ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

ರಾಜಸ್ಥಾನದಲ್ಲಿ ಸೃಷ್ಟಿ ಕರ್ತನಾದ ಬ್ರಹ್ಮನಿಗೆ ದೇವಾಲಯವೊಂದಿದ್ದು, ಪುಷ್ಕರ್ ದೇವಾಲಯ ಎಂದೇ ಪ್ರಸಿದ್ಧಿ ಪಡೆದಿದೆ. ಬ್ರಹ್ಮನಿಗೆ ಭೂಲೋಕದಲ್ಲಿ ಪೂಜೆ ತಪ್ಪುವುದಕ್ಕೆ ಹಲವು ಪುರಾಣಗಳಲ್ಲಿ ಹಲವು ರೀತಿಯ ವಿವರಣೆಗಳಿವೆ. ಈ ಪೈಕಿ ಒಂದು ವಿವರಣೆ ಪ್ರಕಾರ ವಜ್ರನಭ ಎಂಬ ರಾಕ್ಷಸ ಭೂಮಿಯಲ್ಲಿ ಅತ್ಯಂತ ಉಪಟಳ ನೀಡುತ್ತಿದ್ದ. ಆಗ ಬ್ರಹ್ಮದೇವರು ಕಮಲದ ಹೂವನ್ನು ಆಯುಧವನ್ನಾಗಿ ಬಳಸಿಕೊಂಡು ಆತನನ್ನು ವಧೆ ಮಾಡುತ್ತಾನೆ. ಈ ಸಂದರ್ಭದಲ್ಲಿ ಕಮಲದ ಹೂವಿನ ಎಸಳುಗಳು ಭೂಮಿಯ ಮೂರು ಭಾಗಗಳಲ್ಲಿ ಬೀಳುತ್ತದೆ. ಆ ಪ್ರದೇಶಗಳಲ್ಲಿ ಜ್ಯೇಷ್ಠ, ಮಧ್ಯ, ಕನಿಷ್ಟ ಎಂಬ ಮೂರು ಸರೋವರಗಳು ಸೃಷ್ಟಿಯಾಗುತ್ತವೆ. ಬ್ರಹ್ಮನ ಕೈಯ್ಯಿಂದ ಕಮಲ ಬಿದ್ದಿದ್ದರಿಂದಾಗಿ ಅದಕ್ಕೆ ಪುಷ್ಕರ ಎಂಬ ಹೆಸರು ಬಂದಿದೆ ಎಂಬ ನಂಬಿಕೆ ಇದೆ.
ಪುರಾಣಗಳ ಪ್ರಕಾರ ಬ್ರಹ್ಮ ಯಜ್ಞ ಮಾಡಬೇಕಿರುತ್ತದೆ. ಮಡದಿ ಇಲ್ಲದೇ ಯಜ್ಞ ಮಾಡುವಂತಿಲ್ಲ. ಆದರೆ ಬ್ರಹ್ಮನ ಮಡದಿ ಸಾವಿತ್ರಿ ಆ ವೇಳೆಯಲ್ಲಿ ಅಲ್ಲಿರುವುದಿಲ್ಲ. ಯಜ್ಞ ಮಾಡಲೇಬೇಕಾದ್ದರಿಂದ ಬ್ರಹ್ಮ ಗಾಯತ್ರಿಯನ್ನು ವಿವಾಹವಾಗಿ ಯಜ್ಞವನ್ನು ಪೂರೈಸುತ್ತಾನೆ. ಸಾವಿತ್ರಿ ಬಂದು ನೋಡಿದಾಗ ಗಾಯತ್ರಿ ಬ್ರಹ್ಮನನ್ನು ವಿವಾಹವಾಗಿರುವುದು ತಿಳಿಯುತ್ತದೆ. ಇದರಿಂದ ಕೋಪಗೊಂಡ ಸಾವಿತ್ರಿ “ನಿನಗೆ ಭೂಲೋಕದಲ್ಲಿ ಪೂಜೆ ಇಲ್ಲದಂತಾಗಲಿ” ಎಂದು ಶಾಪ ನೀಡುತ್ತಾಳೆ. ಆದರೆ ಯಜ್ಞದಲ್ಲಿ ಭಾಗಿಯಾಗಿದ್ದ ಗಾಯತ್ರಿ ತನ್ನ ಶಕ್ತಿಯಿಂದ ಯಜ್ಞ ನಡೆದಿದ್ದ ಪುಷ್ಕರವನ್ನು ರಕ್ಷಿಸುತ್ತಾಳೆ, ಅದಕ್ಕಾಗಿಯೇ ಇಂದಿಗೂ ಪುಷ್ಕರದಲ್ಲಿ ಮಾತ್ರ ಬ್ರಹ್ಮನಿಗೆ ಪೂಜೆ ಸಲ್ಲುತ್ತದೆ ಎಂಬ ನಂಬಿಕೆ ಇದೆ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!
