ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ.
ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ ಪರ್ವತವನ್ನು ಏರಲು ಯಾರಿಗೂ ಅನುಮತಿ ದೊರೆಯುವುದಿಲ್ಲ. ಹೀಗಾಗಿ ಜಗತ್ತಿನ ಪ್ರಮುಖ ಶಿಖರಗಳ ಪೈಕಿ ಕೈಲಾಸಪರ್ವತವೊಂದು ಮಾತ್ರ ಆರೋಹಿಸಲ್ಪಡದೇ ಉಳಿದಿದೆ. ಶಿಖರವು ಸಮುದ್ರಮಟ್ಟದಿಂದ ೨೧,೭೭೮ ಅಡಿಗಳಷ್ಟು ಎತ್ತರದಲ್ಲಿದೆಯೆಂದು ಅಂದಾಜು ಮಾಡಲಾಗಿದೆ.

ಹಿಂದೂಧರ್ಮದ ಪ್ರಕಾರ ಪರಶಿವನು ಕೈಲಾಸಪರ್ವತದ ಶಿಖರದ ಮೇಲೆ ಹಿಮವಂತನ ಪುತ್ರಿ ಪಾರ್ವತಿ ಯೊಂದಿಗೆ ನೆಲೆಸಿರುವನು. ಶಿವನು ಇಲ್ಲಿ ಸದಾ ಧ್ಯಾನಮಗ್ನನಾಗಿರುತ್ತಾನೆ. ಅಲ್ಲದೇ ಧನಾಧಿಪತಿ ಕುಬೇರ ನ ನೆಲೆಯು ಸಹ ಕೈಲಾಸಪರ್ವತದ ಸನಿಹದಲ್ಲಿಯೇ ಎಂದು ಹೇಳಲಾಗುತ್ತದೆ. ಹಿಂದೂಧರ್ಮದ ಅನೇಕ ಶಾಖೆಗಳು ಕೈಲಾಸಪರ್ವತವನ್ನು ಸ್ವರ್ಗ ಆತ್ಮದ ಅಂತಿಮ ನೆಲೆ ಮತ್ತು ವಿಶ್ವದ ಪರಮೋನ್ನತ ಅಧ್ಯಾತ್ಮಿಕ ಕೇಂದ್ರ ವೆಂದು ಪರಿಗಣಿಸುತ್ತವೆ. ವಿಷ್ಣುಪುರಾಣ ದ ಪ್ರಕಾರ ಕೈಲಾಸಪರ್ವತವು ಜಗತ್ತಿನ ಕೇಂದ್ರ ಮತ್ತು ಅದರ ನಾಲ್ಕು ಮುಖಗಳು ಸ್ಪಟಿಕ ಪದ್ಮರಾಗ , ಸ್ವರ್ಣ ಮತ್ತು ನೀಲವೈಢೂರ್ಯ ದಿಂದ ಮಾಡಲ್ಪಟ್ಟಿವೆ. ಕೈಲಾಸಪರ್ವತವು ಜಗತ್ತಿನ ಆಧಾರಸ್ಥಂಭ. ಅದರ ಎತ್ತರ ೮೪೦೦೦ ಯೋಜನಗಳಷ್ಟು. ಅದು ವಿಶ್ವಮಂಡಲದ ಕೇಂದ್ರವಾಗಿದ್ದು ಪದ್ಮಾಕೃತಿಯಲ್ಲಿ ಹಬ್ಬಿರುವ ಆರು ಪರ್ವತಶ್ರೇಣಿಗಳ ಕೇಂದ್ರಸ್ಥಾನದಲ್ಲಿದೆ. ಕೈಲಾಸಪರ್ವತದಿಂದ ಹೊರಹರಿಯುವ ನಾಲ್ಕು ನದಿಗಳು ನಾಲ್ಕೂ ದಿಕ್ಕಿನಲ್ಲಿ ಪ್ರವಹಿಸಿ ಜಗತ್ತನ್ನು ನಾಲ್ಕು ಪ್ರದೇಶಗಳನ್ನಾಗಿ ವಿಭಜಿಸಿವೆ. ಜಗತ್ತಿನ ಅತ್ಯಂತ ದೊಡ್ಡ ಮತ್ತು ಅತಿ ಪ್ರಮುಖ ಶಿಲೆಯಲ್ಲಿ ಕೊರೆದು ಮಾಡಿರುವ ದೇವಾಲಯವೆಂದರೆ ಎಲ್ಲೋರಾ ದ ಕೈಲಾಸ ದೇಗುಲ. ಇದಕ್ಕೆ ಕೈಲಾಸಪರ್ವತವೇ ಸ್ಫೂರ್ತಿ. ಈ ದೇವಸ್ಥಾನದ ಅನೇಕ ಶಿಲ್ಪಗಳು ಶಿವಪಾರ್ವತಿಯರಿಗೆ ಸಂಬಂಧಿಸಿದ ಘಟನಾವಳಿಗಳನ್ನು ತೋರಿಸುತ್ತವೆ. ಇವುಗಳ ಪೈಕಿ ರಾವಣ ನು ಕೈಲಾಸಪರ್ವತವನ್ನು ಬುಡಸಮೇತ ಕೀಳಲು ನಡೆಸಿದ ಪ್ರಯತ್ನವೂ ಒಂದು.

