News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Place

ಕೇದಾರನಾಥ ದೇವಾಲಯ

69

ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ.



ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ ಕೇದಾರನಾಥವು ಅತಿ ಭೀಕರವಾದ ನೆರೆಗೆ ಒಳಗಾಗಿತ್ತು.


ಕೇದಾರನಾಥ ಪಟ್ಟಣದ ಅನೇಕ ಕಟ್ಟಡಗಳು ಹಾಗೂ ಇತರೆ ರಚನೆಗಳಿಗೆ ಸಿಕ್ಕಾಪಟೆ ಹಾನಿ ಉಂಟಾದರೂ ಕೇದಾರನಾಥ ದೇವಾಲಯಕ್ಕೆ ಅಷ್ಟೊಂದು ಹೇಳಿಕೊಳ್ಳುವ ಹಾನಿಯಾಗಿರಲಿಲ್ಲ. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಎತ್ತರದ ಪರ್ವತದಿಂದ ಹರಿದು ಬರುತ್ತಿದ್ದ ರಭಸದ ಜಲಧಾರೆಗೆ ದೊಡ್ಡದಾದ ಬಂಡೆಯೊಂದು ಅಡ್ಡ ನಿಂತು ದೇವಾಲಯಕ್ಕೆ ಹೆಚ್ಚಿನ ಹಾನಿ ಉಂಟಾಗಿರಲಿಲ್ಲ. ಇನ್ನೊಂದು ಆಸಕ್ತಿಕರ ವಿಷಯವೆಂದರೆ ಕೆಲ ಪಂಡಿತರು ಹೇಳುವ ಪ್ರಕಾರ, ಸಾಕ್ಷಾತ್ ಶಿವನೆ ಇಲ್ಲಿ ಕೇದಾರ ಖಂಡದ ಅಧಿದೇವನಾಗಿ ನೆಲೆಸಿರುವುದರಿಂದ ಮುಂದೆಯೂ ಈ ದೇವಾಲಯಕ್ಕೆ ಯಾವ ರೀತಿಯ ಹಾನಿಯೂ ಉಂಟಾಗುವುದಿಲ್ಲವಂತೆ. 2013 ರಲ್ಲಿ ಇಲ್ಲಿ ಪ್ರವಾಹ ಜರುಗಿದ ನಂತರ ಸಾಕಷ್ಟು ಹಾನಿಯುಂಟಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಜನರು ಅಸು ನಿಗಿದ್ದರು. ಹೀಗಾಗಿ ದೇವಾಲಯ ಮರು ನಿರ್ಮಾಣದ ಕೂಗೆದ್ದಿತ್ತು.

ಆದರೆ ಶಸ್ತ್ರಜ್ಞರು, ಪಂಡಿತರು, ವಿದ್ವಾಂಸರು ಹೇಳುವಂತೆ ಇಲ್ಲಿ ಈಗಾಗಲೆ ಸಾಕಷ್ಟು ದೇಹಗಳು ಭೂಮಿಯಲ್ಲಿ ಹಾಗೆಯೆ ಹೂತು ಹೋಗಿರುವುದರಿಂದ ನಕಾರಾತ್ಮಕ ಶಕ್ತಿಯು ಸಾಕಷ್ಟಿದ್ದು ಮೊದಲು ಪ್ರತಿ ಕಳೆಬರವನ್ನು ತೆಗೆದು ನಂತರ ಸ್ಥಳವನ್ನು ಶುದ್ಧಗೊಳಿಸಿ ನಂತರ 12 ಜ್ಯೋತಿರ್ಲಿಂಗಗಳ ಪೈಕಿ ಒಂದಾದ ಈ ದೇವಾಲಯದ ಮರು ನಿರ್ಮಾಣದ ಕಾರ್ಯ ಕೈಗೊಳ್ಳಬೇಕೆನ್ನುವುದು ಅವರ ಅಭಿಪ್ರಾಯವಾಗಿದೆ. ಭಕ್ತರ ಭಕ್ತಿ ಪರೀಕ್ಷಿಸುವ ಅಮರನಾಥ ಇನ್ನು ಈ ಸ್ಥಳಕ್ಕೆ ಸಂಬಂಧಿಸಿದಂತೆ ಕಥೆ ಏನೆಂದರೆ, ಹಿಂದೆ ಪಾಂಡವರು ಕುರುಕ್ಷೇತ್ರದ ಯುದ್ಧದ ನಂತರ ಶಿವನನ್ನು ದರ್ಶಿಸಿ ತಮ್ಮ ಮೇಲೆ ಬಂದೊದಗಿರುವ ಹತ್ಯಾ ಪಾಪಗಳಿಂದ ಮುಕ್ತರಾಗಬೇಕೆಂದು ಬಯಸಿದ್ದರು ಹಾಗೂ ಆ ಕಾರ್ಯದ ನಿಮಿತ್ತ ಕಾಶಿಗೆ ತೆರಳಿದ್ದರು. ಇದನ್ನರಿತ ಶಿವ ಅವರಿಗೆ ಕಾಣದ ಎತ್ತಿನ ವೇಶದಲ್ಲಿ ಉತ್ತರಾಖಂಡದ ಸ್ಥಳಕ್ಕೆ ತೆರಳಿದ್ದ.



