ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ.
ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು ಹೊಂದಿರುವ ಈ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಈ ಪುಣ್ಯ ಕ್ಷೇತ್ರಕ್ಕೆ ದೇಶ ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಪುಣ್ಯ ಕ್ಷೇತ್ರದ ದರ್ಶನ ಪಡೆಯದಿದ್ದರೆ ತೀರ್ಥಯಾತ್ರೆಗಳು ಪೂರ್ಣಗೊಳ್ಳುವುದಿಲ್ಲ ಎಂಬ ಪ್ರತೀತಿ ಇದೆ. ಈ ದೇವಾಲಯದಲ್ಲಿ ವಿಷೇಶವಾಗಿ ಶ್ರೀ ಕೃಷ್ಣ ಮತ್ತು ವಿಷ್ಣುವನ್ನು ಆರಾಧಿಸಲಾಗುತ್ತದೆ. ಈ ದೇವಾಲಯಕ್ಕೆ ಮಧ್ವಾಚಾರ್ಯರು ಸೇರಿದಂತೆ ಹೆಸರಾಂತ ಆಚಾರ್ಯರೆಲ್ಲಾ ಈ ಕ್ಷೇತ್ರಕ್ಕೆ ಭೇಟಿ ನೀಡಿದ್ದರು ಎನ್ನಲಾಗಿದೆ. ಪ್ರಸಿದ್ದ ದೇವಾಲಯಗಳಾದ ರಾಮೇಶ್ವರಂ, ಬದರಿನಾಥ, ಪುರಿ ಮತ್ತು ದ್ವಾರಕ ದೇವಾಲಯಗಳ ಪೈಕಿ ಈ ಜಗನ್ನಾಥ ದೇವಾಲಯ ಒಂದಾಗಿದೆ
ದೇವಾಲಯದ ಮೇಲಿರುವ ಧ್ವಜ
ಈ ಪವಿತ್ರ ದೇವಾಲಯದ ಮೇಲೆ ಪುರಾತನ ಕಾಲದಿಂದಲೂ ಇರುವ ಧ್ವಜವಿದೆ. ಈ ಧ್ವಜವು ಯಾವಾಗಲೂ ಗಾಳಿಯ ವಿರುದ್ಧ ದಿಕ್ಕಿಗೆ ಹಾರುತ್ತದೆ. ವೈಜ್ಞಾನಿಕ ಸಂಗತಿಗಳಿಗೆ ಸವಾಲನ್ನು ಒಡ್ಡುವ ಈ ಒಂದು ಸಂಗತಿಯು, ವಿಜ್ಞಾನಕ್ಕೂ ಮಿಗಿಲಾದ ದೈವ ಶಕ್ತಿ ಇದೆ ಎನ್ನುವುದನ್ನು ತಿಳಿಸುತ್ತದೆ.
ಜಗನ್ನಾಥನ ಮೂರ್ತಿ ಪ್ರತಿಯೊಂದು ದೇವಾಲಯದ ದೇವತೆಗಳ ವಿಗ್ರಹವನ್ನು ಕಲ್ಲು ಅಥವಾ ಲೋಹಗಳಿಂದ ಮಾಡಲಾಗುವುದು ಸಾಮಾನ್ಯ ಆದರೆ ಈ ಜಗನ್ನಾಥನನ್ನು ಮರದಿಂದ ಮಾಡಿರುವುದಾಗಿದೆ.
ದೇವಾಲಯದ ರಚನೆ
ಈ ದೇವಾಲಯದ ಇನ್ನೊಂದು ವಿಶೇಷ ಎಂದರೆ ಇಲ್ಲಿ ನೆರಳು ಬೀಳದೆ ಇರುವುದು. ಈ ದೇವಾಲಯದ ಒಳಗೆ ಹಾಗೂ ಹೊರಗೆ ಯಾವುದೇ ಸಮಯದಲ್ಲಿ ನೆರಳು ಬೀಳುವುದಿಲ್ಲ. ಇದೊಂದು ಪ್ರಕೃತಿಯ ಪವಾಡ ಹಾಗೂ ದೈವ ಶಕ್ತಿ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.