ಶಿವ ಬ್ರಹ್ಮನ ಒಂದು ತಲೆ ಕತ್ತರಿಸಿದ್ದಕ್ಕೂ ಪೂಜೆ ನಿಲ್ಲುವುದಕ್ಕೂ ಇದೆ ಕಾರಣ :-

ಬ್ರಹ್ಮಾಂಡದ ಸೃಷ್ಟಿಯ ವೇಳೆ ಬ್ರಹ್ಮ ಶತರೂಪಳೆಂಬ ಸುಂದರ ದೇವತೆಯನ್ನು ಸೃಷ್ಟಿಸಿದ. ತಾನೇ ಸೃಷ್ಟಿಸಿದ ಈ ದೇವತೆಯಿಂದ ಬ್ರಹ್ಮ ಮೋಹಗೊಂಡ. ಬ್ರಹ್ಮನ ದೃಷ್ಟಿಯನ್ನು ತಪ್ಪಿಸಿಕೊಳ್ಳಲು ಶತರೂಪ ಶತ ಪ್ರಯತ್ನ ನಡೆಸಿದಳಾದರೂ ಎಲ್ಲಾ ದಿಕ್ಕುಗಳಲ್ಲಿ ಆಕೆಯನ್ನು ಹಿಂಬಾಲಿಸಲು ಬ್ರಹ್ಮ ತಲೆಯೊಂದನ್ನು ರೂಪಿಸಿದ. ನಾಲ್ಕು ದಿಕ್ಕುಗಳು ಮತ್ತು ಇವುಗಳ ಮೇಲೊಂದು ಹೀಗೆ ಒಟ್ಟು ಐದು ತಲೆಯನ್ನು ಬ್ರಹ್ಮ ಹೊಂದಿದ. ಬ್ರಹ್ಮನನ್ನು ನಿಯಂತ್ರಿಸಲು ಶಿವ ಮೇಲಿನ ತಲೆಯನ್ನು ಕತ್ತರಿಸಿ ಹಾಕಿದ. ತಾನು ಸೃಷ್ಟಿಸಿದವಳ ಮೇಲೆ ತಾನೇ ಅವಳನ್ನು ಮೋಹಿಸುವುದು ತಪ್ಪೆಂದು ಶಿವ ಬ್ರಹ್ಮನಿಗೆ ಹೇಳಿದ. ಹಾಗಾಗಿ ಬ್ರಹ್ಮನಿಗೆ ಯಾರೂ ಪೂಜೆ ಸಲ್ಲಿಸಬಾರದೆಂದು ಶಿವ ಶಾಪ ನೀಡಿದ ಎಂದೂ ಹೇಳಲಾಗುತ್ತದೆ. ಆದ್ದರಿಂದಲೇ ತ್ರಿಮೂರ್ತಿಗಳಲ್ಲಿ ಇಬ್ಬರಾದ ವಿಷ್ಣು ಮತ್ತು ಶಿವನಿಗೆ ಮಾತ್ರ ಪೂಜೆ ಸಲ್ಲಿಸಲಾಗುತ್ತಿದೆ. ಬ್ರಹ್ಮನಿಗೆ ಒಂದು ಪ್ರದೇಶವನ್ನು ಹೊರತುಪಡಿಸಿ ಬೇರೆ ಎಲ್ಲಿಯೂ ಪೂಜೆ ಸಲ್ಲಿಸುವುದಿಲ್ಲ.
