ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ

ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ಶಾಸಕ ರಮೇಶ್ಕುಮಾರ್ ಹೇಳಿಕೆ ನೀಡಿ, ಸಿದ್ದರಾಮಯ್ಯ ಕೋಲಾರಕ್ಕೆ ಬಂದರೆ ವರ್ತೂರು ಪ್ರಕಾಶ್ ಅಡ್ರೆಸ್ಗೆ ಇರಲ್ಲ ಎಂದು ಹೇಳಿದ್ದರ ವಿರುದ್ದ ಮಾತನಾಡಿ, ಶ್ರೀನಿವಾಸಪುರ,ಬಂಗಾರಪೇಟೆಯವರನ್ನಲ್ಲ, ಕೋಲಾರಕ್ಷೇತ್ರದ 5 ಸಾವಿರ ಜನಸೇರಿಸಿ ಸಮಾವೇಶ ಮಾಡಿ ತೋರಿಸಿ, ಎಂದು ಸವಾಲೆಸೆದರು.

ಕೋಲಾರ ಕ್ಷೇತ್ರದ ಚಿಂತೆಯನ್ನು ಘಟಬಂಧನ್ ನಾಯಕರು ಬಿಟ್ಟು ಅವರವರ ಕ್ಷೇತ್ರಗಳಲ್ಲಿ ಅವರುಗಳು ಮೊದಲು ಗೆಲ್ಲುತ್ತಾರಾ ಎಂಬುದರ ಬಗ್ಗೆ ಚಿಂತನೆ ಮಾಡಲಿ ಎಂದು ಛೇಡಿಸಿ, ಈಗಾಗಲೇ ಕೆ.ವೈ.ನಂಜೇಗೌಡ ಒಂದು ಹೆಜ್ಜೆ ಹೊರಗಿಟ್ಟಿದ್ದಾರೆ, ಬಂಗಾರಪೇಟೆಯಲ್ಲಿ ಎಸ್.ಎನ್.ನಾರಾಯಣಸ್ವಾಮಿ, ಶ್ರೀನಿವಾಸಪುರದಲ್ಲಿ ರಮೇಶ್ಕುಮಾರ್ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದರು.
ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಕೆಲಸ ಮಾಡುವವರೇ ಇಲ್ಲ,ಹಳ್ಳಿಗಳಿಗೆ ಪ್ರವಾಸ ಮಾಡಲು ಘಟಬಂಧನ್ ನಾಯಕರಿಗೆ ಸಮಯ ಇಲ್ಲದಿರುವಾಗ ಸಿದ್ದರಾಮಯ್ಯ ಪರ ಕೆಲಸ ಮಾಡುವವರು ಯಾರು ಎಂದು ಪ್ರಶ್ನಿಸಿದರು.
ಶಾಸಕ ರಮೇಶ್ಕುಮಾರ್ಗೆ ಬಾಯಿ ಹಿಡಿತವಿಲ್ಲ, ಸಿದ್ದರಾಮಯ್ಯ ರವರು ಕೋಲಾರದಲ್ಲಿ ಸ್ಪರ್ಧೆ ಮಾಡಿದರೆ ನಾನು ಅಡ್ರೆಸ್ ಗೆ ಇರುವುದಿಲ್ಲ ಎಂದಿದ್ದಾರೆ ಅದು ಅವರ ಘನತೆಗೆ ತಕ್ಕ ಮಾತಲ್ಲ ವಾಸ್ತವವಾಗಿ ಸಿದ್ದರಾಮಯ್ಯ ನವರನ್ನು ಕೋಲಾರಕ್ಕೆ ಕರೆತರುವುದರಿಂದ ಅದು ನನ್ನ ಗೆಲುವಿನ ಮೊದಲ ಮೆಟ್ಟಿಲಾಗಲಿದೆ, ಅದಕ್ಕೆ ರಮೇಶ್ಕುಮಾರ್ಗೆ ಮಾಧ್ಯಮದ ಮೂಲಕ ಧನ್ಯವಾದ ತಿಳಿಸುವೆ ಎಂದರು.

ರಾಜಕೀಯ ಲೆಕ್ಕಾಚಾರದ ಪ್ರಕಾರ ಕ್ಷೇತ್ರದ ಮತದಾರರ ಸಂಖ್ಯೆ 2 ಲಕ್ಷ 30 ಸಾವಿರ ಇದ್ದು, ಅಲ್ಪಸಂಖ್ಯಾತರ ಮತಗಳು 50 ಸಾವಿರ, ,ಹಿಂದೂಗಳ ಮತ 1 ಲಕ್ಷ 80 ಸಾವಿರ ಇದರಲ್ಲಿ ಕನಿಷ್ಟ ಐದು ಸಾವಿರ ಜನರನ್ನು ಕಾಸು ನೀಡದೆ, ಬೇರೆ ಕ್ಷೇತ್ರದ ಜನರನ್ನು ಸೇರಿಸದೆ ಕೇವಲ ಕೋಲಾರ ವಿಧಾನ ಸಭಾಕ್ಷೇತ್ರದ ಜನರನ್ನು ಮಾತ್ರ ಸೇರಿಸಿ ಸಮಾವೇಶ ನಡೆಸಿದರೆ ಆಗ ಘಟಬಂಧನ್ ನಾಯಕರುನ್ನು ಒಪುö್ಪತ್ತೇನೆ ಎಂದರು.
ಬಿ.ಜೆ.ಪಿ ಸರ್ಕಾರದ ಅಭಿವೃದ್ಧಿ ಕೆಲಸಗಳು,ಸ್ಥಳೀಯ ಶಾಸಕರ ವಿಫಲತೆ,ಸದಾ ಸಂಘಟನೆಯಲ್ಲಿ ತೊಡಗಿರುವ ತಮಗೆ ಕನಿಷ್ಠ 50 ಸಾವಿರ ಮತಗಳ ಅಂತರದಲ್ಲಿ ಗೆಲವು ಶತಸಿದ್ಧವೆಂದರು. ಒಂದು ವೇಳೆ ಜನವರಿ 9 ರಂದು ಸಿದ್ದರಾಮಯ್ಯ ನವರು ಕೋಲಾರಕ್ಕೆ ಬರುವುದು ನಿಶ್ಚಿತವಾದರೆ ಅಂದೇ ತಾವು ನನ್ನ ಬಲ ಪ್ರದರ್ಶನ ಮಾಡುವುದಾಗಿ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…