ದೇವಾಲಯದ ಧ್ವಜ ಪುರಿ ಜಗನ್ನಾಥ ದೇವಾಲಯ ಗೋಪುರದ ಮೇಲೆ ಒಂದು ಧ್ವಜವಿದೆ. ಈ ಧ್ವಜವು ಯಾವಾಗಲೂ ದೇವಾಲಯದ ಹಿಂಭಾಗದಲ್ಲಿಯೇ ಹಾರಾಡುವುದು ಒಂದು ವಿಶೇಷ. ಈ ದೇಗುಲದ ಪೂಜಾರಿಗಳು ದಿನನಿತ್ಯ ಗೋಪುರದ ಮೇಲ್ಭಾಗದಲ್ಲಿರುವ ಧ್ವಜವನ್ನು ಬದಲಿಸುತ್ತಿರುತ್ತಾರೆ. ಆದರೂ ಕೂಡ ಈ ಧ್ವಜ ಎಂದಿಗೂ ತನ್ನ ದಿಕ್ಕನ್ನು ಬದಲಾಯಿಸಿಲ್ಲ.
ಸುದರ್ಶನ ಚಕ್ರ
ದೇವಸ್ಥಾನದಲ್ಲಿ ಇರುವ ಸುದರ್ಶನ ಚಕ್ರವು ೨೦ ಅಡಿ ಎತ್ತರ ಮತ್ತು ಒಂದು ಟನ್ ತೂಕವನ್ನು ಹೊಂದಿದೆ. ಇದನ್ನು ದೇವಾಲಯದ ಮೇಲ್ಭಾಗದಲ್ಲಿ ಅಳವಡಿಸಲಾಗಿದೆ. ಈ ಚಕ್ರದ ವಿಶೇಷ ಎಂದರೆ, ಪುರಿ ನಗರದ ಯಾವುದೇ ಭಾಗದಲ್ಲಿ ನಿಂತು ನೋಡಿದರೂ ಚಕ್ರ ಕಾಣುವುದು. ಅಲ್ಲದೆ ಈ ಚಕ್ರವನ್ನು ನೀವು ಎಲ್ಲಿ ನಿಂತು ನೋಡಿದರೂ ಅದರ ಮುಖ ನಿಮ್ಮೆಡೆಗೆ ಇರುವಂತೆ ತೋರುವುದು
ಗೋಪುರದ ನೆರಳು
ಈ ದೇವಾಲಯವನ್ನು ನಿರ್ಮಿಸಿದ ಇಂಜಿನಿಯರ್ಗಳು ದೇವಾಲಯದ ಗೋಪುರದ ನೆರಳು ಎಂದಿಗೂ ಕಾಣಿಸುವುದಿಲ್ಲ ಇದು ಆಶ್ಚರ್ಯವಾದರೂ ಸತ್ಯ.
ಹಾರಾಡುವುದಿಲ್ಲ
ವಿಶಿಷ್ಟ ರಚನೆ ಹಾಗೂ ಶಕ್ತಿಯನ್ನು ಹೊಂದಿರುವ ಈ ಸುದರ್ಶನ ಚಕ್ರದ ಮೇಲೆ ಯಾವುದೇ ಪಕ್ಷಿಗಳು, ಕೀಟಗಳು ಹಾಗೂ ವಿಮಾನಗಳು ಹಾರುವುದಿಲ್ಲ. ಅದು ಚಕ್ರದ ಒಂದು ದೈವ ಶಕ್ತಿಯ ಪ್ರಭಾವ ಎಂದು ಪರಿಗಣಿಸಲಾಗಿದೆ. ಈ ನಿಗೂಢ ವಿದ್ಯಮಾನಗಳಿಗೆ ಕಾರಣ ಏನು ಎನ್ನುವುದನ್ನು ಇದುವರೆಗೂ ಕಂಡುಹಿಡಿಯಲಾಗಿಲ್ಲ
