ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ.
ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಚೀನಾ ನಡುವಿನ ಹೋರಾಟ ಕೊನೆಯ ಕ್ಷಣದವರೆಗೆ ರೋಚಕತೆಯಿಂದ ಕೂಡಿತ್ತು. ನಾಲ್ಕು ಸೆಟ್ಗಳ ಅಂತ್ಯಕ್ಕೆ ಎರಡೂ ತಂಡಗಳು 4-4 ಸಮಬಲ ಸಾಧಿಸಿದ್ದವು. ಬಳಿಕ ನಡೆದ ಶೂಟ್-ಆಫ್ನಲ್ಲಿ ಭಾರತೀಯ ವನಿತೆಯರು ಅದ್ಭುತ ಆತ್ಮವಿಶ್ವಾಸ ತೋರಿಸಿ 28-26 ಅಂತರದಿಂದ ಗೆದ್ದು 5-4 ಅಂತರದಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು.
ಈ ಚಿನ್ನದ ಸಾಧನೆ ಇನ್ನಷ್ಟು ವಿಶೇಷವಾಗಲು ಪ್ರಮುಖ ಕಾರಣವೆಂದರೆ, ಸೆಮಿಫೈನಲ್ನಲ್ಲಿ ಭಾರತ 10 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ಬಲಿಷ್ಠ ದಕ್ಷಿಣ ಕೊರಿಯಾವನ್ನೇ 5-1 ಅಂತರದಲ್ಲಿ ಸೋಲಿಸಿತ್ತು. ಇದು ಭಾರತೀಯ ಆರ್ಚರಿಯ ದೊಡ್ಡ ಸಾಧನೆಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ.
ತಂಡದ ಹಿರಿಯ ಆಟಗಾರ್ತಿ ದೀಪಿಕಾ ಕುಮಾರಿ ಒತ್ತಡದ ಕ್ಷಣಗಳಲ್ಲಿ ಅದ್ಭುತ ನಾಯಕತ್ವ ಪ್ರದರ್ಶಿಸಿದರು. ನಿರ್ಣಾಯಕ ಶೂಟ್-ಆಫ್ನಲ್ಲಿ ಭಾರತಕ್ಕೆ ಅಗತ್ಯವಿದ್ದ ಪ್ರಮುಖ ಶಾಟ್ ಅನ್ನು ಅವರು ಯಶಸ್ವಿಯಾಗಿ ಹೊಡೆದು ತಂಡಕ್ಕೆ ಚಿನ್ನ ತಂದುಕೊಟ್ಟರು. ಈ ಮೂಲಕ ದೀಪಿಕಾ ತಮ್ಮ ಕರಿಯರ್ನ ಏಳನೇ ವಿಶ್ವಕಪ್ ತಂಡ ಚಿನ್ನದ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ.
17 ವರ್ಷದ ಯುವ ಆರ್ಚರ್ ಕುಂಕುಮ್ ಮಹೋಡ್ ಈ ಟೂರ್ನಿಯ ಹೊಸ ಸೆನ್ಸೇಶನ್ ಆಗಿ ಹೊರಹೊಮ್ಮಿದ್ದಾರೆ. ವಿಶ್ವಕಪ್ ಮಟ್ಟದ ಕೆಲವೇ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರೂ ಅವರು ಭಯವಿಲ್ಲದೆ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಭಾರತೀಯ ಮಹಿಳಾ ರಿಕರ್ವ್ ತಂಡಕ್ಕೆ ಇದು 2021ರ ನಂತರದ ಮೊದಲ ವಿಶ್ವಕಪ್ ಚಿನ್ನದ ಪದಕವಾಗಿದೆ. 2023ರಲ್ಲಿ ಪ್ಯಾರಿಸ್ ಹಂತದಲ್ಲಿ ಭಾರತ ಪದಕ ಗೆದ್ದಿದ್ದರೂ, ಈಗ ಮತ್ತೆ ಚಿನ್ನ ಗೆದ್ದು ವಿಶ್ವ ವೇದಿಕೆಯಲ್ಲಿ ಭಾರತದ ಬಲವನ್ನು ತೋರಿಸಿದೆ.

ಶಾಂಘೈನಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ನಲ್ಲಿ ಭಾರತ ಈಗಾಗಲೇ ಎರಡು ಪದಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ಪುರುಷರ ಕಾಂಪೌಂಡ್ ವಿಭಾಗದಲ್ಲಿ ಸಾಹಿಲ್ ಜಾಧವ್ ಕಂಚಿನ ಪದಕ ಗೆದ್ದಿದ್ದರು.
ಈಗ ದೀಪಿಕಾ, ಅಂಕಿತಾ ಮತ್ತು ಕುಂಕುಮ್ ಅವರ ಚಿನ್ನದ ಸಾಧನೆ ಭಾರತೀಯ ಕ್ರೀಡಾಭಿಮಾನಿಗಳ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಈ ಗೆಲುವು ಭಾರತಕ್ಕೆ ವಿಶೇಷವಾಗಿದ್ದು, ಸೆಮಿಫೈನಲ್ನಲ್ಲಿ 10 ಬಾರಿ ಒಲಿಂಪಿಕ್ ಚಾಂಪಿಯನ್ ಆಗಿರುವ ದಕ್ಷಿಣ ಕೊರಿಯಾವನ್ನು ಸೋಲಿಸಿ ಭಾರತ ಫೈನಲ್ಗೆ ಪ್ರವೇಶಿಸಿತ್ತು. 2021ರ ಬಳಿಕ ಮಹಿಳಾ ರಿಕರ್ವ್ ತಂಡಕ್ಕೆ ಇದು ಮೊದಲ ವಿಶ್ವಕಪ್ ಚಿನ್ನದ ಪದಕವಾಗಿದೆ.
