ರಾಜಕೀಯ

ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

95

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…