ಸರ್ಕಾರದ ಯೋಜನೆಗಳು

ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

61

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG

ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಇಲಾಖೆಯ ಈ ಆದೇಶದ ಹಿನ್ನಲೆಯಲ್ಲಿ, ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಕಾಯಿಲೆ

    19 ನೇ ಶತಮಾನದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಿತು

    1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.