ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಯೂನ್ ಎನ್
ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.
ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ ಉಸಿರನ್ನು ಎಳೆದುಕೊಳ್ಳಿ. ನಿಮ್ಮ ಎದೆ ಹೊಟ್ಟೆಗಿಂತಾ ಹೆಚ್ಚು ಉಬ್ಬಿದ್ದರೆ. ನೀವು ತಪ್ಪುತಪ್ಪಾಗಿ ಉಸಿರಾಡುತಿದ್ದೀರಾ ಎಂದು ತಿಳಿಯಿರಿ. ಬದಲಿಗೆ ಹೊಟ್ಟೆಯೇ ಎದೆಗಿಂತಾ ಹೆಚ್ಚು ಉಬ್ಬಿದ್ದರೆ ನೀವು ಸರಿಯಾಗಿ ಉಸಿರಾಡುತಿದ್ದೀರಿ ಎಂದು ತಿಳಿಯಿರಿ.


ಪ್ರ್ರಶಾಂತವಾದ, ಏಕಾಂತ ಸ್ಥಳವನ್ನು ಆಯ್ದುಕೊಳ್ಳಿ. ನಿಮ್ಮ ಕಣ್ಣಿಗೆ ಕಾಣುವಂತೆ ಸೆಕೆಂಡು ಮುಳ್ಳು ಇರುವ ಗಡಿಯಾರವನ್ನು ಇಟ್ಟುಕೊಳ್ಳಿ. ನಿಮ್ಮ ಉಡುಪು ಸಡಿಲವಾಗಿರಲಿ.
ಬೆನ್ನಮೇಲೆ ಮಲಗಿಕೊಳ್ಳಿ. ಹುಟ್ಟೆಮೇಲೆ ಹಗುರಾದ ಪುಸ್ತಕ ಇರಿಸಿ. ಚಿತ್ತೈಕಾಗ್ರತೆ ಇಂದ ನಿಧಾನವಾಗಿ ಆಳವಾದ ಉಸಿರನ್ನು ಎಳೆದುಕೊಳ್ಳಿ. ಹೊಟ್ಟೆ ಎದೆ ಉಸಿರಿನಿಂದ ತುಂಬಿದ ಅನಂತರ ಒಂದೆರಡು ಕ್ಷಣ ಉಸಿರನ್ನು ಹಾಗೇ ಹಿಡಿದುಕೊಳ್ಳಿ. ಅನಂತರ ನಿಧಾನ ನಿಧಾನವಾಗಿ ಉಸಿರನ್ನು ಹೊರಬಿಡಿ. ಉಸಿರಾಟದುದ್ದಕ್ಕೂ ಹೊಟ್ಟೆಯ ಮೇಲಿನ ಪಸ್ತಕ ಏರಿಳಿಯುವುದನ್ನು ಗಮನಿಸಿ.
ಆರಾಮವಾಗಿ ಕುಳಿತುಕೊಳ್ಳಿ. ಬಲಗೈಯನ್ನು ಹೊಟ್ಟೆಯ ಮೇಲಿಡಿ. ಎಡಗೈಯನ್ನು ಎದೆಯ ಮೇಲಿಡಿ. ಮೇಲಿನಂತೆ ನಿಧಾನವಾ ಆಳವಾಗಿ ಉಸಿರಾಡಿ. ಎಡಗೈ ನಿಶ್ಚಲವಾಗಿ, ಬಲಗೈ ಏರಿಳಿಯುತ್ತಿರುವುದನ್ನು ಗಮನಿಸಿ.
ಗಡಿಯಾರದಲ್ಲಿ ನಿಮ್ಮ ಶ್ವಾಸೋಚ್ಛಾ ಸದ ಗತಿಯನ್ನು ಲೆಕ್ಕ ಹಾಕಿ. ನಿಮ್ಮ ಉಸಿರಾಟ ನಿಮಿಷಕ್ಕೆ ಏಳು ಅಥವಾ ಎಂಟು ಬಾರಿ ಇರಬೇಕು.
ದೀರ್ಘಶ್ವಾಸೋಚ್ಛಾ ಸದ ಪ್ರಯೋಜನಗಳು:
ದೇಹಕ್ಕೆ ಅಧಿಕ ಆಮ್ಲಜನಕ ದೊರೆಯುತ್ತದೆ.
ದೇಹದ ಕಲ್ಮಶ (ಇಂಗಾಲ) ಸಂಪೂರ್ಣವಾಗಿ ವಿಸರ್ಜನೆಯಾಗುತ್ತದೆ.
ಹೃದಯದ ಮಿಡಿತ ಕಡಿಮೆಯಾಗುತ್ತದೆ. ಹೃದಯ ಗಟ್ಟಿಯಾಗುತ್ತದೆ.
ರಕ್ತದೊತ್ತಡ (ಬಿ. ಪಿ.) ಕಡಿಮೆಯಗುತ್ತದೆ.
ಮಾಂಸಖಂಡಗಳಿಗೆ ಸಡಿಲಗೊಂಡು ವಿರಮಿಸುವ ಅವಕಾಶ ಸಿಗುತ್ತದೆ.
ಮಾನಸಿಕ ಉದ್ವೇಗ, ಮಾನಸಿಕ ಒತ್ತಡ ನಿವಾರಣೆಯಾಗುತ್ತದೆ.
ಮನಸ್ಸು ಉಲ್ಲಾಸಗೊಳ್ಳುತ್ತದೆ, ಪ್ರಶಾಂತಗೊಳ್ಳುತ್ತದೆ.
ಆರೋಗ್ಯ ಉತ್ತಮವಾಗುತ್ತದೆ. ಆಯಷ್ಸು ಹೆಚ್ಚುತ್ತದೆ.
ವಿಳಾಸ: MAYOON N
DIRECTOR OF DRM CAREER BUILD CENTER
MANNAGER @ JEEVA SANJEEVANA NATURAL LIFE, KOLAR – 563101, ಕರ್ನಾಟಕ, ಭಾರತ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್ರೈಸರ್ಸ್ ಹೈದರಾಬಾದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ….
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.ಬಿಗ್ ಬಾಸ್ ಸೀಸನ್ ಆರರ ಸ್ಪರ್ಧಿ, ಟಾಪ್ ೫ ಫೈನಲಿಸ್ಟ್ ಗಳಲ್ಲಿ ಒಬ್ಬರಾದ ರ್ಯಾಪಿಡ್ ರಶ್ಮಿ ಅವರು ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯ ಕಥೆಯನ್ನು ಬಿಚ್ಚಿಟ್ಟಿದ್ದಾರೆ.. ಇನ್ನು ಬಿಗ್ ಬಾಸ್ ಮನೆಯಲ್ಲಿ ಕೊನೆಯವರೆಗೂ ಇದ್ದ ರ್ಯಾಪಿಡ್ ರಶ್ಮಿ ಟಾಪ್ 5 ಕಂಟೆಸ್ಟಂಟಾಗಿ ಎಲಿಮಿನೇಟ್ ಆಗಿ ಹೊರಬಂದಿದ್ದು ಇದೇ ಮೊದಲ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.