ಚುನಾವಣೆ

ಕರ್ನಾಟಕ ಮೇ.೧೦ ಚುನಾವಣೆ

24

ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ.

ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ.

ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು, ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನಾಮಪತ್ರಗಳ ವಾಪಸ್ ಪಡೆಯಲು ಏಪ್ರಿಲ್ ೨೪ ರಂದು ಅಂತಿಮ ದಿನವಾಗಿದ್ದು, ನಂತರ ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುತ್ತದೆ.

ನಾಮಪತ್ರಗಳ ವಾಪಸಾತಿಯಿಂದ ಹದಿನೈದು ದಿನಗಳ ಕಾಲ ಪ್ರಚಾರ ಕಾರ್ಯಕ್ಕಾಗಿ ಮೀಸಲಿಡಲಾಗಿದ್ದು, ಮೇ.೧೦ ರಂದು ಬುಧವಾರ ಮತದಾನ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ.

ಮೇ.೧೩ ರಂದು ಮತಗಳ ಎಣಿಕೆ ನಡೆದು ಅಂದು ಮಧ್ಯಾಹ್ನದ ವೇಳೆಗೆ ರಾಜ್ಯದ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.

ಇಂದಿನಿಂದಲೂ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿರುವುದರಿಂದ ಸರಕಾರಿ ವಾಹನ ಬಳಸಲು ನಿರ್ಬಂಧ ವಿಧಿಸಲಾಗಿದೆ. ಸರಕಾರಿ ಕಟ್ಟಡಗಳ ಬಳಕೆಗೂ ನಿರ್ಬಂಧವಿದ್ದು, ಚುನಾವಣಾ ಆಯೋಗದ ಅನುಮತಿಯನ್ನು ಪಡೆದ ನಂತರವೇ ಪ್ರಚಾರಕಾರ್ಯ, ಸಭೆ, ಸಮಾರಂಭಗಳನ್ನು ನಡೆಸಬಹುದಾಗಿದೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಸುದ್ದಿ

    ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

    ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸಿನಿಮಾ

    ಹುಚ್ಚ ವೆಂಕಟ್ ಸ್ವಂತ ಹೊಸ ಪಕ್ಷ ಶುರು ಮಾಡ್ತಾರಂತೆ ,ನನ್ಮಗಂದ್ ಪ್ರಧಾನಿ ಆಗ್ತಾರಂತೆ..!ತಿಳಿಯಲು ಈ ಲೇಖನ ಓದಿ..

    ಚಿತ್ರ ನಟ ಹುಚ್ಚ ವೆಂಕಟ್ ತಮ್ಮ ಗುರಿಯನ್ನು ಬಹಿರಂಗ ಮಾಡಿದ್ದಾರೆ. “ನಾನೇ ರಾಜಕೀಯ ಪಕ್ಷವೊಂದನ್ನು ಆರಂಭಿಸುತ್ತೇನೆ. ಈ ದೇಶದ ಪ್ರಧಾನ ಮಂತ್ರಿ ಆಗ್ತೀನಿ” ಎಂದು ಹೇಳಿದ್ದಾರೆ ವೆಂಕಟ್.

  • ಸುದ್ದಿ

    ಪತ್ನಿ ಕೇಳಿದಳೆಂದು ಮಾವಿನ ಮರವೇರಿದ ಜನಾರ್ದನ ರೆಡ್ಡಿ…..!

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…