ಸಹಸ್ರಾರು ವರ್ಷಗಳಿಂದ ನಡೆದು ಬಂದಿರುವ ಸಂಪ್ರದಾಯದಂತೆ ಪ್ರತಿ ವರ್ಷ ದೊಡ್ಡ ಸಂಖ್ಯೆಯಲ್ಲಿ ಆಸ್ತಿಕರು ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳುವರು. ಹಲವು ಧರ್ಮದ ಶ್ರದ್ಧಾಳುಗಳು ಕೈಲಾಸಪರ್ವತಕ್ಕೆ ಕಾಲ್ನಡಿಗೆಯಲ್ಲಿ ಸುತ್ತುಬರುವುದು ಒಂದು ಪಾವನ ಕಾಯಕವೆಂದು ಭಾವಿಸುತ್ತಾರೆ. ಹಿಂದೂಗಳು ಮತ್ತು ಬೌದ್ಧರು ಪರ್ವತಕ್ಕೆ ಪ್ರದಕ್ಷಿಣವಾಗಿ ಸುತ್ತು ಬಂದರೆ ಜೈನರು ಮತ್ತು ಬಾನ್ ಧರ್ಮೀಯರು ಕೈಲಾಸಪರ್ವತಕ್ಕೆ ಅಪ್ರದಕ್ಷಿಣವಾಗಿ ಸುತ್ತು ಬರುತ್ತಾರೆ. ಪರ್ವತವನ್ನು ಒಂದು ಬಾರಿ ಸುತ್ತಿಬರಬೇಕಾದರೆ ೫೨ ಕಿ.ಮೀ. ಗಳಷ್ಟು ಉದ್ದದ ದಾರಿಯನ್ನು ಕ್ರಮಿಸಬೇಕಾಗುವುದು.

ಕೆಲವು ಯಾತ್ರಿಕರು ಕೈಲಾಸಪರ್ವತವನ್ನು ಒಂದೇ ದಿನದಲ್ಲಿ ಸುತ್ತಿಬರಬೇಕೆಂದು ನಂಬುವರು. ಆದರೆ ಒರಟು ಮೇಲ್ಮೈ, ಉನ್ನತಪ್ರದೇಶದಲ್ಲುಂಟಾಗುವ ಅಸ್ವಾಸ್ಥ್ಯ ಮತ್ತು ಪ್ರತಿಕೂಲ ವಾತಾವರಣಗಳಿಂದಾಗಿ ಇದು ಕಠಿಣಸಾಧ್ಯ ಮತ್ತು ಕೆಲವೇ ಕೆಲವರು ಮಾತ್ರ ಇದನ್ನು ಸಾಧಿಸುವರು. ಕೆಲವು ಭಕ್ತರು ಇಡೀ ಪರ್ವತಕ್ಕೆ ಅಂಗಪ್ರದಕ್ಷಿಣೆಯನ್ನು ಸಹ ಮಾಡುವರು. ಈ ಕ್ರಮದಲ್ಲಿ ಪ್ರತಿ ಹೆಜ್ಜೆಗೊಮ್ಮೆ ಭಕ್ತರು ಪರ್ವತಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಆ ಸ್ಥಾನವನ್ನು ಬೆರಳಿನಿಂದ ಗುರುತಿಸಿ ನಂತರ ಮಂಡಿಯೂರಿ ಪ್ರಾರ್ಥನೆ ಸಲ್ಲಿಸಿ ಮುಂದೆ ಕೈಗಳು ಮತ್ತು ಮಂಡಿಯ ಮೇಲೆ ಮೊದಲು ಗುರುತಿಸಿದ್ದ ಸ್ಥಾನಕ್ಕೆ ತೆವಳುವರು. ಈ ಪ್ರಕಾರದ ಅಂಗಪ್ರದಕ್ಷಿಣೆಯ ಮೂಲಕ ಕೈಲಾಸಪರ್ವತವನ್ನು ಒಂದು ಬಾರಿ ಸುತ್ತಿಬರಲು ಕನಿಷ್ಟ ನಾಲ್ಕು ದಿನಗಳು ತಗಲುತ್ತವೆಯಲ್ಲದೆ ಅತಿ ತೀವ್ರವಾದ ದೈಹಿಕ ದಂಡನೆಯನ್ನು ಸಹಿಸಿಕೊಳ್ಳಬೇಕಾಗುತ್ತದೆ.
