inspirational

ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

216

ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.

ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ‌ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕ‌ವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.

ಆಧ್ಯಾತ್ಮಕ್ಕಾಗಿ

 ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ‌ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.

ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.

ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ‌ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.

Published by : MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಸುದ್ದಿ

    ಧರ್ಮಸ್ಥಳದ ಧರ್ಮಾದಿಕಾರಿಗಳಾದ, ಡಾ.ವೀರೇಂದ್ರ ಹೆಗಡೆರವರು ನೂತನವಾಗಿ ನಿರ್ಮಿಸಿರುವ ಮನೆ ಹೇಗಿದೆ ಗೊತ್ತಾ..?ಈ ಲೇಖನ ನೋಡಿ…

    ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…