ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…