ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು.
ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು, ದುಡಿಯುವವರು.
ರಾಜ್ ಬಿ ಶೆಟ್ಟಿ ಎರಡನೇ ವರ್ಗದ ನಿರ್ದೇಶಕ. ಅವರಿಗೆ ಸಿನಿಮಾ ಸೋಲು ಗೆಲುವಿನ ಭಯವಿಲ್ಲ. ತಾವು ಬರೆದ, ತಾವು ನಂಬಿದ ಕಥೆಯನ್ನು ತಮ್ಮ ಮನ ಮುಚ್ಚುವಂತೆ ಮುಂದೆ ಜನ ಮೆಚ್ಚೇ ಮೆಚ್ಚುತ್ತಾರೆ ಎಂಬ ಆಶಯದಲ್ಲಿ ಸಿನಿಮಾ ಮಾಡಿದ್ದಾರೆ. ಮತ್ತು ಆ ನಿಟ್ಟಿನಲ್ಲಿ ಭಾಗಶಃ ಗೆದ್ದಿದ್ದಾರೆ.
ಇಲ್ಲಿ ರಾಜ್ ಒಬ್ಬ ನಿರ್ದೇಶಕನಾಗಿ ಗೆಲ್ಲುವುದರ ಜೊತೆಗೆ ಒಬ್ಬ ಬರಹಗಾರನಾಗಿಯು ಬೆರಗು ಮೂಡಿಸುತ್ತಾರೆ.
ಪ್ರತಿ ಪಾತ್ರಕ್ಕೆ ಅವರು ನೀಡಿರುವ ಸಹಜ ಶೈಲಿಯ ವೈವಿಧ್ಯತೆ ಅಚ್ಚರಿ ಮೂಡಿಸುತ್ತದೆ. ಯಾವೆಲ್ಲ ಕಲಾವಿದರು ಹಾಸ್ಯ ಪಾತ್ರಗಳಿಗೆ ಲಾಯಕ್ಕು ಎಂದು ಭಾವಿಸಲಾಗಿತ್ತೋ ಅವರನ್ನೆಲ್ಲ ಗಂಭೀರ ಪಾತ್ರಗಳಲ್ಲಿ ತೋರಿಸಿ ಗೆಲ್ಲುವ ಮೂಲಕ ಒಬ್ಬ ಕ್ರಿಯಾಶೀಲ ನಿರ್ದೇಶಕ ಯಾವುದೇ ಕಲಾವಿದನ ಇಮೇಜ್ ಬದಲಿಸಬಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ..
ಎಲ್ಲಕ್ಕಿಂತ ಹೆಚ್ಚಾಗಿ ‘ಒಂದು ಮೊಟ್ಟೆಯ ಕಥೆ’ಯಲ್ಲಿ ಕೀಳರಿಮೆ ಹೊಂದಿದ್ದು, ಮಾತನಾಡಲು ಅಂಜುವ ಹಾಸ್ಯಮಯ ಪಾತ್ರಕ್ಕೆ ಜೀವ ತುಂಬಿದ್ದ ರಾಜ್, ಇಲ್ಲಿ ತಮ್ಮ ಇಮೇಜ್ ಅಕ್ಷರಶಃ ಬದಲಾಯಿಸಿದ್ದಾರೆ. ಅವರ ಉಗ್ರರೂಪ ಎಂಥವರನ್ನಾದರೂ ಅರೆಕ್ಷಣ ಬೆಚ್ಚಿ ಬೀಳಿಸುವಂತಿದೆ.
ಸಿನಿಮಾದಲ್ಲಿ ಕ್ರೈಂ ತುಂಬಿದ್ದರೂ, ಅಂಥ ಸನ್ನಿವೇಶಗಳಲ್ಲಿ ರಕ್ತ ಸಿಕ್ತ ದೃಶ್ಯಗಳನ್ನು ಜಾಣ್ಮೆಯಿಂದ ಮರೆಮಾಚಿ, ಧ್ವನಿ, ನೆರಳು, ಕ್ಯಾಮೆರಾ ಮೂಮೆಂಟ್ ಮೂಲಕವೇ ಆ ರೌದ್ರವನ್ನು ನೋಡುಗರಿಗೆ ಫೀಲ್ ಮಾಡಿಸುತ್ತಾರೆ. ಮತ್ತು ಅಂಥ ದೃಶ್ಯವನ್ನು ನೋಡುಗರಿಗೆ ಸಹ್ಯ ಎನಿಸುವಂತೆ ಮಾಡಿದ್ದಾರೆ. ಒಬ್ಬ ನಟನಾಗಿಯು ರಾಜ್ ಬಿ ಶೆಟ್ಟಿ ಪರಕಾಯ ಪ್ರವೇಶ ಮಾಡಿದ್ದಾರೆ. ರಿಷಭ್ ಶೆಟ್ಟಿ ಮತ್ತು ಗೋಪಾಲಕೃಷ್ಣ ದೇಶಪಾಂಡೆ ಆಯ್ಕೆ ಸಮರ್ಥ, ಅಭಿನಯ ಅದ್ಭುತ.
