ರಾಜಕೀಯ

ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

111

ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ.


ಈ ಮೂಲಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಗೊಂದಲಕ್ಕೆ ತೆರೆ ಬೀಳಲಿದೆ. ಜನವರಿ 9ರಂದು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದ್ದು, ಸಿದ್ದು ಆಪ್ತ ವಲಯ ಹಾಗೂ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಜನವರಿ 9ರಂದು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ವಿಚಾರವನ್ನು ಕೋಲಾರದಲ್ಲೇ ಘೋಷಣೆ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ಆಪ್ತ ವಲಯದ ಮಾಹಿತಿ ನೀಡಿವೆ.

ಇದೇ ತಿಂಗಳ 9ನೇ ತಾರೀಖಿನಂದು ಕೋಲಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ಹಿನ್ನೆಲೆ ತಾಲ್ಲೂಕಿನ ನರಸಾಪುರ ಹಾಗೂ ವೇಮಗಲ್ ಹೋಬಳಿಯ ಗ್ರಾಮಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ, ಸಿದ್ಧರಾಮಯ್ಯ ಕೋಲಾರಕ್ಕೆ ಆಗಮಿಸುತ್ತಿದ್ದು ಅವರಿಗೆ ಬೆಂಬಲ ನೀಡುವಂತೆ ಮಾಜಿ ಸಚಿವ ಕೃಷ್ಣಬೈರೇಗೌಡರು ಕರೆ ನೀಡಿದರು. ವಿಧಾನಸಭಾ ಕ್ಷೇತ್ರದಲ್ಲಿ ಜನರ ಮತ್ತು ಕಾರ್ಯಕರ್ತರಲ್ಲಿ ಇರುವ ಗೊಂದಲ ನಿವಾರಿಸಲು ಸಿದ್ಧರಾಮಯ್ಯನವರು ಇದೇ 9ನೇ ತಾರೀಖಿನಂದು ಕೋಲಾರಕ್ಕೆ ಆಗಮಿಸಿ ಗೊಂದಲಗಳನ್ನು ನಿವಾರಿಸಿ ಎಲ್ಲ ಕಾರ್ಯಕರ್ತರನ್ನೂ ಒಟ್ಟಿಗೆ ಕರೆಕೊಂಡು ಹೋಗಲಿದ್ದು, ಈ ಹಿಂದೆ ಕೋಲಾರ ಜಿಲ್ಲೆಗೆ 1300 ಕೋಟಿ ಅನುದಾನ ನೀಡಿ ಕೆ.ಸಿ.ವ್ಯಾಲಿ ನೀರನ್ನು ಒದಗಿಸಿ ಬರಡಾಗಿದ್ದ ಕೋಲಾರ ಈಗ ಮಲೆನಾಡಾಗಿದೆ,ಇಂತ ಹ ವ್ಯಕ್ತಿ ನಮ್ಮ ಕೋಲಾರದಿಂದ ಸ್ಪರ್ಧಿಸಿದರೆ ಜಿಲ್ಲೆಯೂ ಅಭಿವೃದ್ಧಿಯಾಗಲಿದೆ ಎಂದು ಚಂಜಿಮಲೆ ರಮೇಶ್ ಹೇಳಿದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ಸುದ್ದಿ

    ಟಿಕ್ ಟಾಕ್ ಖಾತೆ ಡಿಲಿಟ್ ಮಾಡಿ ದೇಶಪ್ರೇಮ ತೋರಿದ ಚಾಲೆಂಜಿಂಗ್ ಸ್ಟಾರ್. ಅಭಿಮಾನಿಗಳು ಖಾತೆ ಡಿಲೀಟ್.

    ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…