ರಸ್ತೆ

ಫೆರಿಫೆರಲ್‌ ರಿಂಗ್‌ ರಸ್ತೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

166
  • 21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
  • 73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ
  • ಸುಮಾರು 38,000 ಮರಗಳ ಹನನ..!

ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್‌ಆರ್‌ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ

ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್‌ ರಿಂಗ್‌ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್‌ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್‌ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್‌ ರಿಂಗ್‌ ರಸ್ತೆ (ಪಿಆರ್‌ಆರ್‌)ಗೆ ಸುಪ್ರೀಂ ಕೋರ್ಟ್‌ ಹಸಿರು ನಿಶಾನೆ ತೋರಿದೆ.

ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್‌ಆರ್‌ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್‌ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

 

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.

15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.

ಪಿಆರ್‌ಆರ್‌ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ 5 ಸಂಚಿಕೆಯ ಎಲ್ಲಾ ಸ್ಪರ್ಧಿಗಳು ವಾರಕ್ಕೆ ಗಳಿಸುತ್ತಿದ್ದ ಸಂಭಾವನೆ ಎಷ್ಟು ಗೊತ್ತಾ..?ಯಾರಿಗೆ ಹೆಚ್ಚು, ಯಾರಿಗೆ ಅತೀ ಕಡಿಮೆ..ತಿಳಿಯಲು ಇದನ್ನು ಓದಿ…

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಮಳೆರಾಯನ ಅಬ್ಬರಕ್ಕೆ ತುಂಬಿದ ನದಿಗಳು,ವಾಹನ ಸವಾರರು ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ…!

    ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್‍ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • govt, modi

    ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

    ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…