ರಾಜಕೀಯ

ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

99

ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು. ಪ್ರಣಾಳಿಕೆ ರಚಿಸಿರುವ ಸಚಿವ ಡಾ.ಸುಧಾಕರ್ ನೇತೃತ್ವದ ಸಮಿತಿಯು ವಿವಿಧ ವಲಯಗಳ ನಿರೀಕ್ಷೆಗಳು, ಅಗತ್ಯತೆಗಳ ಕುರಿತು ವಲಯವಾರು ತಜ್ಞರ ಜೊತೆ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿ, ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?:
ಬಿಪಿಎಲ್ ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ.

ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‍ಗಳಲ್ಲಿ ಅಟಲ್ ಆಹಾರ ಕೇಂದ್ರವನ್ನು ಸ್ಥಾಪಿಸುತ್ತೇವೆ.

ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆಜಿ ಶ್ರೀ ಅನ್ನ- ಸಿರಿ ಧಾನ್ಯವನ್ನು ಒಳಗೊಂಡ ಪಡಿತರ ಕಿಟ್ ನೀಡುತ್ತೇವೆ.

ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಇದರಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.

ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ SME ಗಳು ಮತ್ತು ITI ಗಳ ನಡುವೆ ಸಮನ್ವಯತೆ ಸಾಧಿಸುತ್ತೇವೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡುತ್ತೇವೆ.

ಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿ ಯೋಜನೆಯನ್ನು ಪ್ರಾರಂಭಿಸುತ್ತೇವೆ. ಈ ಯೋಜನೆಯಡಿ ಎಸ್‍ಸಿ, ಎಸ್‍ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ – 10 ಸಾವಿರದವರೆಗೆ ತಾಳಿಯಾಗುವ ಠೇವಣಿ ನೀಡುತ್ತೇವೆ.

ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್ ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರುತ್ತೇವೆ ಹಾಗೂ ಕಂದುಕೊರತೆಗಳ ಪರಿಹಾರಕ್ಕೆ ಆನ್ ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸುತ್ತೇವೆ.

ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುತ್ತೇವೆ.

ರಾಜ್ಯದಾದ್ಯಂತ ನಿವೇಶನ ರಹಿತ, ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ 10 ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.

ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾ೦ಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸುತ್ತೇವೆ.

ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‍ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯ ಕಲ್ಪಿಸುತ್ತೇವೆ.

ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ರಾಜ್ಯ ರಾಜಧಾನಿ ಪ್ರದೇಶ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವುಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್‍ನ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ ಕಲ್ಪಿಸುತ್ತೇವೆ.

ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸುತ್ತೇವೆ. ಪೂರಕವಾಗಿ, ಚಾಜಿರ್ಂಗ್ ಸ್ಟೇಷನ್‍ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‍ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‍ಗಳನ್ನು ಎಲೆಕ್ಟ್ರಿಕ್ ಬಸ್‍ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ಇಬಿ ಸಿಟಿ ಅಭಿವೃದ್ಧಿಗೊಳಿಸುವುದು.

ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 30,000 ಕೋಟಿ ಮೊತ್ತದ ಕೆ-ಅಗ್ರಿ ಫಂಡ್ ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‍ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‍ಗಳನ್ನು ಸ್ಥಾಪಿಸುತ್ತೇವೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಅರವಿಂದ್ ಲಿಂಬಾವಳಿ, ಶೋಭಾರಂದ್ಲಾಜೆ, ಧಮೇರ್‍ಂದ್ರ ಪ್ರಧಾನ್ ಇತರರಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಶುದ್ದೀಕರಿಸಿದ ನೀರನ್ನು ಕುಡಿಯುವುದಕ್ಕೆ ಮುಂಚೆ ಈ ಲೇಖನಿ ಓದಿ….

    ಶುದ್ದಿಕರಿಸಿದ ಈ ನೀರನ್ನು ಕುಡಿಯುವುದರಿಂದ ಮನುಷ್ಯರ ಡಿಏನ್ ಗೆ ಹಾನಿಯುಂಟಾಗುವ ಸಾದ್ಯತೆಗಳಿವೆ ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…

  • ರಾಜಕೀಯ

    ರಾಹುಲ್ ಗಾಂಧಿಯವರಿಗೆ ಯಾವಾಗ ಮದುವೆ ಎಂದು ಕೇಳಿದ್ದು ಯಾರು ಗೊತ್ತಾ…? ತಿಳಿಯಲು ಈ ಲೇಖನ ಓದಿ…

    ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.