ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?
ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ..

ಆಶ್ಚರ್ಯವಾಯಿತೇ…?ಮುಂದೆ ಓದಿ..
ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ.

ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ “ತಲೆ ಕಸಿಗೆ’ ಪೂರ್ವಸಿದ್ಧತೆ ಎಂಬಂತೆ, ದೊಡ್ಡ ಇಲಿಯೊಂದರ ತಲೆಯ ಮೇಲೆ ಪುಟ್ಟ ಇಲಿಯ ತಲೆಯನ್ನು ಕಸಿ ಮಾಡಿದ್ದಾರೆ. ಆದರೆ, ಈ ಇಲಿಗಳು ಸರಾಸರಿ 36 ಗಂಟೆಗಳ ಕಾಲವಷ್ಟೇ ಬದುಕುಳಿದಿವೆ.
ಯಶಸ್ವಿ ಪ್ರಯೋಗ: ಚೀನದ ಹಾರ್ಬಿನ್ ವೈದ್ಯಕೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಪ್ರಯೋಗಕ್ಕೆ ಮೂರು ಇಲಿಗಳನ್ನು ಬಳಸಿದ್ದಾರೆ. ಸಣ್ಣ ಇಲಿ ದಾನಿಯಾಗಿಯೂ ಮತ್ತೆರಡು ದೊಡ್ಡ ಇಲಿಗಳ ಪೈಕಿ ಒಂದನ್ನು ರಕ್ತದ ಪೂರೈಕೆಗೆ ಹಾಗೂ ಮತ್ತೂಂದನ್ನು ಸ್ವೀಕರ್ತನಾಗಿ ಬಳಸಲಾಯಿತು. ರಕ್ತದ ಹರಿವನ್ನು ನಿಭಾಯಿಸಲು ಸಿಲಿಕಾನ್ ಟ್ಯೂಬ್ ಮೂಲಕ ಇಲಿಗಳ ರಕ್ತನಾಳಗಳನ್ನು ಒಂದಕ್ಕೊಂದು ಸಂಪರ್ಕಿಸಲಾಯಿತು.
ಅನಂತರ, ಮೂರನೇ ಇಲಿಯಿಂದ ದಾನಿ ಇಲಿಯ ತಲೆಗೆ ರಕ್ತದ ಪೂರೈಕೆ ಸಮರ್ಪಕವಾಗಿ ಆಗುವಂತೆ ಪಂಪ್ ಅನ್ನು ಬಳಸಲಾಯಿತು. ಈ ಮೂಲಕ ಶಸ್ತ್ರಚಿಕಿತ್ಸೆ ವೇಳೆ ಮೆದುಳಿನ ಅಂಗಾಂಶಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲಾಯಿತು. ಪರಿಣಾಮ, ಶಸ್ತ್ರಚಿಕಿತ್ಸೆ ಮುಗಿದ ಬಳಿಕವೂ ದಾನಿಯ ತಲೆಯು ಅಲ್ಲಾಡುತ್ತಿತ್ತು ಎಂದಿದ್ದಾರೆ ವಿಜ್ಞಾನಿಗಳು.

36 ಗಂಟೆ ಬದುಕಿತು: ಶಸ್ತ್ರಚಿಕಿತ್ಸೆ ಬಳಿಕ ಎರಡು ತಲೆಯ ಇಲಿಯು 36 ಗಂಟೆಗಳ ಕಾಲ ಬದುಕುಳಿಯಿತು. ಆದರೆ, ದೀರ್ಘಕಾಲ ಉಳಿಯುವಂತೆ ಮಾಡಲು ಸಾಧ್ಯವಿದೆ ಎನ್ನುವುದು ವಿಜ್ಞಾನಿಗಳ ವಿಶ್ವಾಸ.

ಸದ್ಯದಲ್ಲೇ ಜೀವಂತ ತಲೆ ಕಸಿ: ಮೊದಲ ಬಾರಿಗೆ ಜೀವಂತ ತಲೆ ಕಸಿ ಮಾಡಲು ಹೊರಟ ಡಾ| ಕ್ಯಾನವೆರೋ ಅವರನ್ನು ನಿಂದಿಸಿದವರೇ ಹೆಚ್ಚು. ಈಗ ಅವರು ವೆಲೆರಿ ಸ್ಪಿರಿಡೊನೋವ್ ಎಂಬ ವ್ಯಕ್ತಿಯೊಬ್ಬರಿಗೆ ತಲೆ ಕಸಿ ಮಾಡಲು ಮುಂದಾಗಿದ್ದಾರೆ. ದೈಹಿಕ ಶಕ್ತಿಯನ್ನು ಕಳೆದುಕೊಂಡು, ಹಲವು ವರ್ಷಗಳಿಂದ ವೀಲ್ಚೇರ್ನಲ್ಲೇ ಕಾಲ ಕಳೆಯುತ್ತಿರುವ ವೆಲೆರಿ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಅವರ ದೇಹವನ್ನು ಮೊದಲು ಘನೀಭವಿಸಿ (ಫ್ರೀಜ್), ಕುತ್ತಿಗೆ ಮತ್ತು ಬೆನ್ನುಹುರಿಯನ್ನು ಕತ್ತರಿಸಲಾಗುತ್ತದೆ. ಅನಂತರ ಅವರ ತಲೆಯನ್ನು ದಾನಿಯ ದೇಹಕ್ಕೆ ಅಳವಡಿಸಲಾಗುತ್ತದೆ. ಅಚ್ಚರಿಯೆಂದರೆ, ವೆಲೆರಿ ತಲೆಯನ್ನು ಮತ್ತೂಂದು ದೇಹಕ್ಕೆ ಕೂರಿಸಲು ವಿಶೇಷ ರೀತಿಯ ಅಂಟು (ಗಮ್) ಬಳಸಲಾಗು ತ್ತದೆ. ಇದು ಯಶಸ್ವಿಯಾದರೆ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.