ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರು
ಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ ಮಾಡುವುದಿಲ್ಲ. ಅಲ್ಲದೇ ಆತ ಯಾವುದೇ ಹೊರಗಿನ ಪ್ರಪಂಚಕ್ಕೆ ಮೋಹಿತನಾಗಬಾರದೆಂಬ ಭಯದಿಂದ ಶುದ್ಧೋದನನು ತನ್ನ ಮಗನಿಗಾಗಿ ಎಲ್ಲಾ ರೀತಿಯ ಸಕಲ ಸೌಕರ್ಯಗಳನ್ನು ಒಳಗೊಂಡ ವೈಭವದಿಂದ ಕೂಡಿದ ಮೂರು ಅರಮನೆಗಳನ್ನು ಕಟ್ಟಿಸುತ್ತಾನೆ. ಹೀಗಾಗಿ ಗೌತಮ ಬುದ್ಧನು ಹೊರಗಿನ ಜಗತ್ತಿನ ಅರಿವಿಲ್ಲದೆಯೇ ಅರಮನೆಯಲ್ಲಿ ಬಂಧನಕ್ಕೆ ಒಳಗಾದಂತೆ ಬದುಕುತ್ತಾನೆ.


ಆದರೆ ಬುದ್ಧನು ಯಾವುದೇ ಧಾರ್ಮಿಕವಾದ ಭೋಧನೆಗಳನ್ನು ಪಡೆದುಕೊಳ್ಳದಿದ್ದರೂ ಕೂಡ ಒಂದು ದಿನ ಜಗತ್ತೇ ಮೆಚ್ಚುವಂತಹ ಮಹಾಪುರುಷನಾಗುವ ಎಲ್ಲಾ ಲಕ್ಷಣಗಳನ್ನು ಹೊಂದಿರುತ್ತಾನೆ. ಅತ್ಯಂತ ಸರಳ ಜೀವನವನ್ನು ನಡೆಸಿದ ಈತ ನೇಪಾಳದ ಶಾಕ್ಯ ಕುಲದ ರಾಜ ಶುದ್ಧೋದನ ಹಾಗೂ ರಾಣಿ ಮಾಯಾದೇವಿಯ ಪುತ್ರನಾದರೂ ಕೂಡ ಅಲ್ಲಿಯ ಜನರಿಗೆ ಈ ವಿಚಾರದ ಬಗೆಗೆ ಮಾಹಿತಿ ಇರುವುದಿಲ್ಲ. ನೇಪಾಳದ ಲುಂಬಿನಿ ಗ್ರಾಮದಲ್ಲಿ ಜನಿಸಿದ ಗೌತಮನು ಯಶೋಧರೆಯನ್ನು ಮದುವೆಯಾಗಿ ರಾಹುಲ ಎಂಬ ಪುತ್ರನ ತಂದೆಯಾಗುತ್ತಾನೆ.
ಆಧ್ಯಾತ್ಮದತ್ತ ಒಲವು
ತಾನು ಒಬ್ಬ ಮಹಾ ಯೋಗಿಯಾಗಬೇಕು, ಜ್ಞಾನಿಯಾಗಬೇಕೆಂಬ ತುಡಿತ ಇದ್ದುದರಿಂದ ಗೌತಮ ಬುದ್ದನು ಈ ವೈಭೋಗದ ಜೀವನದಿಂದ ಮುಕ್ತಿ ಪಡೆಯಲು ಹಾತೊರೆಯುತ್ತಾನೆ. ಅಲ್ಲದೇ ತಾನಿರುವ ಅರಮನೆಯ ಹೊರಗೆ ಏನಿದೆ ಎಂಬ ಕೌತುಕವೂ ತನ್ನಲ್ಲಿ ಹುಟ್ಟಿಕೊಳ್ಳಲಾರಂಭಿಸುತ್ತದೆ. ಹೀಗಿರುವಾಗ ಒಂದು ದಿನ ತನ್ನ 29 ನೇ ವಯಸ್ಸಿನಲ್ಲಿ ವಾಯುವಿಹಾರಕ್ಕಾಗಿ ಅರಮನೆಯಿಂದ ಹೊರಗಡೆ ಬಂದಾಗ ಅಲ್ಲಿ ನಾಲ್ಕು ವಿಚಾರಗಳನ್ನು ನೋಡಿ ಜೀವನದಲ್ಲಿ ತನಗರಿವಿಲ್ಲದೆಯೇ ಮೊದಲ ಬಾರಿಗೆ ಜಿಗುಪ್ಸೆಗೊಳ್ಳುತ್ತಾನೆ.ಅದೇನೆಂದರೆ ಓರ್ವ ಮುದುಕ, ರೋಗಿ, ಶವಯಾತ್ರೆ ಹಾಗೂ ಅಲೆದಾಡುವ ಓರ್ವ ತಪಸ್ವಿಯನ್ನು ಕಂಡು ದಿವ್ಯದರ್ಶನವಾಗುತ್ತದೆ. ಈ ನಾಲ್ಕು ವಿಚಾರಗಳನ್ನು ಕಂಡ ಕೂಡಲೇ ಗೌತಮನು ಕುತೂಹಲಕ್ಕೆ ಒಳಗಾಗುತ್ತಾನೆ.ನಂತರ ಅರಮನೆಗೆ ಹಿಂತಿರುಗಿ ನಿಜ ಜೀವನದ ಬಗೆಗೆ ತಿಳಿದುಕೊಳ್ಳಲು ಗುರುಗಳ ಹುಡುಕಾಟ ಮಾಡಲು ಬಹಳಷ್ಟು ಕಷ್ಟಪಡುತ್ತಾನೆ.ಆದರೆ ಯಾರೂ ಕೂಡ ಗೌತಮನಿಗೆ ಜೀವನದ ಬಗೆಗೆ ಸತ್ಯ ವಿಚಾರಗಳನ್ನು ತಿಳಿಸದೇ ಇದ್ದುದರಿಂದ ಬೇಸರಗೊಂಡ ಬುದ್ಧ ಸಂಸಾರ ಹಾಗೂ ಅರಮನೆಯನ್ನು ತ್ಯಾಗ ಮಾಡಿ ಜೀವನದ ಬಗೆಗೆ ತನಗಿರುವ ಪ್ರಶ್ನೆಗಳಿಗೆ ಉತ್ತರ ಹುಡುಕಲು ಒಂಟಿಯಾಗಿ ತೆರಳುತ್ತಾನೆ.
