News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

4044

ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

ಅದರಲ್ಲೂ ಮನೆಯಲ್ಲಿ ಯಾರಾದರೂ ಹಿರಿಯರು ಸಾವನ್ನಪ್ಪಿದರೆ ಕಿರಿಯರು ತಲೆಬೋಳಿಸಿಕೊಳ್ಳುವ ಸಂಪ್ರದಾಯವು ಇದೆ. ಹಿಂದಿನ ಕಾಲದಲ್ಲಿ ಪತಿ ಸಾವನ್ನಪ್ಪಿದರೆ ಪತ್ನಿಯ ತಲೆ ಬೋಳಿಸಲಾಗುತ್ತಿತ್ತು. ಆದರೆ ಆ ಕೆಟ್ಟ ಪದ್ಧತಿಯನ್ನು ಇಂದಿನ ದಿನಗಳಲ್ಲಿ ಅನುಸರಿಸಲಾಗುತ್ತಿಲ್ಲ. ತಂದೆ ಅಥವಾ ತಾಯಿ ಸಾವನ್ನಪ್ಪಿದರೆ, ಸಹೋದರ ಅಥವಾ ಸಹೋದರಿ ಸಾವನ್ನಪ್ಪಿದರೆ ಮಗ ಅಥವಾ ಅವರಿಗೆ ಸಂಬಂಧಪಟ್ಟವರು ತಲೆ ಬೋಳಿಸುವ ಪದ್ಧತಿ ಈಗಲೂ ಇದೆ. ಇದು ಯಾಕೆಂದು ತಿಳಿಯಲು ಈ ಲೇಖನವನ್ನು ಮುಂದಕ್ಕೆ ಓದುತ್ತಾ ಸಾಗಿ…

ಸಾವಿನ ಬಳಿಕ ಮುಂಡನ ಮಾಡುವುದು ಯಾಕೆ?

ಪತಿ ಸಾವಿನಿಂದ ವಿಧವೆಯಾಗುವ ಮಹಿಳೆಯ ತಲೆಯನ್ನು ಬೋಳಿಸಿ ಮುಂಡನ ನಡೆಸಲಾಗುತ್ತದೆ. ಈ ಮುಂಡನವು ಜೀವಮಾನಪೂರ್ತಿ ಉಳಿದಿರುತ್ತದೆ ಮತ್ತು ವಿಧವೆಯರು ಕೂದಲು ಬೆಳೆಸುವುದಿಲ್ಲ. ಮೇಲ್ಜಾತಿಯಲ್ಲಿ ಇದು ಹೆಚ್ಚಾಗಿ ಕಂಡುಬರುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಇದನ್ನು ಪಾಲಿಸುವವರ ಸಂಖ್ಯೆ ತೀರ ಕಡಿಮೆಯಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಪುರುಷರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ತಾತ್ಕಾಲಿಕವಾಗಿರುತ್ತದೆ ಮತ್ತು ಕೆಲವೇ ಸಮಯದಲ್ಲಿ ಕೂದಲು ಬೆಳೆಯುತ್ತದೆ.

ಶೋಕದ ಸಂಕೇತ

ಕುಟುಂಬದಲ್ಲಿ ದುಃಖದ ಘಟನೆ ನಡೆದಿದೆ ಮತ್ತು ನಾವು ಶೋಕದಲ್ಲಿ ಇದ್ದೇವೆ ಎನ್ನುವುದನ್ನು ಸೂಚಿಸಲು ಮುಂಡನ ಮಾಡಲಾಗುತ್ತದೆ. ಪರಿಚಯಸ್ಥರು ಶೋಕದಲ್ಲಿರುವ ವ್ಯಕ್ತಿಯೊಂದಿಗೆ ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಪ್ರತೀಕಾರದ ಸಿದ್ಧಾಂತ ಬಿಡುವುದು

ಕೂದಲು ಪ್ರತೀಕಾರದ ಸಿದ್ಧಾಂತವನ್ನು ತ್ಯಜಿಸುವುದರ ಸಂಕೇತವಾಗಿದೆ. ತಾತ್ಸಾರ ಭಾವನೆಯನ್ನು ಬಿಟ್ಟು ಸತ್ತವರು ಬಿಟ್ಟು ಹೋಗಿರುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುವುದೇ ಮುಂಡನದ ಉದ್ದೇಶವಾಗಿದೆ.

ಧನಾತ್ಮಕ ಶಕ್ತಿ

ದುಃಖದಿಂದ ಯಾವಾಗಲೂ ನಕಾರಾತ್ಮಕತೆ ಆವರಿಸುತ್ತದೆ. ಕೂದಲು ಬೋಳಿಸಿಕೊಂಡು ಹೊಸ ಜೀವನಕ್ಕೆ ತಯಾರಾಗುವುದು, ಅಂತಿಮ ಕ್ರಿಯೆಗಳಿಗೆ ಧನಾತ್ಮಕವಾಗಿ ತಯಾರಾಗುವುದು ಮತ್ತು ಬದ್ಧತೆ ಹಾಗೂ ಏಕಾಗ್ರತೆಯಿಂದ ಇದನ್ನು ಪೂರೈಸುವುದು ಮುಂಡನದ ಉದ್ದೇಶವಾಗಿದೆ.

