ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…