ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಮಕೂರು ರಸ್ತೆ, ಹೊಸೂರು ರಸ್ತೆ ಸಂಪರ್ಕಿಸುವ ಪಿಆರ್ಆರ್ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ
ಯೋಜನೆ ಪೂರ್ಣಗೊಂಡ ನಂತರ, ಫೆರಿಫೆರಲ್ ರಿಂಗ್ ರಸ್ತೆಯು ಒಟ್ಟು 73 ಕಿ.ಮೀ ಉದ್ದ ಇರಲಿದ್ದು, ಇದು ಬೆಂಗಳೂರಿನ ಈಶಾನ್ಯ, ಪೂರ್ವ ಮತ್ತು ಆಗ್ನೇಯ ಭಾಗಗಳನ್ನು ಸಂಪರ್ಕಿಸಲಿದೆ. ನಗರದ ವಾಯುವ್ಯ, ಪಶ್ಚಿಮ ಮತ್ತು ನೈಋುತ್ಯ ಪ್ರದೇಶಗಳ ಮೂಲಕ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯನ್ನು ಸಂಪರ್ಕಿಸುವ ನೈಸ್ ರಸ್ತೆಯೊಂದಿಗೆ ಬೆಂಗಳೂರು ತನ್ನ ವ್ಯಾಪ್ತಿಯಲ್ಲಿ 116 ಕಿ. ಮೀ. ಉದ್ದದ ಬೈಪಾಸ್ ಹೊಂದಲಿದೆ.

ಬಹು ದಿನಗಳಿಂದ ಬಾಕಿ ಉಳಿದಿದ್ದ ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆ ಸಂಪರ್ಕಿಸುವ 8 ಪಥದ ಪೆರಿಫೆರಲ್ ರಿಂಗ್ ರಸ್ತೆ (ಪಿಆರ್ಆರ್)ಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ.
ಭೂ ಸ್ವಾಧೀನ ಮತ್ತು ಅನುದಾನ ಕೊರತೆಯ ಕಾರಣ ದಶಕಗಳಿಂದ ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಅಗತ್ಯ ಭೂಮಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ಪಿಆರ್ಆರ್ ಯೋಜನೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಕ್ಕೆ ಸೂಚಿಸಿದೆ.

ಯೋಜನೆಗೆ ತಾಂತ್ರಿಕ ವಿವರಗಳು ಮತ್ತು ಟೆಂಡರ್ಗಳನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ಇತ್ತೀಚಿಗೆ ಎರಡು ಸಭೆಗಳನ್ನು ನಡೆಸಿದೆ. ಯೋಜನಾ ವೆಚ್ಚ 21,091 ಕೋಟಿ ರೂ. ಆಗಿದ್ದು, ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ(ಪಿಪಿಪಿ) ರಸ್ತೆ ನಿರ್ಮಿಸಲು ಸರಕಾರ ಮತ್ತು ಬಿಡಿಎ ನಿರ್ಧರಿಸಿವೆ. ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಆಧಾರದ ಮೇಲೆ ಗುತ್ತಿಗೆದಾರರ ನಿರ್ಧಾರವಾಗುವ ನಿರೀಕ್ಷೆಯಿದೆ.

ಹಿಂದಿನ ಪ್ರಸ್ತಾವನೆಯಂತೆ ಯೋಜನೆಗಾಗಿ 33,000 ಮರಗಳನ್ನು ತೆರೆವುಗೊಳಿಸಬೇಕಿದೆ. ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಭೂಮಿ ಸ್ವಾಧೀನದ ಕಾರಣ ಹೆಚ್ಚುವರಿ 5,000 ಮರಗಳನ್ನು ತೆರೆವುಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಹೊಸ ಪ್ರಸ್ತಾವನೆಯನ್ನು ಬಿಡಿಎ ಸಲ್ಲಿಸಿದೆ ಎಂದು ತಿಳಿಸಿದರು.
15 ವರ್ಷಗಳ ಹಿಂದೆ ಯೋಜನೆಗೆ ಪ್ರಸ್ತಾವನೆ ಸಲ್ಲಿಸಿದಾಗ ಯೋಜನಾ ವೆಚ್ಚ 3 ಸಾವಿರ ಕೋಟಿ ರೂ. ಆಗಿತ್ತು. ಆದರೆ ಸುದೀರ್ಘ ವಿಳಂಬದ ಕಾರಣ ಯೋಜನಾ ವೆಚ್ಚು ಏಳು ಪಟ್ಟು ಹೆಚ್ಚಿದೆ. ಇತ್ತೀಚಿನ ಅಂದಾಜಿನ ಪ್ರಕಾರ, ಭೂಸ್ವಾಧೀನಕ್ಕೆಂದೇ 15,475 ಕೋಟಿ ರೂ. ವೆಚ್ಚವಾಗಲಿದೆ ಹಾಗೂ ಸಂಪೂರ್ಣ ಯೋಜನಾ ವೆಚ್ಚ 21,091 ಕೋಟಿ ರೂ. ನಿಗದಿಪಡಿಸಲಾಗಿದೆ.
ಪಿಆರ್ಆರ್ ನಿರ್ಮಾಣಕ್ಕೆ ಐರೋಪ್ಯ ಕಂಪನಿಗಳು ಮತ್ತು ಇಸ್ರೇಲಿ ಸಂಸ್ಥೆ ಆಸಕ್ತಿ ತೋರಿವೆ. ಆದರೆ ಇನ್ನೂ ಟೆಂಡರ್ ಪ್ರಕ್ರಿಯೆ ಆರಂಭವಾಗಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…