ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…