ಕೈಲಾಸಪರ್ವತವು ಟಿಬೆಟ್ ನ ಹಿಮಾಲಯದಲ್ಲಿ ಅತಿ ದುರ್ಗಮ ಪ್ರಾಂತ್ಯದಲ್ಲಿ ಮತ್ತು ಪ್ರತಿಕೂಲ ಪರಿಸರದಲ್ಲಿದೆ. ಈಚೆಗೆ ಯಾತ್ರಿಕರಿಗೆ ಕೆಲವು ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವ ದಿಸೆಯಲ್ಲಿ ಪ್ರಯತ್ನಗಳು ಸಾಗಿವೆ. ಕೈಲಾಸಪರ್ವತವನ್ನು ಪೂಜಿಸುವ ಎಲ್ಲ ಧರ್ಮಗಳ ಪ್ರಕಾರ ಪರ್ವತಕ್ಕೆ ಕಾಲು ಸೋಕಿಸುವುದು ಅತಿ ಘೋರ ಪಾಪದ ಕಾರ್ಯ. ಇದನ್ನು ಮೀರಿ ಪರ್ವತವನ್ನು ಏರಲು ಹೊರಟವರು ಪ್ರಾಣಕಳೆದುಕೊಂಡರೆಂದು ಜನರ ಹೇಳಿಕೆ.
೧೯೫೦ರಲ್ಲಿ ಚೀನೀಯರಿಂದ ಟಿಬೆಟ್ ನ ಆಕ್ರಮಣ ಮತ್ತು ಭಾರತ -ಚೀನಾಗಳ ನಡುವೆ ಸಂಭವಿಸಿದ ಘರ್ಷಣೆಗಳಿಂದಾಗಿ ೧೯೫೯ ರಿಂದ ೧೯೮೦ ರ ವರೆಗೆ ಕೈಲಾಸಪರ್ವತದ ಯಾತ್ರೆ ನಿಂತುಹೋಗಿತ್ತು. ೧೯೮೦ರ ನಂತರ ಪ್ರತಿವರ್ಷ ಭಾರತದಿಂದ ಕೈಲಾಸಪರ್ವತಕ್ಕೆ ತೀರ್ಥಯಾತ್ರೆ ಕೈಗೊಳ್ಳಲು ನಿಗದಿತ ಸಂಖ್ಯೆಯ ಯಾತ್ರಿಕರಿಗೆ ಪರವಾನಿಗಿ ನೀಡಲಾಗುತ್ತಿದೆ. ಈ ಯಾತ್ರೆಯು ಭಾರತ ಮತ್ತು ಚೀನಾ ಸರಕಾರಗಳ ಮಾರ್ಗದರ್ಶನ ಮತ್ತು ನಿರ್ದೇಶನದಡಿ ನಡೆಯುವುದು. ಭಾರತೀಯರು ಸಾಮಾನ್ಯವಾಗಿ ಉತ್ತರಾಖಂಡ ದ ಕುಮಾವ್ ಹಿಮಾಲಯವನ್ನು ಕಾಲ್ನಡಿಗೆಯಲ್ಲಿ ದಾಟಿ ಕೈಲಾಸಪರ್ವತವನ್ನು ತಲುಪುವರು. ಈ ಪಾದಯಾತ್ರೆಯು ಅತಿ ದೀರ್ಘದಾರಿಯದು ಮತ್ತು ಅಪಾಯಕಾರಿ ಕೂಡ. ಬೇರೆ ಮಾರ್ಗಗಳೆಂದರೆ ಕಾಠ್ಮಂಡುವಿನಿಂದ ಅಥವಾ ಲ್ಹಾಸಾದಿಂದ ರಸ್ತೆಯ ಮೇಲಿನ ಪಯಣ. ಕಾಠ್ಮಂಡು ಮತ್ತು ಲ್ಹಾಸಾಗಳನ್ನು ಭಾರತದಿಂದ ವಿಮಾನಯಾನದ ಮೂಲಕ ತಲುಪಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್ಗಳಿಗೆ ತಂಬಾಕು ಬಳಕೆಯೇ ಕಾರಣ.
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