ಆಧ್ಯಾತ್ಮಕ್ಕಾಗಿ

ನಾಲ್ಕು ವಿಚಾರಗಳನ್ನು ಕಂಡ ನಂತರ ಬುದ್ಧನಿಗೆ ಜೀವನದ ಸತ್ಯತೆಯನ್ನು ತಿಳಿದುಕೊಳ್ಳುವ ಕುತೂಹಲ ಆತನ ಮನಸ್ಸನ್ನು ಬೆಂಬಿಡದೆ ಕಾಡಲಾರಂಭಿಸುತ್ತದೆ.ಹೀಗಾಗಿ ಜೀವನದ ಬಗೆಗೆ ಸಾಕ್ಷಾತ್ಕಾರ ಮಾಡಲು ತಾನು ಸನ್ಯಾಸಿಯಾಗುವ ವಿಚಾರವನ್ನು ತನ್ನ ತಂದೆ ಶುದ್ಧೋದನ ಹಾಗೂ ಮಡದಿ ಯಶೋಧರೆಗೆ ತಿಳಿಸಿ ಮನ ಒಲಿಸಲು ಪ್ರಯತ್ನಿಸುತ್ತಾನೆ.ಅಲ್ಲದೇ ಆತನ ಮಗ ರಾಹುಲನು ಕೂಡ ತನ್ನ ಏಳನೇಯ ವಯಸ್ಸಿಗೆ ಸನ್ಯಾಸಿಯಾಗಲು ತಂದೆಯೊಂದಿಗೆ ತೆರಳುತ್ತಾನೆ.
ಸತ್ಯ ಶೋಧಕ್ಕಾಗಿ ಪ್ರಪಂಚ ಪರ್ಯಟನೆ
ಜೀವನದ ಸತ್ಯತೆಯನ್ನು ತಿಳಿಯುವುದಕ್ಕಾಗಿ ಬುದ್ಧನು ತನ್ನ ಎಂಭತ್ತು ವರ್ಷದವರೆಗೆ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಪರ್ಯಟನೆಯ ಜೊತೆಜೊತೆಗೆ ಸತ್ಯ ದರ್ಶನದ ಬಗೆಗೆ ಜನರಿಗೆ ಭೋಧನೆಗಳನ್ನು ನಿರಂತರವಾಗಿ ಮಾಡುತ್ತಾನೆ ಹಾಗೂ ಬಡವ ಹಾಗೂ ದುರ್ಬಲರ ಸೇವೆಯನ್ನು ಮಾಡುತ್ತಾನೆ.ವಿಮೋಚನೆಗಾಗಿ ಕೆಲಸ ಕಾರ್ಯಗಳನ್ನು ಮಾಡಬೇಕು ಹಾಗೂ ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ ಹಾಗಾಗಿ ನಾವು ಪರರಿಗೆ ಹಾಗೂ ಮಾನವೀಯತೆಗೆ ಬೆಲೆ ಕೊಡಬೇಕು ಎಂಬುವುದು ಗೌತಮ ಬುದ್ಧನು ಭೋಧಿಸಿದ ಮುಖ್ಯ ತತ್ವಗಳು.
ಬುದ್ಧನು ಇಹ ಲೋಕವನ್ನು ತ್ಯಜಿಸುವಾಗ ಎಂಭತ್ತು ವರುಷಗಳಾಗಿದ್ದರೂ ಕೂಡ ಯಾವುದೇ ದಣಿವಿಲ್ಲದೇ ಸತ್ಯ ದರ್ಶನಕ್ಕಾಗಿ ನಿರಂತವಾದ ಪ್ರಪಂಚ ಪರ್ಯಟನೆ ಮಾಡುತ್ತಾನೆ. ಅಲ್ಲದೇ ಕೊನೆಗೆ ತನ್ನ ಅನುಯಾಯಿಗಳಿಗೆ ಈ ಜಗತ್ತಿನಲ್ಲಿ ಯಾವುದೂ ಶಾಶ್ವತ ಅಲ್ಲ.ಹಾಗಾಗಿ ನಿಮ್ಮ ವಿಮೋಚನೆಗಾಗಿ ಮಾತ್ರ ಕೆಲಸ ಮಾಡಿ ಎಂಬ ಕೊನೆಯ ನುಡಿಗಳನ್ನು ನೀಡಿ ಲೋಕದಲ್ಲಿ ಅಜರಾಮರನಾಗುತ್ತಾನೆ.
Published by : MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…