ಒಮ್ಮೆ ಬ್ರಹ್ಮ ಮತ್ತು ವಿಷ್ಣು ದೇವತೆಗಳ ನಡುವೆ ಯಾರೂ ಸವ್ರೋತ್ತಮರೆಂದು ವಾದ ಏರ್ಪಡುತ್ತದೆ. ಇಬ್ಬರ ನಡುವೆ ಅತಿ ಘೋರವಾದ ವಾದ ಉಂಟಾಗಲು, ಆಗ ಇವರ ಮಧ್ಯ ಆದಿ ಅನ್ತ್ಯಗಳಲ್ಲಿದ ಬೃಹದಾಕಾರವಾದ ಅಗ್ನಿ ಸ್ಥಂಭ ಲಿಂಗವು ಏರ್ಪಡುತ್ತದೆ. ಭಗವಾನ್ ಶಿವನು ಲಿಂಗದ ರೂಪದಲ್ಲಿ ಕಾಣಿಸಿಕೊಂಡು, ಈ ಲಿಂಗದ ಆದಿ, ಅಂತ್ಯ ಕಂಡುಹಿಡಿದವರು ಸವ್ರೋತ್ತಮರೆಂದು ಘೋಷಿಸುತ್ತಾರೆ. ಆಗ ಬ್ರಹ್ಮ ಮತ್ತು ನಾರಾಯಣರು ಲಿಂಗದ ಆದಿ ಮತ್ತು ಅಂತ್ಯ ಹುಡುಕಲು ಹೊರಡುತ್ತಾರೆ. ನಾರಾಯಣನು ಲಿಂಗದ ತುದಿಯ ಕಡೆ, ಮತ್ತು ಬ್ರಹ್ಮನು ಲಿಂಗದ ಶಿರದ ಕಡೆ ಹುಡುಕಲು ಹೊರದುತ್ತಾರೆ. ಆದ್ರೆ ಭಗವಾನ್ ನಾರಾಯಣನಿಗೆ ಅಂತ್ಯ ಸಿಗದೇ, ಈ ಶಿವ ಲಿಂಗಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ ಎಂದು ನಿರ್ಧರಿಸಿ, ವಾಪಸ್ ಆಗುತ್ತಾರೆ.
ಸುಲಭವಾಗಿ ತನ್ನ ಸೋಲನ್ನು ಒಪ್ಪದ ಬ್ರಹ್ಮದೇವರು, ಆದಿಯನ್ನು ಕಂಡುಹಿಡಿಯಲು ಹೋಗುತ್ತಿರುವಾಗ ಲಿಂಗದಿಂದ ಜಾರುತ್ತಿದ್ದ ಕೇದಗೆ ಪುಷ್ಪವನ್ನು ಕಂಡ ಬ್ರಹ್ಮದೇವರು, ಕೆದಗೆಯೊಡನೆ ಸಂಧಾನ ಮಾಡಿಕೊಂಡು, ನಾನು ಲಿಂಗದ ಆಡಿಯನ್ನು ಕಂಡೆ ಎಂಬ ಸುಳ್ಳನ್ನು ಹೇಳಬೇಕೆಂದು, ಕೇದಗೆ ಪುಷ್ಪವನ್ನು ಸಾಕ್ಷಿಯಾಗಿ ಕರೆತಂದನು. ಶಿವನಿಗೆ ನಾನು ಈ ಲಿಂಗದ ಆದಿಯನ್ನು ಕಂಡೆ ಎಂದು, ಸಾಕ್ಷಿಯಾಗಿ ಕೇದಗೆ ಪುಷ್ಪವನ್ನು ಕೇಳಲಾಗಿ, ಕೇದಗೆ ಪುಷ್ಪವು ಕೂಡ ಬ್ರಹ್ಮನ ಮಾತಿಗೆ ಸಹಕರಿಸಿತು. ಆಗ ಬ್ರಹ್ಮದೇವರ ಸುಳ್ಳಿನಿಂದ ಕ್ರುದ್ದನಾದ ಶಿವನು, ಇನ್ನುಮುಂದೆ ಮೂರು ಜಗತ್ತುಗಳಲ್ಲಿ ಯಾರೊಬ್ಬರೂ ನಿನ್ನನ್ನು ಪೂಜಿಸದಂತೆ ಇರಲಿ ಎಂಬ ಶಾಪವನ್ನು ಕೊಟ್ಟನು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…