ಕನ್ನಡದಲ್ಲಿ ಕ್ರಿಯಾಶೀಲ ಕಥೆ ಮತ್ತು ನಿರ್ದೇಶಕರನ್ನು ಹುಡುಕುತ್ತಿದ್ದ ಸಿನಿಮಾಪ್ರಿಯರಿಗೆ ರಾಜ್ ಬಿ ಶೆಟ್ಟಿ ಹೊಸ ಆಶಾಕಿರಣ. ಒಂದು ಕಡೆ ಸಿನಿಮಾಸೂತ್ರಗಳನ್ನಿಟ್ಟುಕೊಂಡು ಅದದೇ ಹೀರೋಯಿಸಂ, ಬಿಲ್ಡಪ್, ಕೌಂಟರ್ ಡೈಲಾಗ್ ಆಧಾರಿತ ನಿರ್ದೇಶಕರು ಹೇರಳವಾಗಿರುವಾಗಿ, ಅದೆಲ್ಲದರ ಹೊರತಾಗಿಯು ಸಿನಿಮಾ ಮಾಡಬಲ್ಲೆ, ಮಾಡಿ ಗೆಲ್ಲಬಲ್ಲೆ ಎಂಬ ಮನೋಭಾವದ ವಿರಳ ನಿರ್ದೇಶಕರ ಸಾಲಿನಲ್ಲಿ ರಾಜ್ ನಿಲ್ಲುತ್ತಾರೆ.
ರಾಜ್ ಅವರಿಗೆ ಕಥನ ಹೇಳುವ ಶೈಲಿ ಚೆನ್ನಾಗಿ ಒಲಿದಿದೆ. ಒಂದು ಸಾಮಾನ್ಯ ಕಥೆಯನ್ನು ಹೊಸತನದ ನಿರೂಪಣಾ ಶೈಲಿಯಿಂದ ವಿಶೇಷವಾಗಿ ತೋರಿಸುತ್ತಾರೆ.
‘ಗರುಡ ಗಮನ ವೃಷಭ ವಾಹನ’ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದಾ ಎಂದು ಕೇಳಿದರೆ ನನ್ನ ಉತ್ತರ ಇಷ್ಟೇ.. ಅದು ನೋಡುಗರ ಅಭಿರುಚಿಯನ್ನು ಅವಲಂಬಿಸಿದೆ. ಕಮರ್ಷಿಯಲ್ ಸೂತ್ರಗಳ ಸಿನಿಮಾ ಪ್ರಿಯರಿಗೆ ಇದು ರುಚಿಸದಿದ್ದರೆ ಅಚ್ಚರಿಯಲ್ಲ. ಯಾವ ಸಿನಿಮಾಗಳು ಲೋಪ ದೋಷಗಳಿಗೆ ಹೊರತಲ್ಲ. ಅಂತೆಯೇ ಇಲ್ಲೂ ದ್ವಿತೀಯಾರ್ಧ ಸ್ವಲ್ಪ ಸುದೀರ್ಘವೆನಿಸುತ್ತದೆ. ಆದರೆ ಎಲ್ಲರ ನಿರೀಕ್ಷೆ ಮೀರಿದ ರೀತಿಯಲ್ಲಿ ಕಥೆ ಸಾಗುವುದರಿಂದ ಅಲ್ಲಲ್ಲಿ ವಾವ್ ಫ್ಯಾಕ್ಟರ್ ಗಳಿದೆ. ಮತ್ತದು ಇಷ್ಟವಾಗುತ್ತೆ.
ಆದರೆ ರಾಜ್ ಬಿ ಶೆಟ್ಟಿ ಒಂದಷ್ಟು ಅದ್ಭುತ ಸಿನಿಮಾಗಳನ್ನು ಕೊಡಬಲ್ಲ ಕನಸು ಮತ್ತು ಕಸುವನ್ನು ಹೊಂದಿರುವ ನಿರ್ದೇಶಕ ಎಂಬುದು ಸತ್ಯ.
ಅವರ ಸಿನಿಮಾಪ್ರೀತಿಗೆ, ಬರಹಕ್ಕೆ ಎಂಥವರಾದರೂ ಅಭಿಮಾನಿಯಾಗುತ್ತಾರೆ.
ಕ್ಯಾಮೆರಾ ವರ್ಕ್, ಎಡಿಟಿಂಗ್ ಸಕತ್ತಾಗಿ ಬ್ಲೆಂಡ್ ಆಗಿದೆ.
ಮಿಥುನ್ ಮುಕುಂದನ್ ಅವರ ಹಿನ್ನೆಲೆ ಸಂಗೀತ ಬೇರೆಯದೇ ಫೀಲ್ ಕೊಡುತ್ತದೆ, ಕಾಡುತ್ತದೆ, ಆವರಿಸುತ್ತದೆ.
ಇಂಥದ್ದೊಂದು ಕಥೆ ನಂಬಿ ಹಣ ಹೂಡಿದ ನಿರ್ಮಾಪಕರಿಗೂ ಮೆಚ್ಚುಗೆ ಸಲ್ಲಲೇಬೇಕು.
ಮಲಯಾಳಂ, ತಮಿಳಿನ ಪ್ರಯೋಗಾತ್ಮಕ ಚಿತ್ರಗಳನ್ನು ಮೆಚ್ಚಿ ಹೊಗಳುವವರಿಗೆ ಈ ಚಿತ್ರ ಹೆಚ್ಚು ಆಪ್ತ ಎನಿಸುತ್ತದೆ. ಮತ್ತು ನಾವು ಈಗ ಪರಭಾಷಾ ನಿರ್ದೇಶಕರ ಅಭಿಮಾನಿಗಳಿಗೂ ಈ ಚಿತ್ರವನ್ನು ರೆಫರ್ ಮಾಡಬಹುದು. ಆ ಬಳಿಕ ಅವರು ಸಹ ರಾಜ್ ಅವರನ್ನು ಹೊಗಳುವುದನ್ನು ಕಂಡು ಸಂಭ್ರಮಿಸಬಹುದು.
ಒಮ್ಮೆ ನೋಡಿ, ಹೊಸತನಕ್ಕೆ ಬೆಂಬಲ ನೀಡಿ.
Good luck and congratulations for the tremendous success Raj B Shetty
ಧನ್ಯವಾದಗಳೊಂದಿಗೆ
ಟಿ.ಜಿ.ನಂದೀಶ್, ತೀರ್ಥಹಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…