ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಬಾಯಿ ಹುಣ್ಣು ತುಂಬಾ ನೋವುಂಟು ಮಾಡುವುದು ಮಾತ್ರವಲ್ಲದೆ, ಆಹಾರ ಸೇವನೆಗೂ ಇದು ಅವಕಾಶ ನೀಡುವುದಿಲ್ಲ. ಇದು ಕೆಲವೊಮ್ಮೆ ಹಲವಾರು ದಿನಗಳ ಕಾಲ ಬಾಯಿಯಲ್ಲಿ ನೋವುಂಟು ಮಾಡುತ್ತ ಲಿರುತ್ತದೆ. ಇಂತಹ ಸಮಯದಲ್ಲಿ ಇದನ್ನು ನಿವಾರಣೆ ಮಾಡಲು ನೀವು ತುಂಬಾ ಶ್ರಮ ಪಟ್ಟಿರಬಹುದು. ಇದಕ್ಕೆ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ಅದು ತುಂಬಾ ಪರಿಣಾಮಕಾರಿ ಆಗಿ ಬಾಯಿಯ ಹುಣ್ಣು ನಿವಾರಣೆ ಮಾಡುತ್ತದೆ. ತೆಂಗಿನ ಎಣ್ಣೆ : ಉರಿಯೂತ ಶಮನಕಾರಿ, ಶಿಲೀಂಧ್ರ ವಿರೋಧಿ ಮತ್ತು ವೈರಲ್ ವಿರೋಧಿ ಗುಣಗಳನ್ನು ಹೊಂದಿರುವ ತೆಂಗಿನ ಎಣ್ಣೆಯು…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.