ಈ ವಿಷಯ ತಿಳಿದುಕೊಂಡ ಪಾಂಡವರು ತಮ್ಮ ಪ್ರಯತ್ನ ಬಿಡದೆ ಉತ್ತರಾಖಂದ ಆ ಸ್ಥಳಕ್ಕೆ ತೆರಳಿ ಕಾಶಿಯಿಂದ ಬಂದ ಮಾರು ವೇಶದ ಶಿವನನ್ನು ಎತ್ತಿನ ರುಪದಲ್ಲಿರುವುದನ್ನು ಗಮನಿಸಿದರು. ಹೀಗೆ ಈ ಎತ್ತು ಕಂಡ ಸ್ಥಳವು ಗುಪ್ತಕಾಶಿಯಾಯಿತು. ನಂತರ ಅವರು ಶಿವನನ್ನು ಮೆಚ್ಚಿಸಿ ಅವನ ಆಶೀರ್ವಾದ ಪಡೆದು ಮೋಕ್ಷ ಹೊಂದಿದರು. ಇದಕ್ಕೆ ಸಂಕೇತವಾಗಿಯೆ ಇಲ್ಲಿ ತ್ರಿಕೋನಾಕಾರದ ಶಿವಲಿಂಗನನ್ನು ಕೇದಾರನಾಥನಾಗಿ ಪೂಜಿಸಲಾಗುತ್ತದೆ. ಈ ಸ್ಥಳದ ಮಹಿಮೆಯೆಂದರೆ ಯಾರು ಈ ಶಿವನನ್ನು ಭಕ್ತಿಯಿಂದ ಪೂಜಿಸುವರೊ ಅವರ ಎಲ್ಲ ಕರ್ಮಗಳು ಬಿಳುಚಿಕೊಂಡು ನಂತರ ಅವರು ತೀರಿ ಹೋದ ಮೇಲೆ ಕೈಲಾಸವನ್ನು ಸೇರುತ್ತಾರೆಂಬ ಪ್ರತೀತಿಯಿದೆ.


ಕೇದಾರನಾಥಕ್ಕೆ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗಿನ ಸಮಯ ಅನುಕೂಲ ಎನ್ನಬಹುದು. ಆದರೂ ಮಳೆಯ ಮುನ್ಸೂಚನೆಗಳನ್ನು ಆಧರಿಸಿ ಪ್ರವಾಸ ಯೋಜಿಸಿದರೆ ಉತ್ತಮ. ಮಂದಾಕಿನಿ ತಟದಲ್ಲಿರುವ ಕೇದಾರನಾಥಿಗೆ ರಸ್ತೆ ಮಾರ್ಗದಿಂದ ಹೋಗಬಹುದಾದರೂ ಕೊನೆಯ 14 ಕಿ.ಮೀ ಚಾರಣದ ಮೂಲಕವೆ ಪ್ರವೇಶಿಸಬೇಕು. ಏಕೆಂದರೆ ಅಷ್ಟೊಂದು ಕಠೋರವಾಗಿದೆ ಇಲ್ಲಿನ ಭೂಪ್ರದೇಶಗಳು. ಉತ್ತರಾಖಂಡದ ಪ್ರಭಾವಶಾಲಿ ದೇವಾಲಯಗಳು ಮುಂದೆ ಚಳಿಗಾಲದ ಸಮಯದಲ್ಲಿ ಇಲ್ಲಿ ವಿಪರಿತವಾದ ಹವಾಮಾನವಿರುತ್ತದೆ. ಎಲ್ಲ ಸ್ಥಳಗಳು ಮಂಜುಗಟ್ಟಿರುತ್ತವೆ ಹಾಗೂ ಈ ಸಂದರ್ಭದಲ್ಲಿ ಯಾವುದೆ ರಸ್ತೆ ಮಾರ್ಗಗಳು ಗೋಚರಿಸುವುದಿಲ್ಲ. ಈ ಆರು ತಿಂಗಳುಗಳ ಕಾಲ ಕೇದಾರನಥ ದೇವಾಲಯದಲ್ಲಿರುವ ಎಲ್ಲ ವಿಗ್ರಹಗಳನ್ನು ಉಖಿಮಠದಲ್ಲಿ ತಂದಿರಿಸಿ ಪೂಜಿಸಲಾಗುತ್ತದೆ.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

    ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

  • ದೇವರು

    ‘ಉಗ್ರ ಹನುಮಂತ’ಚಿತ್ರದ ಹಿಂದಿರುವ ರೋಚಕ ಸ್ಟೋರಿ ಗೊತ್ತಾ ನಿಮ್ಗೆ!ಈ ಚಿತ್ರ ಹೇಗೆ ಬಂತು ಗೊತ್ತಾ?

    ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಸುದ್ದಿ

    “ನಮ್ಮದು ಮಾಟಮಂತ್ರ ಮಾಡೋ ಕುಟುಂಬ ಅಲ್ಲ, ನನಗಿನ್ನೂ ಹುಚ್ಚು ಹಿಡಿದಿಲ್ಲ” ; ಅಚ್ಚರಿಯ ಹೇಳಿಕೆ ಕೊಟ್ಟ ಕುಮಾರಸ್ವಾಮಿ….!

    ಮಾಟಮಂತ್ರ ಮಾಡಿ ಸರ್ಕಾರ ಉಳಿಸಿಕೊಳ್ಳುವುದೇ ಹಾಗಿದ್ದರೆ ಜನರ ಬಳಿ ಏಕೆ ಹೋಗಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಶ್ನಿಸಿದರು.ವಿಧಾನಸಭೆಯಲ್ಲಿ ನಿನ್ನೆ ಮಂಡಿಸಿದ ಈ ಸದನವು ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಸಚಿವ ಸಂಪುಟಸಭೆಯಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ ಎಂಬ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರೆಸಿದ ಮುಖ್ಯಮಂತ್ರಿಗಳು, ನಮ್ಮ ಕುಟುಂಬ ಮಾಟಮಂತ್ರ ಮಾಡುವ ಕುಟುಂಬವಲ್ಲ ಎಂದು ಹೇಳಿದರು. ಆಗ ಆಡಳಿತ ಪಕ್ಷದ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ಬಗ್ಗೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ನೀಡಿದ್ದ…

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…