ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ 60 ಟನ್ಗಳಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಇದು ಕಳೆದ ವರ್ಷದಿಗಿಂತ ಸುಮಾರು 10% ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಆಮದು ಸುಂಕ ಹೆಚ್ಚಳವೇ ಇದರ ಪ್ರಮುಖ ಕಾರಣ ಎಂದು ತಜ್ಞರು ಹೇಳಿದ್ದಾರೆ.
ಭಾರತವು ವಿಶ್ವದಲ್ಲೇ ಎರಡನೇ ಅತಿ ದೊಡ್ಡ ಚಿನ್ನ ಬಳಕೆದಾರ ರಾಷ್ಟ್ರವಾಗಿದೆ. ದೇಶದಲ್ಲಿ ಬಳಕೆಯಾಗುವ ಬಹುತೇಕ ಚಿನ್ನವನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಕಳೆದ ಹಣಕಾಸು ವರ್ಷದಲ್ಲಿ ಭಾರತವು ಸುಮಾರು 720 ಟನ್ ಚಿನ್ನವನ್ನು ಆಮದು ಮಾಡಿಕೊಂಡಿದ್ದು, ಇದಕ್ಕಾಗಿ ಸುಮಾರು 72 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ವೆಚ್ಚವಾಗಿದೆ. ಈ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರೂಪಾಯಿ ಮೌಲ್ಯದ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಸುಂಕ ಹೆಚ್ಚಿಸುವ ನಿರ್ಧಾರ ಕೈಗೊಂಡಿದೆ.
ಚಿನ್ನದ ಬೆಲೆ ಈಗಾಗಲೇ ದಾಖಲೆಯ ಮಟ್ಟ ತಲುಪಿರುವ ಸಂದರ್ಭದಲ್ಲಿ ಆಮದು ಸುಂಕ ಏರಿಕೆಯ ಪರಿಣಾಮ ಗ್ರಾಹಕರಿಗೆ ಮತ್ತಷ್ಟು ಬೆಲೆಭಾರವಾಗಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಚಿನ್ನ ಖರೀದಿಯನ್ನು ಮುಂದೂಡುತ್ತಿದ್ದಾರೆ. ವಿಶೇಷವಾಗಿ ಮದುವೆ ಹಾಗೂ ಹಬ್ಬದ ಸೀಸನ್ ಹೊರತಾಗಿ ಜುವೆಲ್ಲರಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.
ಕ್ರಿಸಿಲ್ ರೇಟಿಂಗ್ಸ್ ವರದಿ ಪ್ರಕಾರ, ಸಂಘಟಿತ ಜುವೆಲ್ಲರಿ ವಲಯದಲ್ಲಿ 2026-27 ಹಣಕಾಸು ವರ್ಷದಲ್ಲಿ ಮಾರಾಟದ ಪ್ರಮಾಣವು 13%ರಿಂದ 15%ರವರೆಗೆ ಕುಸಿಯುವ ಸಾಧ್ಯತೆ ಇದೆ. ಇದು ಕಳೆದ ಹತ್ತು ವರ್ಷಗಳಲ್ಲೇ ಅತೀ ಕಡಿಮೆ ಮಟ್ಟವಾಗಬಹುದು ಎಂದು ಎಚ್ಚರಿಸಲಾಗಿದೆ. ಆದರೆ ಚಿನ್ನದ ಬೆಲೆ ಗಗನಕ್ಕೇರಿರುವ ಕಾರಣ, ಮಾರಾಟ ಪ್ರಮಾಣ ಕಡಿಮೆಯಾದರೂ ಒಟ್ಟಾರೆ ಆದಾಯವು 20%ರಿಂದ 25%ರವರೆಗೆ ಏರಿಕೆಯಾಗಬಹುದು ಎಂದು ವರದಿ ತಿಳಿಸಿದೆ.
ಚಿನ್ನದ ಬೆಲೆ ಏರಿಕೆಯಿಂದ ಜನರು ಈಗ ಕಡಿಮೆ ಕ್ಯಾರೆಟ್ನ ಆಭರಣಗಳು, ಲೈಟ್ವೇಟ್ ಜುವೆಲ್ಲರಿ ಮತ್ತು ಸ್ಟಡಡ್ ಆಭರಣಗಳತ್ತ ಮುಖ ಮಾಡುತ್ತಿದ್ದಾರೆ. ಕೆಲವರು ಹೂಡಿಕೆ ಉದ್ದೇಶಕ್ಕಾಗಿ ಚಿನ್ನದ ಬಾರ್ ಹಾಗೂ ನಾಣ್ಯಗಳನ್ನು ಖರೀದಿಸುತ್ತಿದ್ದರೂ, ಒಟ್ಟಾರೆ ಬೇಡಿಕೆಯಲ್ಲಿ ಕುಸಿತ ಕಂಡುಬರುತ್ತಿದೆ.

ಇನ್ನೊಂದೆಡೆ, ಸುಂಕ ಹೆಚ್ಚಳದಿಂದ ಅಕ್ರಮ ಚಿನ್ನ ಸಾಗಣೆ ಮತ್ತೆ ಹೆಚ್ಚಾಗುವ ಭೀತಿ ಕೂಡ ಎದುರಾಗಿದೆ. WGC ಪ್ರಕಾರ, ಹಿಂದಿನ ವರ್ಷಗಳಲ್ಲಿಯೂ ಆಮದು ಸುಂಕ ಹೆಚ್ಚಿಸಿದಾಗ ಅಕ್ರಮ ಚಿನ್ನದ ಆಮದು ಗಣನೀಯವಾಗಿ ಏರಿಕೆಯಾಗಿದೆ. 2024ರಲ್ಲಿ ಸುಂಕ ಕಡಿತಗೊಂಡ ಬಳಿಕ ಕಳ್ಳಸಾಗಣೆ ಇಳಿಕೆಯಾಗಿದ್ದರೂ, ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸುವ ಸಾಧ್ಯತೆ ಇದೆ ಎಂದು ವರದಿಗಳು ಸೂಚಿಸುತ್ತಿವೆ.
ಒಟ್ಟಿನಲ್ಲಿ, ಸರ್ಕಾರದ ಆಮದು ಸುಂಕ ಹೆಚ್ಚಳ ಕ್ರಮದಿಂದ ದೇಶದ ವಿದೇಶಿ ವಿನಿಮಯ ಉಳಿಸುವ ಉದ್ದೇಶವಿದ್ದರೂ, ಇದರ ನೇರ ಪರಿಣಾಮ ಚಿನ್ನದ ವ್ಯಾಪಾರ ಮತ್ತು ಗ್ರಾಹಕರ ಖರೀದಿ ಮನೋಭಾವದ ಮೇಲೆ ಬೀಳುತ್ತಿದೆ. ಮುಂದಿನ ತಿಂಗಳುಗಳಲ್ಲಿ ಚಿನ್ನದ ಬೆಲೆ, ಮದುವೆ ಸೀಸನ್ ಮತ್ತು ಮಾರುಕಟ್ಟೆ ಪರಿಸ್ಥಿತಿ ಯಾವ ರೀತಿಯಲ್ಲಿ ಬದಲಾಗುತ್ತದೆಯೋ ಅದರ ಮೇಲೆ ಬೇಡಿಕೆಯ ದಿಕ್ಕು ನಿರ್ಧಾರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…