿಡೆಂಟ್ ಅಂಶಗಳು ಇದರಲ್ಲಿ ಲಭ್ಯವಿವೆ

ಅಸ್ತಮಾವನ್ನು ನಿಯಂತ್ರಿಸುತ್ತದೆ – ಹಲಸಿನ ಹಣ್ಣಿನ ಬೇರುಗಳು ಅಸ್ತಮಾದಿಂದ ಬಳಲುತ್ತಿರುವವರಿಗೆ ರಾಮಬಾಣವಾಗಿದೆ. ಇದರ ಬೇರನ್ನು ಮತ್ತು ಉಳಿದ ಭಾಗಗಳನ್ನು ಕುದಿಸಿ ಕಷಾಯದಂತೆ ಸೇವಿಸುವುದು ಅಸ್ತಮಾದಿಂದ ಮುಕ್ತಿ ದೊರಕುವಂತೆ ಮಾಡುತ್ತದೆ.

ಮೂಳೆಯನ್ನು ಬಲಪಡಿಸುತ್ತದೆ -ಹಲಸಿನಲ್ಲಿರುವ ಮೆಗ್ನೇಷಿಯಂ, ಕ್ಯಾಲ್ಶಿಯಂನೊಂದಿಗೆ ಕಾರ್ಯನಿರ್ವಹಿಸಿ ಮೂಳೆಯನ್ನು ಬಲಪಡಿಸುತ್ತದೆ. ಮೂಳೆ ಸಂಬಂಧಿತ ಹಲವಾರು ಕಾಯಿಲೆಯನ್ನು ದೂರಮಾಡುವಲ್ಲಿ ಹಲಸಿನ ಹಣ್ಣು ಉಪಕಾರಿಯಾಗಿದೆ.
ಅನೀಮಿಯಾವನ್ನು ದೂರಮಾಡುತ್ತದೆ – ಹಲಸಿನ ಹಣ್ಣಿನಲ್ಲಿರುವ ಕಬ್ಬಿಣದ ಅಂಶ ಅನೀಮಿಯಾವನ್ನು ದೂರ ಮಾಡಿ ದೇಹದ ಸೂಕ್ತ ರಕ್ತ ಸಂಚಲನೆಗೆ ಫಲಪ್ರದವಾಗಿದೆ.

ಆರೋಗ್ಯಕರ ಥೈರೋಯ್ಡ್‌ಗೆ ಉಪಕಾರಿ -ಥೈರೊಯ್ಡ್ ಮೆಟಾಬಾಲಿಸಂಗೆ ಕೋಪರ್‌ ಉಪಕಾರಿಯಾಗಿದೆ, ಹಾರ್ಮೋನ್ ಉತ್ಪಾದನೆಯಲ್ಲಿ ಕೋಪರ್ ಪ್ರಮುಖ ಪಾತ್ರ ವಹಿಸಿದೆ. ಹಲಸಿನ ಹಣ್ಣು ಕೋಪರ್‌ನಿಂದ ಯಥೇಚ್ಛಿತಗೊಂಡಿದ್ದು ಥೈರೊಯ್ಡ್ ಅನ್ನು ಆರೋಗ್ಯಕರವಾಗಿಸುತ್ತದೆ.
ಹೋರಾಡುತ್ತದೆ.


ಉತ್ತಮ ಜೀರ್ಣಕ್ರಿಯೆಗೆ ಸಹಕಾರಿ – ಅಲ್ಸರ್ ವಿರುದ್ಧ ಹೋರಾಡುವ ವಿಶಿಷ್ಟ ಗುಣವನ್ನು ಹೊಂದಿರುವ ಹಲಸಿನ ಹಣ್ಣು ಅಲ್ಸರ್ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರಮಾಡುತ್ತದೆ. ಇದರಲ್ಲಿರುವ ಅತ್ಯಧಿಕ ಫೈಬರ್ ಅಂಶವು ಮೃದುವಾದ ಕರುಳಿನ ಚಲನೆಗೆ ಸಹಕಾರಿ.

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಸುದ್ದಿ

    ಈ ಹುಡುಗಿಯನ್ನು ಮದ್ವೆ ಆಗೋ ಹುಡುಗರಿಗೆ ಸಿಗುತ್ತೆ ಕೋಟಿ ಕೋಟಿ ರೂಪಾಯಿಗಳ ಆಸ್ತಿ..!

    ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…