inspirational

ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

43

ಮಯೂನ್ ಎನ್
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.


ನಿಧಾನವಾಗಿ ಮತ್ತು ಆಳವಾಗಿ ಹೊಟ್ಟೆ ಉಬ್ಬಿ ಇಳಿಯುವಂತೆ ನಡೆಸುವ ಶ್ವಾಸೋಚ್ಛಾ ಸದಿಂದ ಅದ್ಭುತ ಲಾಭಗಳಿವೆ ಎಂದು ನಮ್ಮ ಪೂರ್ವಜರು ಹೇಳಿದ್ದಾರೆ. ಇದರ ಸತ್ಯಾಸತ್ಯತೆಯನ್ನು ವೈಜ್ಞಾನಿಕವಾಗಿ ಪರೀಕ್ಷಿಸಿದ ಇಂದಿನ ವೈದ್ಯರೂ ಸಹ ದೀರ್ಘ ಶ್ವಾಸೋಚ್ಛಾ ಸವನ್ನು ಅನುಮೋಸಿದ್ದಾರೆ. ದೊಡ್ಡ ದೊಡ್ಡ ದೇಶದಲ್ಲಿನ ದೊಡ್ಡ ದೊಡ್ಡ ಆಸ್ಪತ್ರೆಂiಲ್ಲಿನ ವೈದ್ಯರು ಈಗ ತಮ್ಮ ಎಲ್ಲ ರೋಗಿಗಳಿಗೆ ದೀರ್ಘ ಶ್ವಾಸೋಚ್ಛಾ ಸದ ಮೂಲ ಪಾಠಗಳನ್ನು ಬೋಧಿಸಲು ಪ್ರಾರಂಭಿಸಿದ್ದಾರೆ. ನೆಗಡಿಯಿಂದ ಹಿಡಿದು ಕ್ಯಾನ್ಸರ್ ವರೆಗಿನ ಎಲ್ಲ ರೋಗಗಳ ಉಪಶಮನದಲ್ಲಿ ದೀರ್ಘಶ್ವಾಸೋಚ್ಛಾ ಸದಿಂದ ಪ್ರಯೋಜನಗಳಿವೆ ಇಂದು ವೈದ್ಯರು ಕಂಡುಕೊಂಡಿದ್ದಾರೆ. ಹೀಗಾಗಿ ಕೆಲ ವೈದ್ಯರಂತೂ ತಮ್ಮ ಪರಿಣಿತ ಚಿಕಿತ್ಸೆಯನ್ನು ಬದಿಗೊತ್ತಿ ರೋಗಿಗಳಿಗೆ ದೀರ್ಘಶ್ವಾಸೋಚ್ಛಾ ಸದ ಮಹತ್ತ್ವವನ್ನು ಒತ್ತಿ ಒತ್ತಿ ಹೇಳಲಾರಂಭಸಿದ್ದಾರೆ.
ನಿಜಕ್ಕೂ ನಾವೀಗ ಅವಸರ ಅವಸರವಾಗಿ ತಪ್ಪುತಪ್ಪಾಗಿ ಉಸಿರಾಡುತ್ತಿದ್ದೇವೆ . ನಮ್ಮಲ್ಲಿನ ಮಾನಸಿಕ ಒತ್ತಡ, ಆಂತಕ, ಉದ್ವೇಗ ಹಾಗೂ ಉಸಿರಾಟದ ಬಗ್ಗೆ ಗಮನಹರಿಸದಿರುವುದೇ ಇದಕ್ಕೆ ಕಾರಣವಾಗಿದೆ. ಉಸಿರಾಟ ಅನೈಶ್ಚಿಕವಾಗಿ ನಡೆಯುವ ಕ್ರಿಯೆಯಾದರೂ ಚಿತ್ತೈಕಾಗ್ರತೆ ಇಂದ ನಮ್ಮ ಉಸಿರಾಟವನ್ನು ಉತ್ಕರ್ಷಗೊಳಿಸಿಕೊಳ್ಳಬಹುದು.
ನಿಧಾನವಾಗಿ ಹೊಟ್ಟೆಹೆಚ್ಚು ಉಬ್ಬುವಂತೆ ಉಸಿರನ್ನು ಎಳೆದುಕೊಂಡಾಗ ವಾಯು ಶ್ವಾಸಕೋಶದ ತಳದಲ್ಲಿ ಹೆಚ್ಚಾಗಿ ಜಮಾಯಿಸುತ್ತದೆ. ಆಗ ದೇಹಕ್ಕೆ ಹೆಚ್ಚು ಆಮ್ಲಜನಕ ಸೇರಲು ಹಾಗೂ ದೇಹದಿಂದ ಇಂಗಾಲ ಮುಂತಾದ ಕಲ್ಮಷ ಸಂಪೂರ್ಣವಾಗಿ ಹೊರಹೋಗಲು ಹೆಚ್ಚು ಅವಕಾಶ ದೊರೆಯ್ತುತದೆ. ಉತ್ತಮ ವಾಯುವಿನಿಮಯದಿಂದ ದೇಹದ ಆರೋಗ್ಯ ಉತ್ತಮಗೊಳ್ಳುತ್ತದೆ. ಉಸಿರಾಟದ ಗತಿ ನಿಮಿಷಕ್ಕೆ ಏಳು ಅಥವಾ ಎಂಟಕ್ಕೆ ಇಳಿಯುತ್ತದೆ. ಈ ಎಲ್ಲ ವಿದ್ಯಮಾನಗಳಿಂದ ಆರೋಗ್ಯದೊಂದಿಗೆ ಆಯುಷ್ಯವೂ ಹೆಚ್ಚುತ್ತದೆ. ಈಗಾಗಲೇ ರುಜುವಾತು ಆಗಿರುವಂತೆ ದೀರ್ಘಶ್ವಾಸೋಚ್ಛಾ ಸದಿಂದ ರಕ್ತದೊತ್ತಡ ತಗ್ಗುತ್ತದೆ. ಹೃದಯ ಬಡಿತ ಕಡಿಮೆಯಾಗುತ್ತದೆ. ದೇಹದ ಮಾಂಸಖಂಡಗಳು ಸಡಿಲಗೊಂಡು ವಿಶ್ರಾಂತಿ ಪಡೆಯುತ್ತವೆ. ಮಾನಸಿಕ ಉದ್ವೇಗ ತಗ್ಗತ್ತದೆ. ಮನಸ್ಸು ಪ್ರಶಾಂತವಾಗುತ್ತದೆ. ಮಾನವನು ಪ್ರತಿ ನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾ ಸರಾಸರಿ ಅರವತ್ತು ವರ್ಷಮಾತ್ರ ಬದುಕುತಿದ್ದಾನೆ. ಅದೇ ಆಮೆಯನ್ನು ನೋಡಿ ಅದು ನಿಮಿಷಕ್ಕೆ ಕೇವಲ ಮೂರ್‍ನಾಲ್ಕು ಬಾರಿ ಉಸಿರಾಡುತ್ತಾ ಬಹುದೀರ್ಘಕಾಲ ಬದುಕುತ್ತದೆ. ಚಿಕ್ಕ ಮಗುವನ್ನು ನೋಡಿ, ಅದು ಮಲಗಿದ್ದಾಗ ದೀರ್ಘವಾಗಿ ಉಸಿರಾಡುತ್ತಾ ಹೊಟ್ಟೆಯನ್ನು ಬಲೂನಿನಂತೆ ಉಬ್ಬಿಸುತ್ತದೆ. ಹೀಗಾಗಿ ನಾವೆಲ್ಲಾ ಮಕ್ಕಳಂತೆ ಉಸಿರಾಡಬೇಕು ಎನ್ನುತ್ತಾರೆ ತಜ್ಞ ವೈದ್ಯರು ಉಸಿರಾಟಂದ ಉತ್ತಮ ಪ್ರಯೋಜನಗಳನ್ನು ಪಡೆಯಲು ನಾವು ದೀರ್ಘವಾಗಿ ಹೊಟ್ಟೆ ಉಬ್ಬುವಂತೆ ಉಸಿರಾಡುವ ಕಲೆಯನ್ನು ಕರಗತಮಾಡಿಕೊಳ್ಳಬೇಕು. ಆರಂಭದಲ್ಲಿ ನಾವು ಪ್ರತಿದಿನ ಹತ್ತಿಪ್ಪತ್ತು ನಿಮಿಷ ನಮ್ಮ ಗಮನವನ್ನು ಉಸಿರಾಟದ ಮೇಲೆ ಹರಿಸಿ, ಚಿತ್ತೈಕಾಗ್ರತೆ ಇಂದ ಉಸಿರಾಟದಲ್ಲಿ ಸಾಕಷ್ಟು ಸುಧಾರಣಿಗಳನ್ನು ತಂದುಕೊಳ್ಳಬಹುದು. ಬೆನ್ನಮೇಲೆ ಮಲಗಿ ಹೊಟ್ಟೆ ಮೇಲೆ ಪುಸ್ತಕ ಇರಿಸಿ ಈ ಅಭ್ಯಾಸ ಮಾಡಬಹುದು. ಇಲ್ಲವೆ, ಕುಳಿತುಕೊಂಡು ಒಂದು ಕೈಯನ್ನು ಹೊಟ್ಟೆ ಮೇಲೆ, ಮತ್ತೊಂದು ಕೈಯನ್ನು ಎದೆ ಮೇಲೇ ಇರಿಸಿ ಅಭ್ಯಸಿಸಬಹುದು. ಪ್ರಾರಂಭದಲ್ಲಿ ನಮಗೆ ಕಾಣುವಂತೆ ಒಂದು ಗಡಿಯಾರವನ್ನು ಇರಿಸಿಕೊಳ್ಳುವುದು ಒಳ್ಳೆಯದು.

ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.

ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.

ವಿಳಾಸ: MAYOON N

DIRECTOR OF DRM CAREER BUILD CENTER

MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಸುದ್ದಿ

    ರಾಜ್ಯ ಸರ್ಕಾರದ ಹೊಸ ಟ್ರಾಫಿಕ್​ ರೂಲ್ಸ್ ಕಡಿತ ಬಗ್ಗೆ ಆದೇಶ ನೀಡಿದ ಮುಖ್ಯಮಂತ್ರಿ ಬಿಎಸ್​ವೈ,!ಇಷ್ಟಕ್ಕೂ ಏನು ಆ ಆದೇಶ ತಿಳಿಯಿರಿ,.?

    ಬೆಂಗಳೂರು,  ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್​ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್​ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…