ಬ್ಯಾಂಕ್

2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

93

ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ.

ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ.
2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ಸೂಚನೆ.
ಸದ್ಯ 2,000 ರೂ ನೋಟು ಹೊಂದಿದ್ದರೆ ಅವರು ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು.

2 ಸಾವಿರ ರೂ. ನೋಟ್ ಬ್ಯಾನ್: ಚಲಾವಣೆ ಸ್ಥಗಿತಗೊಳಿಸಿದ RBI, ಸೆ. 30 ರವರೆಗೆ ಕರೆನ್ಸಿ ಬದಲಾವಣೆಗೆ ಅವಕಾಶ
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ.

ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ

ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು.

2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ.

2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು.

ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ.

ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ.

ನವದೆಹಲಿ : ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ ಮಾಡಿಕೊಳ್ಳುವಂತೆ ಎಲ್ಲರಿಗೂ ತಿಳಿಸಿದೆ.

ಶುಕ್ರವಾರ ಬಿಡುಗಡೆ ಪ್ರಕಟಣೆಯಲ್ಲಿ ಭಾರತೀಯ ರಿಸರ್ವರ್‌ ಬ್ಯಾಂಕ್ ಮಾಹಿತಿ ನೀಡಿದ್ದು,” 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಲಾಗಿದೆ. ಅಕ್ಟೋಬರ್‌ 1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ. ಹೀಗಾಗಿ, ಸೆ.30ರ ಒಳಗೆ ಸಾರ್ವಜನಿಕರು ಬ್ಯಾಂಕ್‌ಗಳಿಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬೇಕು ” ಎಂದು ಸೂಚನೆ ನೀಡಿದೆ.

ಮೇ 23 ರಿಂದ ಬದಲಾವಣೆಗೆ ಅವಕಾಶ
ಸದ್ಯ 2,000 ರೂಪಾಯಿ ನೋಟು ಹೊಂದಿದ್ದರೆ ಮೇ 23ರ ನಂತರ ಸಮೀಪದ ಬ್ಯಾಂಕ್‌ಗೆ ತೆರಳಿ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಆದರೆ, ಒಮ್ಮೆಗೆ 10 ನೋಟುಗಳ ಅಂದರೆ 20 ಸಾವಿರ ರೂಪಾಯಿ ಮಾತ್ರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.


2016 ರಲ್ಲಿ 500 ಹಾಗೂ 1000 ನೋಟ್‌ ಬ್ಯಾನ್‌ ಆಗಿತ್ತು
2016ರ ನವೆಂಬರ್‌ 8 ರಂದು 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯೀಕರಣದ ನಂತರ ಹೊಸದಾಗಿ 2000 ರೂ. ನೋಟುಗಳನ್ನು ಪರಿಚಯಿಸಲಾಗಿತ್ತು. ಸದ್ಯ ಆ ನೋಟಿನ ಚಲಾವಣೆ ನಿಲ್ಲಿಸಿ ವಾಪಸ್ ಪಡೆಯುವುದಾಗಿ ಆರ್‌ಬಿಐ ತಿಳಿಸಿದೆ.

ಐದು ವರ್ಷಗಳ ಹಿಂದೆಯೇ ನೋಟು ಮುದ್ರಣ ಸ್ಥಗಿತ
2018ರಲ್ಲಿಯೇ 2000 ರೂಪಾಯಿ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಲಾಗಿತ್ತು. ಈ ಕುರಿತಾಗಿ ಸದನಕ್ಕೆ ಕೇಂದ್ರ ಸರ್ಕಾರ ಮಾಹಿತಿ ನೀಡಲಾಗಿತ್ತು. ಇದೀಗ ಕ್ಲೀನ್ ನೋಟ್ ಅಭಿಯಾನದಡಿ ನೋಟ್‌ಗಳನ್ನು ಹಿಂಪಡೆಯಲು ಆರ್‌ಬಿಐ ಮುಂದಾಗಿದೆ. ಮೇ 23, 2023ರಿಂದ ಯಾವುದೇ ಬ್ಯಾಂಕ್‌ನಲ್ಲಿ 2000 ನೋಟುಗಳನ್ನು ಇತರ ಮುಖಬೆಲೆಯ ನೋಟುಗಳಾಗಿ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಸೂಚಿಸಿದೆ.

