ಶಿಕ್ಷಣ

ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

83

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:

ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:

ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:

ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ,  ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:

ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.

 

 

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಸ್ಪೂರ್ತಿ

    ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

    ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಜ್ಯೋತಿಷ್ಯ

    ಶುಕ್ರವಾರದ ಈ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ.  .ನಿಮ್ಮ ಸಮಸ್ಯೆ.ಏನೇ…

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…