ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.
ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ
ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…