ಸಮುದ್ರ ರಹಸ್ಯ ಈ ದೇವಾಲಯದ ಸಮೀಪದಲ್ಲಿ ಒಂದು ಕಡಲ ತೀರವಿದೆ. ದೇವಾಲಯದ ಮುಖ್ಯ ದ್ವಾರಕ್ಕೆ ಬಂದಾಗ ಅಲ್ಲಿ ಸ್ಪಷ್ಟವಾಗಿ ಆ ನದಿಯ ಜುಳು ಜುಳು ಶಬ್ದವನ್ನು ಕೇಳಿಸಿಕೊಳ್ಳಬಹುದು. ಇವೆಲ್ಲವೂ ಜಗನ್ನಾಥನ ಮಹಿಮೆಯಲ್ಲದೇ ಮತ್ತೇನು?. ದೇವಾಲಯದ ಒಳಭಾಗದಲ್ಲಿ ಸ್ವಲ್ಪ ದೂರ ನಡೆದು ಮತ್ತೆ ಮರಳಿ ದೌರದ ಹತ್ತಿರ ಬಂದರೆ ಸಮುದ್ರದ ಶಬ್ದ ನಿಮಗೆ ಕೇಳಿಸುವುದಿಲ್ಲ. ಬದಲಾಗಿ ಮತ್ತೊಮ್ಮೆ ದೇವಾಲಯ ಹೊರಭಾಗದಿಂದ ಒಳಗೆ ಪ್ರವೇಶ ಮಾಡುವಾಗ ಮಾತ್ರ ಈ ಶಬ್ದ ನಿಮಗೆ ಕೇಳಿಸುತ್ತದೆ.
ದೇವಾಲಯದ ರಚನೆ
ಈಗ ಇರುವ ದೇವಾಲಯವು ಹಿಂದಿನ ಚೋಳಕಾಲದಲ್ಲಿ ಬೇರೆಯೇ ರೀತಿ ಇತ್ತು. ಪುರಿಯಲ್ಲಿ ಜಗನ್ನಾಥ ದೇವಾಲಯವನ್ನು ಮೊದಲು ಸ್ಥಾಪನೆ ಮಾಡಿದವರು ಚೋಳರ ಅರಸರು, ಮೇಘಾನಂದ ಪಚ್ಚೇರಿ, ಮುಖ ಸಳ, ನಟ ಮಂಟಪ ಇನ್ನು ಹಲವಾರು. ಇದು ಎರಡನೇ ಬಾರಿ ಪುನರ್ ನಿರ್ಮಾಣ ಮಾಡಿರುವುದಾಗಿದೆ
ಪ್ರವೇಶ ದ್ವಾರಗಳ ವಿಶೇಷ
ಈ ದೇವಾಲಯದ ಮುಖ್ಯ ಪ್ರವೇಶ ದ್ವಾರದಲ್ಲಿ ಸಂಗೀತಗಳ ತರಂಗ ಕೇಳುವುದು. ಈ ದೇವಾಲಯದ ಒಳ ಪ್ರವೇಶಿಸಲು ನಾಲ್ಕು ಪ್ರಮುಖ ದ್ವಾರಗಳಿವೆ. ಇದರ ಮುಖ್ಯ ದ್ವಾರಕ್ಕೆ ಸಿಂಗದ್ವಾರ ಎಂದು ಕರೆಯುತ್ತಾರೆ. ಇಲ್ಲಿಂದ ಒಳಗೆ ದೇವರ ದರ್ಶನಕ್ಕೆ ತೆರಳುವಾಗ ಶಬ್ದಗಳ ತರಂಗಗಳು ಅಥವಾ ಧ್ವನಿಯು ಕೇಳುತ್ತವೆ. ಅದೇ ದ್ವಾರದ ಮೂಲಕ ನೀವು ಹಿಂತಿರುಗಿ ಬರುವಾಗ ಕೇಳುವುದಿಲ್ಲ. ಅಂತೆಯೇ ದೇವಸ್ಥಾನದ ಒಳಗೆ ಹೋದ ನಂತರ ದೀರ್ಘ ಸಮಯಗಳ ಕಾಲವೂ ಈ ಶಬ್ದಗಳು ಕೇಳುವುದಿಲ್ಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…