News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ರಥಸಪ್ತಮಿ ಮಹತ್ವ?

165
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?*

ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ ಮತ್ತು ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಏಳು ಕುದುರೆಗಳುಳ್ಳ ರಥವು ಸೂರ್ಯದೇವನ ವಾಹನವಾಗಿದ್ದು, ಈತ ದೇಹದಲ್ಲಿನ 7 ಚಕ್ರಗಳನ್ನು ಹಾಗೂ ಕಾಮನಬಿಲ್ಲಿನ 7 ಬಣ್ಣಗಳನ್ನು ಪ್ರತಿನಿಧಿಸುತ್ತಾನೆ.

ಹಿಂದೂ ಧರ್ಮದಲ್ಲಿ ನಾಗರಹಾವನ್ನು ಹೊರತುಪಡಿಸಿ ಕಣ್ಣಿಗೆ ಕಾಣುವ ದೇವರೆಂದು ಸೂರ್ಯದೇವನನ್ನು ಕರೆಯುತ್ತಾರೆ. ಈತನನ್ನು ಪ್ರತಿದಿನವು ನಾವು ನೋಡಬಹುದಾಗಿದೆ. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ. ಶೈವ ಧರ್ಮದಲ್ಲಿ ಸೂರ್ಯನನ್ನು ಶಿವನೆಂದು, ವೈಷ್ಣವ ಧರ್ಮದಲ್ಲಿ ವಿಷ್ಣುವೆಂದು ಪೂಜಿಸುತ್ತಾರೆ. ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ.

ಈಗಾಗಲೇ ಹೇಳಿರುವ ಹಾಗೇ ಹಿಂದೂ ಧರ್ಮದ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುತ್ತಾನೆ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುತ್ತಾನೆ. ಸೂರ್ಯ ದೇವನ ಕಿರಣಗಳಿಗೆ ಜನ ಜೀವನ ವನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಈತನ ಕೋಪಕ್ಕೆ ಕಾರಣರಾದವರು ಈತನ ಕಿರಣಗಳಿಂದಲೇ ಸುಟ್ಟು ಬಸ್ಮರಾಗುತ್ತಾರೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.

ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.

ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ (ಅನೂರು) ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.

*ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ*. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
*”ರಥ ಸಪ್ತಮಿ ಸ್ನಾನ ಮಂತ್ರ”* –
ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು

*ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |*

*ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||*

ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., … ರಥಸಪ್ತಮಿ ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _ಶುಭಕೃತ್ ನಾಮ_ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.

*ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |*
*ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |*
*ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |*
*ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |*
*ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |*
*ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |*

*ಸೂರ್ಯ ಅರ್ಘ್ಯ ಮಂತ್ರ –*
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
*ಸೂರ್ಯ ಮಂತ್ರಗಳು:*
ಸೂರ್ಯ ದೇವನನ್ನು ಮನಸ್ಸಾದಗಲೆಲ್ಲಾ ಪೂಜಿಸುವಂತಿಲ್ಲ. ಆತನನ್ನು ಪೂಜಿಸಲು ಪ್ರತ್ಯಕ ಸಮಯವಿದೆ. ಮುಂಜಾನೆ ಸೂರ್ಯ ಹುಟ್ಟಿದಾಕ್ಷಣ ಸ್ನಾನ ಮಾಡಿ ಪರಿಶುದ್ಧ ಮನಸ್ಸಿನಿಂದ ಆತನನ್ನು ಪೂಜಿಸಬೇಕು. ಸೂರ್ಯನನ್ನು ಪೂಜಿಸುವಾಗ ಪಠಿಸಬೇಕಾದ ಮಂತ್ರಗಳು ಹೀಗಿವೆ:

*ಸೂರ್ಯ ಮಂತ್ರ:*
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್‌ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ

ಈ ಮಂತ್ರವು ಸೂರ್ಯದೇವನನ್ನು ಹೊಗಳುವ ಮಂತ್ರವಾಗಿದೆ. ಈ ಮಂತ್ರದಲ್ಲಿ ಸೂರ್ಯನನ್ನು ಬ್ರಹ್ಮಾಂಡದ ಅಧಿಪತಿಯೆಂದು ಹೊಗಳಲಾಗುತ್ತದೆ. ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿಗಾಗಿ ಭಕ್ತರು ಸೂರ್ಯದೇವನನ್ನು ಪ್ರಾರ್ಥಿಸಲಾಗುತ್ತದೆ. ಮಾನವನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಈ ಮಂತ್ರಕ್ಕಿದೆ ಎಂದು ನಂಬಲಾಗಿದೆ.

*ಸೂರ್ಯ ಗಾಯತ್ರಿ ಮಂತ್ರ:*

ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್

*ಸೂರ್ಯ ವಶೀಕರಣ ಮಂತ್ರ:*
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ

*ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ*.🙏

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ….!ಇದನ್ನೊಮ್ಮೆ ಓದಿ..

    ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…

  • ಸುದ್ದಿ

    ಫೇಸ್ಬುಕ್ ಫೋಟೋ ನೋಡಿ ಲವ್ ಮಾಡಿದ…ಹುಡುಗಿಯನ್ನು ಭೇಟಿಯಾಗಲು ಹೋದಾಗ..!

    ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…

  • ಸುದ್ದಿ

    ಕೊರೋನಾ ವೈರಸ್ ಭಯದಲ್ಲಿದ್ದ ಜನರಿಗೆ ಮತ್ತೊಂದು ಶಾಕ್, ಬಂದಿದೆ ಇನ್ನೊಂದು ಖಾಯಿಲೆ!

    ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….