ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.
ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!
ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.