ಸೆಪ್ಟೆಂಬರ್‌ 30 ನಂತರವೂ ಕಾನೂನು ಬದ್ದವಾಗಿರುತ್ತವೆ
ಜನರು ಬ್ಯಾಂಕ್‌ಗಳೊಂದಿಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು 4 ತಿಂಗಳ ಸಮಯ ಸಾಕು. ಚಲಾವಣೆಯಲ್ಲಿರುವ ಹೆಚ್ಚಿನ ರೂ 2000 ನೋಟುಗಳು ಸೆಪ್ಟೆಂಬರ್ 30 ರ ನಿರ್ದಿಷ್ಟ ಸಮಯದ ಚೌಕಟ್ಟಿನೊಳಗೆ ಬ್ಯಾಂಕ್‌ಗಳಿಗೆ ಹಿಂತಿರುಗುತ್ತವೆ ಎಂದು ಆರ್‌ಬಿಐ ಹೇಳಿದೆ. ಸೆಪ್ಟೆಂಬರ್ 30 ರ ನಂತರವೂ ಕಾನೂನುಬದ್ಧವಾಗಿ ಉಳಿಯುತ್ತದೆ. ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.


2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?
ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್​ಚೇಂಜ್ ಮಾಡಬಹುದು.
ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್​ಗೆ ಡೆಪಾಸಿಟ್ ಮಾಡಬಹುದು.

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಸುದ್ದಿ

    ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

    ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.  ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಉಪಯುಕ್ತ ಮಾಹಿತಿ

    ಅಡುಗೆ ಮನೆಯಲ್ಲಿರುವ ಈ ಕರಿಮೆಣಸಿನ ಬಗ್ಗೆ ನಿಮ್ಗೆ ಗೊತ್ತಿಲ್ಲದ ಪ್ರಯೋಜನಗಳು..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ..

    ಮಸಾಲೆಗಳ ರಾಣಿಯಂದೇ ಖ್ಯಾತಿ ಪಡೆದಿರುವ ಕಾಳು ಕರಿ ಮೆಣಸು. ಅಡುಗೆ ಮನೆಯಲ್ಲಿ ಇದರದ್ದೇ ಕಾರು ಬಾರು, ಸಾಮಾನ್ಯವಾಗಿ ಇದನ್ನ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ, ಇದು ಅಡುಗೆಯ ರುಚಿಯನ್ನ ಹೆಚ್ಚಿಸುತ್ತದೆ. ಇದು ಬಹಳ ಕಾರವಾಗಿದ್ದು ಇದರ ಸೇವನೆ ಆರೋಗ್ಯಕ್ಕೆ ಬಹಳ ಉಪಯುಕ್ತಕಾರಿ. ಕಾಳು ಮೆಣಸು ನಮ್ಮ ದೇಹದ ಅನೇಕ ರೋಗಗಳನ್ನ ಕಡಿಮೆ ಮಾಡುತ್ತದೆ. * ಶೀತ-ನೆಗಡಿ:- 2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಬೆಲ್ಲದ ಜೊತೆ ಸೇರಿಸಿ ತಿನ್ನುವುದ್ರಿಂದ ಶೀತ-ನೆಗಡಿ ಕಡಿಮೆಯಾಗುತ್ತದೆ. ಕಾಳು ಮೆಣಸಿನ ಪುಡಿಯ ವಾಸನೆಯನ್ನು ತೆಗೆದುಕೊಳ್ಳುವುದ್ರಿಂದ ಸೀನು,…