inspirational

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

60

ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ

ಪಡಿಕ್ಕಲ್ ಯಾವ್ ಬಸ್ಸನ್ನ ಹತ್ಕೊಂಡು ಬಂದ..? ಅರೆ ಇವ್ನು ರೆಡ್ಡಿಗಾರು ಎಲ್ಲಿಂದ ಬಂದ..? ರಾಣಾ ಇಲ್ಲೇನ್ ಮಾಡ್ತಾ ಇದಾನೆ..? ಧ್ರುವ ಜುರೇಲ್ ಕೂಡ ಆಡ್ತಾ ಇದಾನಾ..? ಅವರು ನೋಡಿದ್ರೆ ಅವರ ಬೆಸ್ಟ್ ಟೀಮ್ ತಂದಿದೆ. ಬೌಲಿಂಗ್ ಲೈನ್ ಅಪ್ ನೋಡಿದರೆ ಎದೆಯೊಳಗೆ ಜಲ್ಲಿ ಮಶೀನ್ ಆನ್ ಆದ ಹಾಗಿದೆ.

ಖವಾಜಾ, ಸ್ಮಿತ್, ಹೆಡ್, ಲಬುಶೇನ್, ಮಾರ್ಶ್, ಕ್ಯಾಪ್ಟನ್ ಕಮ್ಮಿನ್ಸ್, ಸ್ಟಾರ್ಕ್, ಹೆಜಲ್ವುಡ್, ನಥಾನ್ ಲಿನ್ ಯಪ್ಪ.. ಅನುಭವಿಗಳೇ ಎಲ್ ನೋಡಿದರೂ ಕಾಣೋದು. ಮೊದಲ ಮ್ಯಾಚ್ ದೇವರಿಗೆ ಅಂತ ಭಾರತದ ಮೊದಲ ಇನ್ನಿಂಗ್ಸ್ ನೋಡಿ ನನ್ನನ್ನೂ ಸೇರಿ ಅನೇಕರಿಗೆ ಅನಿಸಿರಬಹುದು. ಇದಕ್ಕೆ ಇನ್ನೊಂದು ಕಾರಣ ಟೀಮಲ್ಲಿ ಕಂಡ ಮುಖಗಳು.

ಆದ್ರೆ ಈ ಆಟದಲ್ಲಿ ಏನನ್ನೂ ಬೇಗ ನಿರ್ಧರಿಸಬಾರದು ಅನ್ನೋದನ್ನ ಈ ಹಿಂದೆ ಅನೇಕ ಪಂದ್ಯಗಳು ಸಾಬೀತು ಮಾಡಿವೆ. ಮೊದಲ ಇನ್ನಿಂಗ್ಸಲ್ಲಿ ನಮ್ದು 150..ಆಸ್ಟ್ರೇಲಿಯಾ 104..ಕೊನೆ ವಿಕೆಟಿಗೆ ಬಂದ 25 ರನ್ನುಗಳ ಪಾರ್ಟ್​ನರ್ ಶಿಪ್ ಅತಿ ದೊಡ್ಡದು. ಬುಮ್ರಾ , ರಾಣಾ, ಸಿರಾಜ್ ಎಸೆದಿದ್ದು ಬೆಂಕಿ ಉಂಡೆಗಳನ್ನ. ಎರಡೂ ತಂಡದ ಮೊದಲ ಇನ್ನಿಂಗ್ಸ್ ಸೇರಿಸಿದ್ರೆ ಆಗೋದು 254 ರನ್ಸ್.. ಆದ್ರೆ ಈಗ ಭಾರತ ಗೆದ್ದ ಲೀಡ್ 295 ರನ್ಸ್.. 🔥

ಎರಡನೇ ಇನ್ನಿಂಗ್ಸ್ ತುಂಬಾ ವರ್ಷಗಳ ಕಾಲ ನೆನಪಲ್ಲಿ ಉಳಿಯೋ ಆಟ.. ಇಡೀ ದಿನ ಜೈಸ್ವಾಲ್ ಹಾಗೂ ರಾಹುಲ್ ಆ ದೈತ್ಯ ಬೌಲಿಂಗ್ ಲೈನ್​ ಅಪ್​ನ ಗೋಳಾಡಿಸಿದ್ರಲ್ಲ.. ಜೈಸ್ವಾಲ್ ಅಂತೂ ಬೌಲ್ ಮಾಡಿದ್ರೆ ಬ್ಯಾಟ್ ಮಾಡೋದು ಬಾಕಿ ಟೈಮಲ್ಲಿ ರೋಸ್ಟ್ ಮಾಡೋದು. ಅದು ಸ್ಟಾರ್ಕ್​ಗೆ.. ಆತ್ಮವಿಶ್ವಾಸ ತುಂಬಿ ತುಳುಕ್ತಾ ಇದೆ. ಪಡಿಕ್ಕಲ್ ತನಗಿರೋ ಅನುಭಕ್ಕೆ ತಕ್ಕಂತೆ ಕೊಡುಗೆ ಕೊಟ್ಟ ಅನಿಸ್ತು..