ಬೇರ್ಪಡುವಿಕೆ ಮತ್ತು ವೈರಾಗ್ಯ ಹೆಚ್ಚಿಸುವುದು

ತುಂಬಾ ಪ್ರೀತಿಪಾತ್ರರು ಮತ್ತು ಮನಸ್ಸಿಗೆ ಹತ್ತಿರವಾಗಿರುವವರು ಸಾವನ್ನಪ್ಪಿದರೆ ಆಗ ಭಾವನಾತ್ಮಕವಾಗಿ ಪರಿಣಾಮ ಉಂಟಾಗುತ್ತದೆ. ಇದುವರೆಗೆ ಹಿರಿಯರಿಂದ ಸಿಗುತ್ತಿದ್ದ ಮಾರ್ಗದರ್ಶನ ಮತ್ತು ಸಲಹೆಗಳು ಇನ್ನು ಸಿಗುವುದಿಲ್ಲವೆನ್ನುವ ನೋವು ಇರುತ್ತದೆ. ವೈರಾಗ್ಯವನ್ನು ಬಿಟ್ಟು ಜೀವನಕ್ಕೆ ತಯಾರಾಗಬೇಕು ಎನ್ನುವುದು ಮುಂಡನದ ಉದ್ದೇಶವಾಗಿದೆ.

ಶುದ್ಧೀಕರಣ ವೃತ

ಹಿರಿಯರು ಸಾವನ್ನಪ್ಪಿದಾಗ ಅವರ ಅಂತ್ಯಕ್ರಿಯೆ ಮತ್ತು ಇತರ ವಿಧಿವಿಧಾನಗಳನ್ನು ಮಾಡುವವರು ತಲೆ ಬೋಳಿಸಿಕೊಳ್ಳುತ್ತಾರೆ. ಇದು ಶುದ್ಧೀಕರಣ ವ್ರತವಾಗಿದೆ. ಇದು ದೈಹಿಕ ಹಾಗೂ ಮಾನಸಿಕವಾಗಿ ಸತ್ತವರಿಗೆ ಮಾಡುವ ಅಂತಿಮ ವೃತವಾಗಿದೆ.

ಅಹಂ ತ್ಯಜಿಸುವುದು

ಮನೆಯಲ್ಲಿನ ಪುರುಷರು ತಲೆಬೋಳಿಸಿಕೊಳ್ಳುವುದು ಅವರು ತಮ್ಮ ಅಹಂ ಬಿಟ್ಟ ಸಂಕೇತವಾಗಿದೆ. ಮನೆಯಲ್ಲಿ ಹಿರಿಯರು ಸಾವನ್ನಪ್ಪಿದಾಗ ಅವರಿಂದ ಬಿಡುವಾದ ಜಾಗವನ್ನು ತುಂಬುವಾಗ ವ್ಯಕ್ತಿಯಲ್ಲಿ ಅಹಂ ಬರಬಹುದು ಮತ್ತು ಇದನ್ನು ಬಿಟ್ಟು ಮನೆಯವರೊಂದಿಗೆ ಒಳ್ಳೆಯ ರೀತಿಯಿಂದ ನಡೆದುಕೊಳ್ಳಬೇಕೆನ್ನುವ ಸಂಕೇತವೇ ಈ ಮುಂಡನ

ಗೌರವದ ಸಂಕೇತ

ಸತ್ತವರಿಗೆ ಗೌರವ ಸೂಚಕವಾಗಿಯೂ ಮುಂಡನ ಮಾಡಲಾಗುತ್ತದೆ. ಹಲವಾರು ವರ್ಷಗಳಿಂದ ಕುಟುಂಬದಲ್ಲಿ ಪ್ರೀತಿಯಿಂದ ಇದ್ದು, ಕಿರಿಯರಿಗೆ ಮಾರ್ಗದರ್ಶನ ನೀಡಿ ಮುಂದಿನ ಜೀವನಕ್ಕೆ ಬೇಕಾಗುವ ದಾರಿಯನ್ನು ಮಾಡಿರುವ ಹಿರಿಯರು ಸಾವನ್ನಪ್ಪಿದಾಗ ಅವರಿಗೆ ಗೌರವ ಸೂಚಕವಾಗಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎನ್ನುವ ಉದ್ದೇಶದಿಂದ ಮುಂಡನ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಉಪಯುಕ್ತ ಮಾಹಿತಿ

    ನಿಮ್ಮ ಬಳಿ ಆಧಾರ್ ಕಾರ್ಡ್ ಇದೆಯೇ?ಹಾಗಿದ್ದರೆ ಈ ಯೋಜನೆಯಿಂದ ನಿಮಗೆ ಸಿಗುತ್ತೆ 2000!ಈಗಲೇ ಈ ಮಾಹಿತಿ ನೋಡಿ

    ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….