2010ರಿಂದಲೇ ವಿಶ್ವಕಪ್ನಲ್ಲಿ ಭಾರತದ ಪ್ರಮುಖ ಬಿಲ್ಲುಗಾರ್ತಿಯಾಗಿ ಗುರುತಿಸಿಕೊಂಡಿರುವ ದೀಪಿಕಾ ಕುಮಾರಿ ಇದೀಗ ತಮ ಖಾತೆಗೆ ಏಳನೇ ವಿಶ್ವಕಪ್ ತಂಡ ಚಿನ್ನದ ಪದಕ ಸೇರಿಸಿಕೊಂಡಿದ್ದಾರೆ. 2021ರಲ್ಲಿ ಗ್ವಾಟೆಮಾಲಾ ಸಿಟಿ ಮತ್ತು ಪ್ಯಾರಿಸ್ನಲ್ಲಿ ಗೆದ್ದ ತಂಡದಲ್ಲೂ ಅವರು ಭಾಗಿಯಾಗಿದ್ದರು.
ಶಾಂಘೈನಲ್ಲಿ ಭಾರತದ ಪದಕ ಸಂಖ್ಯೆ ಈಗ ಎರಡುಕ್ಕೇರಿದೆ. ಇದಕ್ಕೂ ಮುನ್ನ ಕಾಂಪೌಂಡ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾರತದ ಖಾತೆ ತೆರೆಯಿದ್ದರು.ಇನ್ನೊಂದೆಡೆ,ಸಿಮ್ರನ್ಜೀತ್ ಕೌರ್ ಮಹಿಳಾ ರಿಕರ್ವ್ ವೈಯಕ್ತಿಕ ವಿಭಾಗದ ಸೆಮಿಫೈನಲ್ಗೆ ಪ್ರವೇಶಿಸಿದ್ದು, ಜಯ ಸಾಧಿಸಿದರೆ ತಮ್ಮ ಮೊದಲ ವಿಶ್ವಕಪ್ ವೈಯಕ್ತಿಕ ಪದಕ ಖಚಿತಪಡಿಸಿಕೊಳ್ಳಲಿದ್ದಾರೆ.
ಪೂರ್ಣಕಾಲಿಕ ರಾಷ್ಟ್ರೀಯ ಕೋಚ್ ಇಲ್ಲದ ಪರಿಸ್ಥಿತಿಯಲ್ಲೂ ದೀಪಿಕಾ ಕುಮಾರಿ ತಂಡವನ್ನು ಮುನ್ನಡೆಸಿದ ರೀತಿ ಗಮನಸೆಳೆಯಿತು. ಬ್ರೇಕ್ಗಳ ವೇಳೆ ಹಾಗೂ ಬದಲಾವಣೆ ಸಂದರ್ಭಗಳಲ್ಲಿ ಅವರು ಸಹ ಆಟಗಾರ್ತಿಯರಿಗೆ ಧೈರ್ಯ ತುಂಬುತ್ತಾ ತಂಡದ ಆತ್ಮವಿಶ್ವಾಸ ಹೆಚ್ಚಿಸಿದರು.
ಫೈನಲ್ ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿತು. ಮೊದಲ ಸೆಟ್ನಲ್ಲಿ 54-53 ಅಂತರದಿಂದ ಗೆದ್ದ ಭಾರತಕ್ಕೆ ದೀಪಿಕಾ ಅವರ ನಿರಂತರ 10 ಅಂಕಗಳ ಶಾಟ್ಗಳು ಬಲವಾಯಿತು. ಆದರೆ ಎರಡನೇ ಸೆಟ್ನಲ್ಲಿ ಚೀನಾ ಬಲಿಷ್ಠ ಪ್ರದರ್ಶನ ನೀಡಿ 55-52 ಅಂತರದಿಂದ ಗೆದ್ದು 2-2 ಸಮಬಲ ಸಾಧಿಸಿತು. ಈ ಸೆಟ್ನಲ್ಲಿ ದೀಪಿಕಾ ಕೊನೆಯ ಶಾಟ್ನಲ್ಲಿ 7 ಅಂಕ ಮಾತ್ರ ಪಡೆದಿದ್ದರು.
ಮೂರನೇ ಸೆಟ್ನಲ್ಲಿ ಚೀನಾ 57-56 ಅಂತರದಿಂದ ಗೆದ್ದು 4-2 ಮುನ್ನಡೆ ಪಡೆದಿತು. ನಾಲ್ಕನೇ ಸೆಟ್ನಲ್ಲಿ ಭಾರತ 54 ಅಂಕಗಳಿಗೆ ಸೀಮಿತವಾದಾಗ ಚೀನಾಗೆ ಗೆಲುವಿಗೆ ಕೇವಲ ಒಂದು 9 ಅಂಕದ ಶಾಟ್ ಅಗತ್ಯವಿತ್ತು. ಆದರೆ ಯುವ ಆಟಗಾರ್ತಿ ಯು ಕ್ವಿ 8 ಅಂಕ ಮಾತ್ರ ಪಡೆದ ಕಾರಣ ಪಂದ್ಯ ಶೂಟ್ಆಫ್ಗೆ ತಲುಪಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
Leave a reply
You must be logged in to post a comment.