ಬಟ್ ಗರ್ಜಿಸುವಂತೆ ಮಾಡಿದ್ದು ಕೊಹ್ಲಿ ಶತಕ. ಕೊಹ್ಲಿ ಮತ್ತು ಆಸ್ಟ್ರೇಲಿಯಾ ಚಕಾಮಕಿ ತುಂಬಾ ಹಳೆಯದ್ದು.. ಎಂತದ್ದೇ ಅಸ್ತ್ರ ಹೂಡಿದ್ರೂ ಕೊಹ್ಲಿ ವಿಕೆಟ್ ಪಡೆಯೋಕೆ ಆಗಲೆ ಇಲ್ಲ. ಇನ್ನೊಂದು ಕಡೆಯಲ್ಲಿ ನಿತೀಶ್ ರೆಡ್ಡಿಯ ಆಟ.. ಮಕ ಮೂತಿ ನೋಡದೇ ಚಚ್ಚೋದು ಅಂತಾರಲ್ಲ.. ಅದನ್ನೇ ಮಾಡಿದ್ದು.. ಡಿಕ್ಲೇರ್ ಹೊತ್ತಿಗೆ ಆಸ್ಟ್ರೇಲಿಯಾ ಮುಂದೆ ದೊಡ್ಡ ಬೆಟ್ಟ.

ಬೆಟ್ಟ ಹತ್ತೋಕೆ ಬಂದ ಮೊದಲ ನಾಲ್ವರು ಡಬಲ್ ಡಿಜಿಟ್ ಚೆಂದವನ್ನೂ ಕಾಣೋಕೆ ಆಗಲಿಲ್ಲ. ಬುಮ್ರಾ ಸಿರಾಜ್ ಅಬ್ಬರವೇ ಹಾಗಿತ್ತು. ಇಲ್ಲಿ ತನಕ ಆಸ್ಟ್ರೇಲಿಯಾ ಪರ್ತ್ ಸ್ಟೇಡಿಯಂನಲ್ಲಿ ಸೋಲೇ ಕಂಡಿರ್ಲಿಲ್ಲವಂತೆ. ಅದನ್ನೂ ಕೂಡ ಮನೆಗೆ ಬಂದ ನೆಂಟರು ಉಡುಗೊರೆ ಕೊಟ್ಟಿದಾರೆ.

ಈ ಸಮಯದಲ್ಲಿ ಗಂಭೀರ್ ಕೂಡ ನೆನಪಾಗಲೇ ಬೇಕು. ಸೋತಾಗ ಮಾತ್ರ ನೆನಪಿಸಿಕೊಂಡ್ರೆ ಸರಿ ಅನಿಸೋದೇ ಇಲ್ಲ..

ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ ❤️🇮🇳

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಉಪಯುಕ್ತ ಮಾಹಿತಿ

    ಬೆಳಗಿನ ತಿಂಡಿ ಸ್ಕಿಪ್ ಮಾಡುತ್ತಿದ್ದೀರಾ; ಹಾಗಾದರೆ ಈ ಎಲ್ಲಾ ಕಾಯಿಲೆಗಳು ಬರಬಹುದು ಎಚ್ಚರ!

    ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

  • ಸಂಬಂಧ

    ಮೋದಿ ವಿಚಾರದಲ್ಲಿ ಶುರುವಾದ ವಾದದಿಂದ,ಇವರ ಮದುವೆಯೇ ರದ್ದಾಯಿತು..!

    ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.

  • ಉಪಯುಕ್ತ ಮಾಹಿತಿ

    1 ಕಿಲೋ ಮೀಟರ್ ರೈಲು ಹಳಿಯನ್ನ ಜೋಡಿಸಲು ಬೇಕಾಗುವ ಹಣ ಎಷ್ಟು. ನೋಡಿ ರೈಲು ಹಳಿಯ ಸೀಕ್ರೆಟ್.

    ನಮ್ಮ ದೇಶದಲ್ಲಿ ತುಂಬಾ ಜನರು ರೈಲು ಪ್ರಯಾಣವನ್ನ ಮಾಡೇ ಇರುತ್ತಾರೆ, ರೈಲು ಪ್ರಯಾಣ ಕೆಲವರಿಗೆ ಕಡಿಮೆ ಖರ್ಚಿನದ್ದು ಆಗಿದ್ದರೆ ಇನ್ನು ಕೆಲವರಿಗೆ ಅದೂ ಅವಿಸ್ಮರಣೀಯ ಅನುಭವವನ್ನ ಕೊಡುತ್ತದೆ. ಇನ್ನು ಕೆಲವರು ರೈಲಿನಲ್ಲಿ ಪ್ರಯಾಣ ಮಾಡದೇ ಇದ್ದರೂ ಕೂಡ ರೈಲನ್ನಾದರೂ ನೋಡಿರುತ್ತಾರೆ. ಇನ್ನು ಜನರಿಗೆ ರೈಲುಗಳ ಬಗ್ಗೆ ಮತ್ತು ರೈಲು ಚಾಲಕರ ಬಗ್ಗೆ ಮಾಹಿತಿ ಎಲ್ಲರಿಗೂ ತಿಳಿದಿರುತ್ತದೆ ಆದರೆ ರೈಲು ಹಳಿಗಳ ಬಗ್ಗೆ ಮತ್ತು ಅದನ್ನ ಮಾಡಲು ತಗುಲುವ ಖರ್ಚಿನ ಮತ್ತು ಒಂದು ಕಿಲೋ ಮೀಟರ್ ರೈಲು ಹಳಿಯನ್ನ…

  • ಸುದ್ದಿ

    ನೀವ್ ನಂಬಲ್ಲ…ಈ ರಾಜ್ಯದಲ್ಲಿ ಅತ್ಯಾಚಾರ ಮಾಡೋದು ತಪ್ಪೇ ಅಲ್ವಂತೆ..!ಅತ್ಯಾಚಾರ ಮಾಡಿದವನಿಗೆ ಏನ್ ಮಾಡ್ತಾರೆ ಎಂದು ತಿಳಿದ್ರೆ ನೀವ್ ಶಾಕ್ ಆಗ್ತೀರಾ…

    ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.